ಶ್ರೀ ಪ್ರಸನ್ನ ಪಂಪ ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವದಲ್ಲಿ ಅನ್ನ ಸಂತರ್ಪಣೆ.


ಗಂಗಾವತಿ. ಇತಿಹಾಸ ಪ್ರಸಿದ್ಧ ಹಿರೇ ಜಂತಕಲ್ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರಯುಕ್ತ ಗಂಗಾವತಿ ನಗರ ಸೇರಿದಂತೆ ಜಾತ್ರೆಗೆ ಆಗಮಿಸುವ ಸಕಲ ಭಕ್ತಾದಿಗಳಿಗೆ ಅನ್ನಸಂತರ್ಪಡೆಯನ್ನು ಆಯೋಜಿಸಲಾಗಿದೆ ಎಂದು. ನಗರಸಭೆಯ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಹೇಳಿದರು.

ಅವರು ಮಾಧ್ಯಮದೊಂದಿಗೆ ಮಾತನಾಡಿ ಶ್ರೀ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ಹಂಪಿಯಲ್ಲಿರುವ ವಿರೂಪಾಕ್ಷೇಶ್ವರ ದೇವಸ್ಥಾನದಷ್ಟೇ ಅತ್ಯಂತ ಶಕ್ತಿ ಪೀಠವಾಗಿ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಆರಂಭಗೊಂಡ ರಥೋತ್ಸವ ಹಾಗೂ ಎರಡು ದಿನಗಳ ಕಾಲ ಜರುಗಲಿರುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಆಗಮಿಸುವ. ಸರ್ವರಿಗೆ. ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬುಧವಾರದ ಜನಪದ ಗೀತೆಗಳು ಕಾರ್ಯಕ್ರಮ ಸೇರಿದಂತೆ ಗುರುವಾರ ಹಾಗೂ ಶುಕ್ರವಾರ ಎರಡು ದಿನಗಳ ಕಾಲ ಪ್ರತಿದಿನ ಸಂಜೆ 7:00 ಯಿಂದ ರಾತ್ರಿ 11:30ವರೆಗೆ ವೈವಿಧ್ಯಮಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು. ಕಲೆ ಸಾಹಿತ್ಯ ಸಂಸ್ಕೃತಿ. ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಈಡಿಗರ ಪರಮೇಶ್ವರ, ಜಿ ಆರ್ ಎಸ್ ಸತ್ಯಕುಮಾರ್, ಉಪ್ಪಾರ್ ಚಂದ್ರಶೇಖರ್, ವೈ ಸೋಮಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದು. ದಾಸೋಹದ ನೇತೃತ್ವವನ್ನು ಪ್ರಥಮ ದಿನದಂದು ಹೆಚ್ ಜಿ ರಾಮುಲು ಕುಟುಂಬಸ್ಥರು ಬುಧವಾರದಂದು ಜಿ ಆರ್ ಎಸ್. ಕುಟುಂಬಸ್ಥರು ಹಾಗೂ. ಗುರುವಾರದಂದು ಗಾಣಿಗ ಸಮಾಜ ಬಾಂಧವರು ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ. ಮುಖಂಡರು ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading