ಎಸ್.ಎಸ್.ಎಲ್.ಸಿ ಫಲಿತಾಂಶಕ್ಕಾಗಿ ಶ್ರಮಿಸುತ್ತಿರುವ ಕೊಪ್ಪಳ ಜಿಲ್ಲಾ ಪ್ರೌಢಶಾಲಾ ಶಿಕ್ಷಕರು: ಡಿ.ಡಿ.ಪಿ.ಐ ಶ್ರೀಶೈಲ್ ಬಿರಾದಾರ
ಗಂಗಾವತಿ: ಭಾರತ ಸೇವಾದಳ ಮತ್ತು ಶಿಕ್ಷಕರ ಸಂಘದ ಸಹಕಾರದೊಂದಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಿಕ್ಷಕರು ಇಲಾಖೆ ರೂಪಿಸುವ ಕಾರ್ಯಕ್ರಮಗಳಾದ ವಿಶೇಷ ತರಗತಿ, ಗುಂಪು ಅಧ್ಯಯನ, ೨೦ ಅಂಶಗಳ ಕಾರ್ಯಕ್ರಮಗಳು, ಪೂರ್ವಸಿದ್ಧತಾ ಪರೀಕ್ಷೆಗಳು, ಭೌತಿಕ ಸೌಕರ್ಯಗಳು ಸೇರಿದಂತೆ ವಿನೂತನ ಯೋಜನೆಗಳೊಂದಿಗೆ ಸೃಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಬಾಲಕರ ಸರ್ಕಾರಿ ಪ್ರೌಢಶಾಲೆ ಬಸಾಪಟ್ಟಣದಲ್ಲಿ ಭಾರತ ಸೇವಾದಳ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ…
