ಮಾರ್ಚ್-05‌ ರಂದು ಗಂಗಾವತಿಯ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದ ೨೫ನೇ ವಾರ್ಷಿಕೋತ್ಸವ

ಗಂಗಾವತಿ: ನಗರದ ಆನೆಗೊಂದಿ ರಸ್ತೆಯಲ್ಲಿರುವ ಶ್ರೀ ಶಿರಿಡಿ ಸಾಯಿಬಾಬಾ ದೇವಸ್ಥಾನದ ೨೫ನೇ ವಾರ್ಷಿಕೋತ್ಸವವು ಮಾರ್ಚ್-೦೫ ಬುಧವಾರದಂದು ನಡೆಯಲಿದೆ ಎಂದು ಶ್ರೀ ಶಿರಿಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ (ರಿ)ನ ಅಧ್ಯಕ್ಷರಾದ ರಾಮಕೃಷ್ಣರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

೨೫ನೇ ವಾರ್ಷಿಕೋತ್ಸವದ ನಿಮಿತ್ಯವಾಗಿ ಅಂದು ಭಕ್ತಾದಿಗಳಿಗೆ ಲೋಕಕಲ್ಯಾಣಾರ್ಥವಾಗಿ ಭಕ್ತ ಜನರಿಗೆ ಭೋಗ ಭಾಗ್ಯ ಆಯುರಾರೋಗ್ಯ ಅಷ್ಟೈಶ್ವರ್ಯ ಪ್ರಾಪ್ತಿಗಾಗಿ ನವಗ್ರಹ ಪರಿಹಾರಕ್ಕಾಗಿ ಅನೇಕ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಂದು ಬೆಳಿಗ್ಗೆ ೫:೧೫ಕ್ಕೆ ಕಾಕಡ ಆರತಿ, ನಂತರ ಶ್ರೀಸಾಯಿಬಾಬಾ ಅವರಿಗೆ ಪಂಚಾಮೃತ ಅಭಿಷೇಕ ಪೂಜಾದಿಗಳು ನಂತರ ಪುಷ್ಪಾರ್ಚನೆ, ಮಹಾಮಂಗಳಾರತಿ, ತೀರ್ಥಪ್ರಸಾದ, ಮತ್ತೆ ಮಧ್ಯಾಹ್ನದ ಆರತಿ ಹಾಗೂ ಸಂಜೆ ಸಂಧ್ಯಾ ಆರತಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

ಕಾರಣ ಎಲ್ಲಾ ಭಕ್ತಾದಿಗಳು ಆಗಮಿಸಿ, ಶ್ರೀ ಬಾಬಾರವರ ದರ್ಶನ ಪಡೆದು ತನು, ಮನ, ಧನದಿಂದ ಸೇವೆ ಸಲ್ಲಿಸಿ, ತೀರ್ಥಪ್ರಸಾದ ಸ್ವೀಕರಿಸಿ, ಬಾಬಾರವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಶಿರಿಡಿ ಸಾಯಿಬಾಬಾ ಚಾರಿಟೇಬಲ್ ಟ್ರಸ್ಟ್ (ರಿ), ಶ್ರೀ ಶಿರಿಡಿ ಸಾಯಿಬಾಬಾ ಸೇವಾ ಸಮಿತಿಯ ಆಡಳಿತ ಮಂಡಳಿ ಮನವಿ ಮಾಡಿದೆ.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading