ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್

ಪೌರಾಣಿಕ ನಾಟಕ ಕುರುಕ್ಷೇತ್ರದಲ್ಲಿ ಬರುವ ಒಂದು ವಿಲಕ್ಷಣ ಪಾತ್ರ ಶಕುನಿ. ಈ ನಾಟಕದಲ್ಲಿ ಎಲ್ಲಾ ಪಾತ್ರಗಳಿಗೂ ರಂಗಗೀತೆಗಳನ್ನು ಅಳವಡಿಸಿ ರಂಗ ನಿರ್ದೇಶಕರು ಪಾತ್ರಗಳನ್ನು, ಪಾತ್ರದಾರಿ ಹೊಸಬರಾಗಿದ್ದರೂ ಹೇಗೋ ಸರಿದೂಗಿಸಿ ಹಾಡಿನ ಮರೆಯಲ್ಲಿ ಗೆರೆ ದಾಟಿಸಿಬಿಡುತ್ತಾರೆ. ಆದರೆ ಶಕುನಿ ಪಾತ್ರಕ್ಕೆ ವಿಶಿಷ್ಟತೆ ಇದೆ. ಹಾಡು ಅಷ್ಟಿಲ್ಲ. ಆದರೆ ಈ ಪಾತ್ರಕ್ಕೆ ಅಭಿನಯವೇ ಪ್ರಧಾನ. ಅಂತೆಯೇ ಮಾತು, ತಂತ್ರ, ಕುತಂತ್ರ ಹೆಣೆಯುತ್ತಲೇ ಶತ್ರು ದುರ್ಯೋಧನನ ಜೊತೆಗಿದ್ದೆ ಬೆನ್ನಿಗೆ ಗುನ್ನಾ ಇಡುವ ವಿಲನ್ ಕ್ಯಾರಕ್ಟರ್. ತನ್ನ ಸಹೋದರರ ಸಾವಿಗೆ ಕಾರಣನಾದ ಪ್ರಬಲ…

Read More
ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನ ವಿಜಯನಗರ ಬಡಾವಣೆ ಪಾರ್ಕ್ ರಂಗವೇದಿಕೆಯಲ್ಲಿ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ

ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹೆಚ್.ಜಿ. ಗಂಗಾಧರ್ ಸಾರಥ್ಯದಲ್ಲಿ ಜನವರಿ-೨೬ ಭಾನುವಾರ ಸಂಜೆ ೪.೦೦ ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ವಿಜಯನಗರ ಬಡಾವಣೆ, ೨ನೇ ಹಂತ, ಬೇಲೂರು ರಸ್ತೆ ಪಾರ್ಕ್ನ ಬಯಲು ರಂಗವೇದಿಕೆಯಲ್ಲಿ ಏರ್ಪಡಿಸಿದೆ. ಹಾಸನ ವಿಧಾನಸಬಾ ಕ್ಷೇತ್ರದ ಶಾಸಕರು ಸ್ವರೂಪ್…

Read More
ಗಾನಯೋಗಿ ಪದ್ಮಭೂಷಣ ಶ್ರೀ ಪುಟ್ಟರಾಜ ಗವಾಯಿಗಳವರ ೧೧೧ನೆಯ ಜಯಂತೋತ್ಸವ. ಸಾಹಿತ್ಯ ಸಂಗೀತ ಒಂದೇ ನಾಣ್ಯದ ಎರಡು ಮುಖಗಳು: ಕಾಶಿಮ್ ಅಲಿ ಮುದ್ದಾಬಳ್ಳಿ.

ಗಾನಯೋಗಿ ಪದ್ಮಭೂಷಣ ಶ್ರೀ ಪುಟ್ಟರಾಜ ಗವಾಯಿಗಳವರ ೧೧೧ನೆಯ ಜಯಂತೋತ್ಸವ. ಸಾಹಿತ್ಯ ಸಂಗೀತ ಒಂದೇ ನಾಣ್ಯದ ಎರಡು ಮುಖಗಳು: ಕಾಶಿಮ್ ಅಲಿ ಮುದ್ದಾಬಳ್ಳಿ.

ಗಂಗಾವತಿ: ಸಾಹಿತ್ಯ, ಸಂಗೀತ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು ಕನ್ನಡ ಸಾಹಿತ್ಯ ಸಮ್ಮೇಳನದಂಥ ಕಾರ್ಯಕ್ರಮಗಳಲ್ಲಿ ಸಂಗೀತ ಕಲಾವಿದರನ್ನು ನಿರ್ಲಕ್ಷಿಸುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಸಾಹಿತ್ಯಕ್ಕೆ ಶಕ್ತಿ ತುಂಬುವುದೇ ಸಂಗೀತ. ಅಂತಹ ಅದ್ಭುತ ಶಕ್ತಿಯನ್ನು ಹೊಂದಿದ ಸಂಗೀತ ಪ್ರತಿಯೊಬ್ಬರ ಮನೆಯು ಒಬ್ಬ ಸಂಗೀತಗಾರನ್ನು ಹೊಂದಬೇಕು. ಯಾವುದೇ ಅಂಗವಿಕಲಾಂಗ ಅನಾಥ ಮಕ್ಕಳು ಇದ್ದಲ್ಲಿ ಅಂತಹ ಮಕ್ಕಳನ್ನು ಗದುಗಿನ ವೀರೇಶ್ವರ ಪುಣ್ಯಶ್ರಮಕ್ಕೆ ಸೇರ್ಪಡೆಗೊಳಿಸುವುದರ ಮೂಲಕ ಸ್ವಾವಲಂಬಿ ಬದುಕಿಗಾಗಿ ಸಮಾಜ ಮುಖಿವಾಗಿ ಜೀವಿಸಲು ಅವಕಾಶ ಕಲ್ಪಿಸಬೇಕೆಂದು ಗಾನಯೋಗಿ ಶ್ರೀಗುರು ಪಂಚಾಕ್ಷರಿ ಸಂಗೀತ ಮಹಾವಿದ್ಯಾಲಯದ…

Read More
ವಡ್ಡರಹಟ್ಟಿಯ ಮುದುಕಪ್ಪ ಗಡ್ಡಿ ಸಹೋದರರಿಂದ ಚಿಕ್ಕಬೆಣಕಲ್‌ನ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಕೆ.ಜಿ ಬೆಳ್ಳಿ ಪೇಟ ಸಮರ್ಪಣೆ.

ವಡ್ಡರಹಟ್ಟಿಯ ಮುದುಕಪ್ಪ ಗಡ್ಡಿ ಸಹೋದರರಿಂದ ಚಿಕ್ಕಬೆಣಕಲ್‌ನ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಕೆ.ಜಿ ಬೆಳ್ಳಿ ಪೇಟ ಸಮರ್ಪಣೆ.

ಗಂಗಾವತಿ: ತಾಲೂಕಿನ ವಡ್ಡರಹಟ್ಟಿ ಗ್ರಾಮದ ಹಿರಿಯರಾದ ಮುದುಕಪ್ಪ ಗಡ್ಡಿ ಸಹೋದರರು ಮತ್ತು ಕುಟುಂಬದ ಸದಸ್ಯರು ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಆರಾಧ್ಯ ದೈವ ಶ್ರೀ ಬೆಟ್ಟದ ಲಿಂಗೇಶ್ವರ ದೇವರಿಗೆ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಒಂದು ಕೆಜಿ ಬೆಳ್ಳಿಯ ಪೇಟವನ್ನು ಭಕ್ತಿ ಪೂರ್ವಕವಾಗಿ ಸಮರ್ಪಿಸಿದರು. ಅವರ ಕುಟುಂಬವು ವಂಶಪಾರಂಪರ್ಯವಾಗಿ ಶ್ರೀ ಬೆಟ್ಟದಲಿಂಗೇಶ್ವರ ದೇವರಿಗೆ ಜಾತ್ರೆಯ ಸಮಯದಲ್ಲಿ ಪಾದಯಾತ್ರೆ ಮಾಡುತ್ತಾ ಬಂದಿದ್ದು, ಅದರಂತೆ ಈ ವರ್ಷದ ಮಾರ್ಚ್-೨೨ ರಂದು ನಡೆಯುವ ಶ್ರೀ ಬೆಟ್ಟದ ಲಿಂಗೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಪಾದಯಾತ್ರೆ ಮೂಲಕ…

Read More
ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಗಂಗಾವತಿಯ ರೇಡಿಯೋದಿಂದ ಮಿಷನ್ ಎಸ್.ಎಸ್.ಎಲ್.ಸಿ-೨೫ ರಾಜ್ಯವ್ಯಾಪಿ ಪ್ರಸಾರ ಶ್ಲಾಘನೀಯ : ಗಾಲಿ ಜನಾರ್ಧನರೆಡ್ಡಿ

ಪರೀಕ್ಷೆಯು ಭಯ ನಿರ್ಮಿಸುವುದಕ್ಕಲ್ಲ, ನಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲು ಇರುವ ಅವಕಾಶ ಗಂಗಾವತಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ತೆಗೆದುಕೊಂಡು ನಮ್ಮ ತಾಲೂಕಿಗೆ ಮತ್ತು ತಂದೆ-ತಾಯಿಗಳಿಗೆ ಹಾಗೂ ಗುರುಗಳಿಗೆ ಕೀರ್ತಿ ತರಲು, ಒಳ್ಳೆಯ ಪರಿಶ್ರಮದಿಂದ ಅಭ್ಯಾಸ ಮಾಡಬೇಕು. ಪರೀಕ್ಷೆ ಎನ್ನುವುದು ಭಯದ ವಾತಾವರಣವನ್ನು ನಿರ್ಮಿಸುವುದಲ್ಲ, ನಿಮ್ಮ ಆಂತರ್ಯದಲ್ಲಿರುವ ಶಕ್ತಿಯನ್ನು ಹೊರಹಾಕಲಿಕ್ಕೆ ಇರುವ ಒಂದು ಸುವರ್ಣಾವಕಾಶ ಎಂದು ಶಾಸಕರಾದ ಗಾಲಿ ಜನಾರ್ಧನರೆಡ್ಡಿಯವರು ಹೇಳಿದರು. ಅವರು ಇಂದು ಮಾರ್ಚ್-೮ ಶನಿವಾರ, ಗಂಗಾವತಿ ಗ್ರಾಮೀಣ ಭಾರತಿ ೯೦.೪ ಎಫ್.ಎಂ. ಸಮುದಾಯ…

Read More
ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.

ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.

ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 10ರಿಂದ ಮೂರು ದಿನಗಳ ಕಾಲ ಆರಾಧನಾ ಮಹೋತ್ಸವ ಜರುಗಲಿದೆ. ಈ ಮಹೋತ್ಸವವು ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 354ನೇ ಆರಾಧನೆಗೆ ಸಮರ್ಪಿತವಾಗಿದೆ. ಶ್ರೀಮಠದ ವ್ಯವಸ್ಥಾಪಕ ಸಾಮವೇದಿ ಗುರುರಾಜ ಆಚಾರ್ ಹಾಗೂ ಪ್ರಧಾನ ಅರ್ಚಕ ಭೀಮಸೇನ್ ಆಚಾರ್ ಮಾಧ್ಯಮದೊಂದಿಗೆ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಅವರು ಮಂತ್ರಾಲಯದ ಪೀಠಾಧಿಕಾರಿಗಳಾದ ಶ್ರೀ ಶುಭೋದಯ ಶ್ರೀ ಸುಬುಧ್ಯೇಂದ್ರ ತೀರ್ಥ ಶ್ರೀ ಪಾದಂಗಳವರ ಅಜ್ಞಾನುಸಾರವಾಗಿ ಶ್ರೀ ರಾಘವೇಂದ್ರ…

Read More
ಶ್ರೀ ಶಂಕರಮಠದ ಶಾರದಾಂಬೆಗೆ ಏಳನೇ ವರ್ಷದ ಸಂಭ್ರಮ. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ಬದ್ಧ: ನಾರಾಯಣರಾವ್ ವೈದ್ಯ.

ಶ್ರೀ ಶಂಕರಮಠದ ಶಾರದಾಂಬೆಗೆ ಏಳನೇ ವರ್ಷದ ಸಂಭ್ರಮ. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯಕ್ಕೆ ಬದ್ಧ: ನಾರಾಯಣರಾವ್ ವೈದ್ಯ.

ಗಂಗಾವತಿ: ನಗರದ ಶಾರದಾ ನಗರದಲ್ಲಿರುವ ಶ್ರೀ ಶಂಕರಮಠ ಹಾಗೂ ಶ್ರೀ ಶಾರದಾದೇವಿಯ 7ನೇ ವರ್ಷದ ಪ್ರತಿಷ್ಠಾಪನಾ ದಿನಾಚರಣೆಯನ್ನು ಮಾರ್ಚ್-10‌ ಸೋಮವಾರದಂದು ಶ್ರದ್ಧೆ ಭಕ್ತಿಯಿಂದ ಆಚರಿಸಲಾಯಿತು. ಅಂದು ಬೆಳಿಗ್ಗೆ ಶ್ರೀ ಶಾರದಾದೇವಿ ಸೇರಿದಂತೆ ಪರಿವಾರ ದೇವರುಗಳಿಗೆ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಶಾರದ ಶಂಕರ ಭಕ್ತ ಮಂಡಳಿ, ವಿಜಯಧ್ವಜ ಭಜನಾ ಮಂಡಳಿ, ಸೌಂದರ್ಯ ಲಹರಿ ಭಗಿನಿಯರ ಬಳಗ ಸೇರಿದಂತೆ ಇತರೆ ಭಜನಾ ಮಂಡಳಿಯ ಸದಸ್ಯರುಗಳಿಂದ ಲಲಿತಾ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ, ಅಷ್ಟೋತ್ತರ ಪಾರಾಯಣ, ಭಜನೆ ಸೇರಿದಂತೆ ಇತರೆ…

Read More

ಅಖಿಲ ಕರ್ನಾಟಕ ನಾಲ್ಕನೇ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ.

ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ಸ್ಥಳೀಯ ಘಟಕದ ಸಹಕಾರದಲ್ಲಿ ನಗರದ ಶ್ರೀ ಚನ್ನಬಸವೇಶ್ವರ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಹಿರಿಯ ಸಾಹಿತಿ, ಘನ ವಿದ್ವಾಂಸರಾದ ಪ್ರಾಚಾರ್ಯ ಡಾ. ಜಾಜಿ ದೇವೇಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ೨೦೨೫ ಜನವರಿ-೧೯ ಭಾನುವಾರ ಬೆಳೆಗ್ಗೆ ೦೯ ಗಂಟೆಯಿಂದ ಸಂಜೆ ೦೭ ಗಂಟೆವರೆಗೂ ಇಡೀ ದಿನ ಸಮ್ಮೇಳನ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಸೇರಿದಂತೆ ಎರಡು ರಾಜ್ಯಮಟ್ಟದ ಕವಿಗೋಷ್ಠಿಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕೇಂದ್ರ ಸಮಿತಿಯ…

Read More
ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗಂಗಾವತಿ, ಐಎಂಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು ಹಾಗೂ ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರವನ್ನು ಜುಲೈ-೧೬ ಬುಧವಾರ, ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ರವರೆಗೆ ಗಂಗಾವತಿಯ ಶ್ರೀರಾಮನಗರದ ಎ.ಕೆ.ಆರ್.ಡಿ. ಪಿ.ಯು ಕಾಲೇಜು ಆವರಣದಲ್ಲಿ ನಡೆಸಲಾಗುವುದು. ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದಯ, ನರ ಸಂಬಂಧಿ ಕಾಯಿಲೆ, ನೇತ್ರರೋಗ, ಸ್ತನ…

Read More
ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಹಾನ್ ಕಿಡ್ಸ್ ಶಾಲೆ ಗಂಗಾವತಿ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಖಂಡ ಗಂಗಾವತಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ಮೂರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ನೇ ವಯೋಮಿತಿಯ ವಿದ್ಯಾರ್ಥಿಗಳಾದ ಶಿವರಾಜ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ 17ನೇ ವಯೋಮಿತಿಯಲ್ಲಿ ಮಹೇಶ್ 35 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾನೆ. ಹಾಗೂ ಮೀನಾಕ್ಷಿ 35 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಮುಂದೆ ನಡೆಯುವಂತಹ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮಹಾನ್ ಕಿಡ್ಸ್ ಶಾಲೆಯ ಅಧ್ಯಕ್ಷರಾದ ಶ್ರೀ ನೇತ್ರಾಜ್ ಗುರುವಿನ…

Read More