ಶೃಂಗೇರಿಯ ಜಗದ್ಗುರು ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಭವ್ಯವಾದ ಶುಭಯಾತ್ರೆ.

ಕೊಪ್ಪಳ: ನಗರಕ್ಕೆ ಆಗಮಿಸಿದ ಶೃಂಗೇರಿಯ ಜಗದ್ಗುರುಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳವರ ಶೋಭಾ ಯಾತ್ರೆ ಸಹಸ್ರಾರು ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಶುಕ್ರವಾರದಂದು ಜರುಗಿತು.

ಹೊಸಪೇಟೆ ರಸ್ತೆಯಲ್ಲಿರುವ ಶ್ರೀ ಈಶ್ವರ ದೇವಸ್ಥಾನದಿಂದ ಆರಂಭಗೊಂಡ ಶೋಭಾಯಾತ್ರೆಯಲ್ಲಿ ವಿವಿಧ ಭಜನಾ ಮಂಡಳಿಯ ಸದಸ್ಯರು ಹಾಡು, ಕೋಲಾಟಗಳಿಂದ ಗಮನ ಸೆಳೆದರು.

ಬಳಿಕ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜಗದ್ಗುರುಗಳಿಂದ ಆಶೀರ್ವಚನ ಜರುಗಿತು.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading