ಮಾನಸ ಬುದ್ಧಿಮಾಂದ್ಯ ಶಾಲೆಯ ಮಕ್ಕಳ ಸಾಧನೆ. ಜಿಲ್ಲಾ ಮಟ್ಟಕ್ಕೆ ಪ್ರಥಮ.

ಕೊಪ್ಪಳ: ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಯುಕ್ತಾಶ್ರಯದಲ್ಲಿ ಡಿಸೆಂಬರ್‌-3 ರಂದು ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನ ದಿನಾಚರಣೆಯು ಕೊಪ್ಪಳ ಸಾವ೯ಜನಿಕ ಕ್ರೀಡಾಂಗಣದಲ್ಲಿ ನೇರೆವೇರಿದ ಕಾರ್ಯಕ್ರಮದಲ್ಲಿ ನಮ್ಮ ಅಂಗವಿಕಲರ ಪುನಶ್ಚೇತನ ಸಂಸ್ಥೆ A R.D ಮಾನಸಬುದ್ಧಿ ಮಾಂದ್ಯಮಕ್ಕಳು ಕ್ರೀಡೆಯಲ್ಲಿ 15 ಬಹುಮಾನ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಹಾಗೂ ಇದೆ ಸಂದರ್ಭದಲ್ಲಿ ಆಮೀರ ಹುಸೇನ್ ಎಂಬ ಬುದ್ಧಿ ಮಾಂದ್ಯ ವಿದ್ಯಾರ್ಥಿ ಹತ್ತನೇ ತರಗತಿಯಲ್ಲಿ ತೇರ್ಗಡೆ ಹೊಂದಿದ್ದು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು ಎಂದು ಮುಖ್ಯೋಪಾಧ್ಯಾಯರಾದ ಯಲ್ಲಪ್ಪ ಕಲಾಲ್ ಇವರು ಬುದ್ದಿಮಾಂಧ್ಯತೆ ಮಕ್ಕಳಿಗೆ ಜನರ ಯಾವುದೇ ಶಾಪದಿಂದ ಬರುವುದಲ್ಲ. ಅದಕ್ಕೆ ತನ್ನದೇ ಆದ ವೈಜ್ಞಾನಿಕ ಕಾರಣಗಳನ್ನು ಹೊಂದಿದ್ದು ಅಂತಹ ನ್ಯೂನ್ಯತೆ ಹೊಂದಿದ ಮಕ್ಕಳಿಗೆ ಸತತವಾದ ತರಬೇತಿ, ಗುಣಮಟ್ಟದ ಶಿಕ್ಷಣ ಹಾಗೂ ಪ್ರೀತಿ ವಿಶ್ವಾಸದಿಂದ ನೋಡಿಕೊಂಡಲ್ಲಿ ಅಂತಹ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರಬಹುದಾಗಿದೆ ಎಂದು ತಿಳಿಸಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಗೆ ಅಧ್ಯಕ್ಷರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದರು.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading