ಪಂಡರಾಪುರ ಪಾದಯಾತ್ರೆಯ ಯಾತ್ರಾತ್ರಿಗಳಿಂದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ನಿವಾಸದಲ್ಲಿ ವಿಶೇಷ ಪೂಜೆ
ಗಂಗಾವತಿ: ನಗರದ ಹಿರೇಜಂತಕಲ್ ವಿರುಪಾಪುರದ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಠಿ ಅವರ ನಿವಾಸದಲ್ಲಿ ಕಳೆದ 38 ವರ್ಷಗಳಿಂದ ಭದ್ರಾವತಿ ಮತ್ತು ಓಬಳಾಪುರಂನಿಂದ ಪಂಡರಾಪುರಕ್ಕೆ ಹೋಗುವ ಪಾದಯಾತ್ರೆಯ ಯಾತ್ರಾತ್ರಿಗಳಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಇದಕ್ಕೂ ಮುನ್ನ ಶ್ರೀ ಪಂಡರಾಪುರ ಪಾಂಡುರಂಗನ ಮತ್ತು ರುಕ್ಮಿಣಿ ದೇವಿಯ ಆರಾಧನೆ ಮಾಡಲಾಯಿತು. ಜೊತೆಗೆ ಭಜನೆಯನ್ನು ನೆರವೇರಿಸಿ ಮುಂದೆ ಸಾಗಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಾದಯಾತ್ರೆಯ ಮತ್ತು ಭಜನಾ ಮಂಡಳಿಯ ಉಸ್ತುವಾರಿಗಳಾದ ಚಂದ್ರಶೇಖರ ಗೋಂದಿಮಠ ಭದ್ರಾವತಿ ಅವರು, ಪಾದಯಾತ್ರೆಯು ಸ್ವಾಮಿ ನಾಮದೇವಾನಂದ…
