ರಾಜವಂಶಸ್ಥೆ ಶ್ರೀಮತಿ ಲಲಿತಾರಾಣಿಯವರಿಂದ ಶ್ರೀಕೃಷ್ಣದೇವರಾಯ ಜಯಂತಿ ಆಚರಣೆ.
ಗಂಗಾವತಿ: ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರ ನೇತೃತ್ವದಲ್ಲಿ ವಿಜಯನಗರದ ಸಾಮ್ರಾಜ್ಯದ ಚಕ್ರವರ್ತಿ ರಾಜಾ ಶ್ರೀಕೃಷ್ಣದೇವರಾಯರ ಜಯಂತಿಯನ್ನು ಶ್ರೀಕೃಷ್ಣದೇವರಾಯರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪೂಜೆ ಸಲ್ಲಿಸಿ, ಸಿಹಿ ತಿಂಡಿ ವಿತರಿಸಿ ಅದ್ಧೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜಮಾತೆ ಅಮ್ಮನವರು ಅಖಂಡ ಹಿಂದೂ ಸಾಮ್ರಾಜ್ಯವನ್ನು ಸಂರಕ್ಷಿಸಿ ಕೃಷಿ, ಸಾಹಿತ್ಯ, ವಿದ್ವಾಂಸರು, ಕವಿಗಳು ಕೆರೆ-ಕಟ್ಟೆಗಳನ್ನು ನಿರ್ಮಿಸಿ ಅತ್ಯಂತ ಸುಂದರ ಮತ್ತು ಸಮೃದ್ಧಿಯ ರಾಜ್ಯವನ್ನು ನಿರ್ಮಾಣ ಮಾಡಿದ ಕೀರ್ತಿ ಅವರಿಗೆ ಸಲ್ಲಿದ್ದು, ನಾವು ಅಂತವರ ವಂಶಿಕರಾಗಿರುವುದು ನಮ್ಮ ಪೂರ್ವಜನ್ಮದ ಪುಣ್ಯ….
