ಬೆಂಗಳೂರಿನಲ್ಲಿ ಡಿಸೆಂಬರ್-೨೮ ರಿಂದ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ.
ಗಂಗಾವತಿ: ಇದೇ ತಿಂಗಳ ಡಿಸೆಂಬರ್ ೨೮ ಹಾಗೂ ೨೯ ರಂದು ಬೆಂಗಳೂರಿನ ಬಾಗಲೂರಿನ ವಿಜಯ್ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ನಾಲ್ಕನೇ ರಾಜ್ಯ ಸಮ್ಮೇಳನ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಪ್ಪಳ ಜಿಲ್ಲೆಯ ಜಿಲ್ಲಾಧ್ಯಕ್ಷ ಸಿದ್ದಲಿಂಗೇಶ್ವರ ಪೂಲಭಾವಿ ಗೌರವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ದೊಡ್ಡಬಳ್ಳಾಪುರ, ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ…
