ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಡಣಾಪುರ ಮಲ್ಲಯ್ಯ ಸ್ವಾಮಿಗೆ ವಿಶೇಷ ಪುಷ್ಪ ಅಲಂಕಾರ

ಗಂಗಾವತಿ: ತಾಲೂಕಿನ ಡಣಾಪುರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರೀಶೈಲ ಮಾಲಾಧಾರಿಗಳಿಂದ 20ನೇ ವರ್ಷದ ಅನ್ನದಾಸೋಹ ಕಾರ್ಯವು ಜರುಗಿತು. ತಾಲೂಕಿನ ಡಣಾಪುರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಮಲ್ಲಿಕಾರ್ಜುನ ಸ್ವಾಮಿಗೆ ಬೆಳಗ್ಗೆಯಿಂದ ನಾ‌ನಾ ಬಗೆಯ ವಿಶೇಷ ಪೂಜಾ ಪುನಸ್ಕಾರಗಳು ಭಕ್ತಿ ಹಾಡು ಭಜನೆಗಳಿಂದ ಭಕ್ತಿಪೂರ್ವಕ ಜರುಗಿದವು. ದೇವಸ್ಥಾನದಲ್ಲಿ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಈ ವೇಳೆ ಮಲ್ಲಯ್ಯ ಮಾಲಾದಾರಿಗಳಾದ ಜೆ ಬೀಮನಗೌಡ, ಪಿ.ಪಿ.ಮಂಜುನಾಥ, ವೀರನಾಗಪ್ಪ, ಬಸವರಾಜ ವೈ, ಪಿಡ್ಡಪ್ಪ, ಮಂಜುನಾಥ ಕುಂಬಾರ, ಲಿಂಗರಾಜ ಹೂಗಾರ, ಮೃತ್ಯುಂಜಯ, ಮೌನೇಶ,…

Read More
ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರ 33ನೇ ವರ್ಧಂತೀ ಉತ್ಸವ

ಗಂಗಾವತಿ: ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಜುಲೈ-29 ಮಂಗಳವಾರ, ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು ಉತ್ಸವ ನಡೆಯಲಿದೆ. ಬೆಳಗ್ಗೆ 9 ಘಂಟೆಗೆ ಗುರುಗಳ ಪಾದುಕೆಗಳಿಗೆ ಅಭೀಷೇಕ, ಶಂಕರ ಅಷ್ಟೋತ್ತರ ಪಾರಾಯಣ ಸೇರಿದಂತೆ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಸಂಜೆ: 5.30ರಿಂದ ಭಜನೆ, ಆರತಿ ಹಾಗೂ ಮಹಾಮಂಗಳಾರತಿ ಜರುಗಲಿವೆ

Read More

ನಿರ್ಮಲಾ ತುಂಗಭದ್ರಾ ಜನಜಾಗೃತಿ ಅಭಿಯಾನ

ಡಿ.13 ಶುಕ್ರವಾರರಂದು ಗಂಗಾವತಿ ಚಾರಣ ಬಳಗ, ಪರಿಸರ ಸೇವಾ ಟ್ರಸ್ಟ್ ಹಾಗೂ ಕಿಷ್ಕಿಂದ ಯುವ ಚಾರಣ ಬಳಗ ವತಿಯಿಂದ ನಿರ್ಮಲಾ ತುಂಗಭದ್ರಾ ಅಭಿಯಾನ ಕುರಿತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಣವಾಳದಲ್ಲಿ ಪ್ರಾರ್ಥನಾ ಸಮಯದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದಡಿಯಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ನಾಡು ನುಡಿ, ಜಲಮೂಲ, ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ತ್ಯಾಜ್ಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು . ಈ ಸಮಯದಲ್ಲಿ ಶಿಕ್ಷಕರಾದ ರತ್ನಾ ಕೊಟ್ರಶೆಟ್ಟಿ, ಮೇನಕಾ, ಶರಣಪ್ಪ, ಮೈಲಾರಪ್ಪ ಬೂದಿಹಾಳ ಮತ್ತು ಅತಿಥಿ ಶಿಕ್ಷಕರು ಹಾಜರಿದ್ದರು.

Read More
ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ….

ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ….

ಗಂಗಾವತಿಯ 12 ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಕಲಿಯುಗದ ಕಾಮಧೇನು ಕಲ್ಪವೃಕ್ಷ ಮಂತ್ರಾಲಯದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳವರ 354ನೆಯ ಆರಾಧನಾ ಮಹೋತ್ಸವದ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಮಂಗಳವಾರದಂದು ಜರುಗಿತು. ಶ್ರೀಮಠದ ಆವರಣದಿಂದ ಹೊರಟ ರಥೋತ್ಸವ ಶ್ರೀ ನಗರೇಶ್ವರ ದೇವಸ್ಥಾನದವರೆಗೆ ಆಗಮಿಸಿ ಮರಳಿತು. ಈ ಸಂದರ್ಭದಲ್ಲಿ ರಾಜಮಾರ್ಗ ಉದ್ದಕ್ಕೂ ಭಕ್ತರು ಉತ್ತತ್ತಿ, ನಾಣ್ಯಗಳನ್ನು ಸಮರ್ಪಿಸಿ ಆರತಿಯನ್ನು ಬೆಳಗಿ ತಮ್ಮ ಭಕ್ತಿ ಭಾವವನ್ನು ವ್ಯಕ್ತಪಡಿಸಿದರು. ರಥೋತ್ಸವದ ರಾಜಮಾರ್ಗದ ಉದ್ದಕ್ಕೂ ವೇದ ಮಂತ್ರ ಘೋಷ, ಭಜನೆ, ನೃತ್ಯ ಗಳಿಂದ ಜನರಲ್ಲಿ…

Read More
ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ವಿದ್ಯಾರ್ಥಿಗಳ ಬದುಕು ಹಸನಾದರೆ: ಶಿಕ್ಷಕರ ಶ್ರಮ ಸಾರ್ಥಕ

ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದು. ಬಾಲ್ಯದಲ್ಲಿದ್ದಾಗ ಶಿಕ್ಷಕರು ಕಲಿಸುವ ಪ್ರತಿಯೊಂದು ಅಕ್ಷರ, ಜ್ಞಾನ, ತಿಳುವಳಿಕೆಯನ್ನು ವಿದ್ಯಾರ್ಥಿಗಳಾದವರು ಕಲಿಯಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಮಹತ್ತರ ಕೊಡುಗೆ ಕೊಡಲು ಸಾಧ್ಯವಾಗುತ್ತದೆ. ಆಗ ಕಲಿಸಿದ ಶಿಕ್ಷಕರ ಶ್ರಮವು ಸಾರ್ಥಕವಾಗುತ್ತದೆ. ವಿದ್ಯಾರ್ಥಿಗಳಾದವರು ತಮ್ಮ ಬದುಕಿನಲ್ಲಿ ಶಿಸ್ತು, ಶ್ರಮ, ತಾಳ್ಮೆಯನ್ನು ರೂಢಿಸಿಕೊಂಡು ಪರಿಶ್ರಮದಿಂದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಕಿನ್ನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀ ಶಂಭುಲಿಂಗಪ್ಪ ಹಾರೋಗೇರಿಯವರು ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು….

Read More
ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಮೇ-೨೭ ರಂದು ವೆಂಕಟಗಿರಿ ಗ್ರಾಮದ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಜಯಂತಿ ಆಚರಣೆ.

ಗಂಗಾವತಿ: ತಾಲೂಕಿನ ವೆಂಕಟಗಿರಿ ಗ್ರಾಮದ ಹಾಲಸ್ವಾಮಿ ಮಠದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದಲ್ಲಿ ಗ್ರಾಮದ ಸಮಸ್ತ ಭಕ್ತಾದಿಗಳಿಂದ ಇದೇ ಮೇ-೨೭ ರಂದು ಶ್ರೀ ಶನೇಶ್ವರ ಜಯಂತಿ ಆಚರಿಸಲಾಗುವುದು ಎಂದು ಮಠದ ಶ್ರೀ ಸದ್ಗುರು ಹಾಲಶಂಕರ ಮಹಾಸ್ವಾಮಿಗಳು ಹಾಗೂ ಭಕ್ತ ಮಂಡಳಿಯ ಪ್ರಮುಖರಾದ ಮಂಜುನಾಥ ಕುರುಗೋಡು ಅವರು ತಿಳಿಸಿದರು. ಶ್ರೀ ಶನೇಶ್ವರ ಜಯಂತಿಯ ನಿಮಿತ್ಯವಾಗಿ ಮೇ-೨೬ ಸೋಮವಾರ ದೇವಸ್ಥಾನದಲ್ಲಿ ಶ್ರೀ ಶನೇಶ್ವರ ಸ್ವಾಮಿಗೆ ಅಭಿಷೇಕ, ಹೋಮ-ಹವನ ಸೇರಿದಂತೆ ಲೋಕಕಲ್ಯಾಣಕ್ಕಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಲಿದ್ದು, ಮೇ-೨೭ ಮಂಗಳವಾರದಂದು ಶ್ರೀ…

Read More
ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳ ಸಾಧನೆ.

ಗಂಗಾವತಿ: ಸೆಪ್ಟೆಂಬರ್-೧೧ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ಗಂಗಾವತಿ ತಾಲೂಕಿನ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಸಂತಸ ವ್ಯಕ್ತಪಡಿಸಿದರು. ಕರಾಟೆ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಶಿವರಾಜ್-೩೫ ಕೆ.ಜಿ ವಿಭಾಗದಲ್ಲಿ ಪ್ರಥಮ ಮತ್ತು ಬಾಲಕಿಯರ ಪ್ರೌಢ ವಿಭಾಗದಲ್ಲಿ ಮೀನಾಕ್ಷಿ -೩೬ ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಬಾಲಕರ ಪ್ರೌಢ ವಿಭಾಗದಲ್ಲಿ…

Read More
ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ಹಿರೇಕೊಳಚಿ ಶಾಲೆಯಲ್ಲಿ ಹೈದ್ರಾಬಾದ ಕನಾ೯ಟಕ ವಿಮೋಚನಾ ದಿನಾಚರಣೆ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಕೊಳಚಿಯಲ್ಲಿ ಸೆಪ್ಟೆಂಬರ್‌-17 ರಂದು ಹೈದ್ರಾಬಾದ್ ಕರ್ನಾಟಕ ವಿಮೋಚನ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮದ ಮಾಜಿ ಅಧ್ಯಕ್ಷರು ಶ್ರೀಮತಿ ಆಲೂರು ಗಂಗಮ್ಮ ಹಾಗೂ ಗ್ರಾಮಪಂಚಾಯತಿ ಸದಸ್ಯೆ ಶ್ರೀಮತಿ ಓಬಳ್ದಾರ್ ರೇಖಾ ರವರು ನೆರವೇರಿಸಿದರು. ಜೊತೆಗೆ ಇಂದು ವಿಶ್ವಕರ್ಮ ಜಯಂತಿಯನ್ನು ಇದೇ ಸಂದಭ೯ದಲ್ಲಿ ಪೂಜಾ.ಕಾರ್ಯಕ್ರಮದ ಮೂಲಕ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಮುಖ್ಯ ಗುರುಗಳು ಶ್ರೀ ಮಧುನಾಯ್ಕ ಎಲ್ ರವರು ವಹಿಸಿದ್ದರು….

Read More
ಚಿಕ್ಕಮಗಳೂರು ಕನ್ನಡ ಭವನದಲ್ಲಿ  ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ಜುಲೈ 27, 2025ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಜ್ಯಮಟ್ಟದ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕವು ಸಂಯುಕ್ತವಾಗಿ ಆಯೋಜಿಸಿವೆ. ರಾಜ್ಯ ಸಂಘವು ಪ್ರತಿ ಭಾನುವಾರ ಆನ್‌ಲೈನ್‌ನಲ್ಲಿ ಜಾನಪದ, ಭಾವಗೀತೆ, ಚಿತ್ರಗೀತೆಗಳನ್ನು ಒಳಗೊಂಡ ಗಾಯನ ಸ್ಪರ್ಧೆಗಳನ್ನು ಹಮ್ಮಿಕೊಂಡಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಗಾಯಕ-ಗಾಯಕಿಯರಿಗೆ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹ ನೀಡಲಾಗಿದೆ. ಅವರಲ್ಲಿ ಆಯ್ಕೆಯಾದ 34 ಮಂದಿ ಪ್ರತಿಭಾನ್ವಿತ ಗಾಯಕರಿಗೆ ಈ…

Read More