
ಬಸವ ನೀಲಾಂಬಿಕೆ ಮಹಿಳಾ ಸಂಘದವತಿಯಿಂದ ಮಾರ್ಚ್-೨೦ ರಂದು ಹಿರೆಜಂತಕಲ್ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ
ಗಂಗಾವತಿ: ನಗರದ ಹಿರೇಜಂತಕಲ್ನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಮಾರ್ಚ್-೨೦ ಗುರುವಾರದಂದು ಬಸವ ನೀಲಾಂಬಿಕೆ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರತ್ನಮ್ಮ ಆರೇಗಾರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಡಾ. ಮುಮ್ತಾಜ್ ಬೇಗಂ, ವಿಜಯಲಕ್ಷ್ಮಿ, ಅರ್ಚನಾ ರಾಘವೇಂದ್ರ ಶಿರಿಗೇರಿ, ಲಲಿತಮ್ಮ ತಿಪ್ಪೇರುದ್ರಸ್ವಾಮಿ, ಗೌರಮ್ಮ ಕುಂಬಾರ, ಮಂಜುಳಾ ಹೊಸಪೇಟೆ, ಸಿಂಧು, ಶೋಭಾ ರವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಗೌರಮ್ಮ…