ಡಿಸೆಂಬರ್ 6 ರಂದು ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥಾಪನಾ ದಿನಾಚರಣೆ: ಶ್ರೀ ಕೊಟ್ಟೂರು ಮಹಾಸ್ವಾಮಿಗಳು.

ಗಂಗಾವತಿ. ನಗರದ ಅತ್ಯಂತ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾದ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥಾಪರ ದಿನಾಚರಣೆ ಡಿಸೆಂಬರ್ 6 ರಂದು ಶ್ರೀ ಕೊಟ್ಟೂರೇಶ್ವರ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 10:30 ಕ್ಕೆ ಜರುಗಲಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಕಲ್ಮಠದ ಡಾ. ಕೊಟ್ಟೂರು ಮಹಾಸ್ವಾಮಿಗಳು ಹೇಳಿದರು.

ಅವರು ಮಂಗಳವಾರದಂದು. ಕಾಲೇಜಿನ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥೆಯ ಸಂಸ್ಥಾಪಕ ಚೇತನರಾದ ಲಿಂಗೈಕ್ಯ ಶ್ರೀ ಚನ್ನಬಸವ ಸ್ವಾಮಿಗಳು ಕಲ್ಮಠ ಇವರ ಸಂಸ್ಕಣೆಯಲ್ಲಿ ಎರಡನೇ ವರ್ಷದ ಸಂಸ್ಥಾಪನ ದಿನಾಚರಣೆ ಇದಾಗಿದ್ದು ಇದೇ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಚನ್ನಬಸಯ್ಯಸ್ವಾಮಿ ಅವರ ಪೂಜ್ಯ ತಂದೆ ತಾಯಿಯಾದ ಕನಕಗಿರಿ ಕಲ್ಲ ಬಾಗಿಲ ಮಠ ವೀರಬಸಮ್ಮ ಬಸಲಿಂಗಯ್ಯ ಸ್ವಾಮಿ ಸ್ಮರಣಾರ್ಥ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ನೂತನ ನಾಮಕರಣ ನಡೆಸಲಾಗುವುದೆಂದು ತಿಳಿಸಿದ ಅವರು ಇದೇ ಸಂದರ್ಭದಲ್ಲಿ ಹಾಲಗಲ್ಲ ಶ್ರೀ ಗುರು ಕುಮಾರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘ ನಿಯಮಿತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜರುಗಲಿದ್ದು. ಸಮಾರಂಭದ ದಿವ್ಯಸಾನಿಧ್ಯವನ್ನು ಹುಚ್ಚೇಶ್ವರ ಸಂಸ್ಥಾನ ಮಠದ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು ಹಾಗೂ ತಾವು ಸೇರಿದಂತೆ ಅಧ್ಯಕ್ಷತೆಯನ್ನು ಶಾಸಕ ಗಾಲಿ ಜನಾರ್ಧನ್ ರೆಡ್ಡಿ ವಹಿಸುವರು.
ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗಿ ನೆರವೇರಿಸಲಿದ್ದು, ನಾಮಕರಣವನ್ನು ಸಂಸದ ರಾಜಶೇಖರ್ ಹಿಟ್ನಳ್ ನಡೆಸುವರು. ಇದೇ ಸಂದರ್ಭದಲ್ಲಿ ದಾನಿಗಳಿಗೆ ಸನ್ಮಾನ ಗಣ್ಯರಿಗೆ ಗೌರವ ಸಮರ್ಪಡೆ ಗುಣಮಟ್ಟದ ಶಿಕ್ಷಣ ಜೊತೆಗೆ ವಿದ್ಯಾರ್ಥಿಗಳಿಗೆ ಒಳ್ಳೆಯ ಸಂಸ್ಕಾರ ನೀಡುವ ಕುರಿತಂತೆ ಉಪನ್ಯಾಸ ಇತರೆ ಕಾರ್ಯಕ್ರಮಗಳು ಜರುಗುಲಿದ್ದು. ಶಿಕ್ಷಣ ಪ್ರೇಮಿಗಳು. ಶಾಲೆಯ ಹಳೆ ವಿದ್ಯಾರ್ಥಿಗಳು. ಸರ್ವರೂ ಆಗಮಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ. ಶ್ರೀ ಚನ್ನಬಸವಸ್ವಾಮಿ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಶರಣಬಸಪ್ಪ ಕೋಲ್ಕಾರ್ ಮಾತನಾಡಿದರು. ಕಾರ್ಯದರ್ಶಿ ಶರಣೆಗೌಡ ಮಾಲಿ ಪಾಟೀಲ್, ಲಿಂಗಪ್ಪ ಕಮತಗಿ ಅಯೋಧ್ಯ ಯು.ಎಂ ಅನಿಲ್ ಇತರರು ಉಪಸ್ಥಿತರಿದ್ದರು

Leave a Reply