೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನ, ರೇಡಿಯೋ ನಿಲಯದಲ್ಲಿ ಸರ್ವಾಧ್ಯಕ್ಷ ಶ್ರೀ ಲಿಂಗಾರೆಡ್ಡಿ ಆಲೂರು ರವರಿಗೆ ಸನ್ಮಾನ
ಗಂಗಾವತಿ: ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ಇಂದು ನಗರದ ಗ್ರಾಮೀಣ ಭಾರತಿ ೯೦.೪ ಎಫ್. ಎಂ. ರೇಡಿಯೋ ನಿಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ನಗರದಲ್ಲಿ ಮಾ.೨೭, ೨೮ರಂದು ಹಮ್ಮಿಕೊಳ್ಳಲಾಗಿರುವ ೧೩ನೇ ಕೊಪ್ಪಳ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ, ಕಥೆಗಾರ, ಖ್ಯಾತ ನಿರೂಪಕ ಶ್ರೀ ಲಿಂಗಾರೆಡ್ಡಿ ಆಲೂರು ರವರನ್ನು ನಗರದ ವಿವೇಕಾನಂದ ಕಾಲೋನಿಯಲ್ಲಿರುವ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದಲ್ಲಿ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ, ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ…
