ನದಿ ಹಾಗೂ ತೀರ್ಥಕ್ಷೇತ್ರಗಳ ಸುತ್ತಮುತ್ತ ೫೦೦ ಮೀಟರ್ ಸೋಪು, ಶಾಂಪು ಬಳಕೆ ನಿರ್ಬಂಧ ಸ್ವಾಗತಾರ್ಹ: ವಿಷ್ಣುತೀರ್ಥ ಜೋಷಿ

ನದಿ ಹಾಗೂ ತೀರ್ಥಕ್ಷೇತ್ರಗಳ ಸುತ್ತಮುತ್ತ ೫೦೦ ಮೀಟರ್ ಸೋಪು, ಶಾಂಪು ಬಳಕೆ ನಿರ್ಬಂಧ ಸ್ವಾಗತಾರ್ಹ: ವಿಷ್ಣುತೀರ್ಥ ಜೋಷಿ

ಗಂಗಾವತಿ: ನದಿ, ತೀರ್ಥಕ್ಷೇತ್ರಗಳಲ್ಲಿ ಅರ್ಧ ಬಳಸಿದ ಶಾಂಪೂ, ಸೋಪು ಇತ್ಯಾದಿ ಬಳಕೆ ಮಾಡುವುದನ್ನು ನಿರ್ಬಂಧಿಸುವ ಮೂಲಕ ನದಿ ನೀರು ಮಲಿನವಾಗದಂತೆ ತಡೆಯಲು ಅರಣ್ಯ ಸಚಿವ ಈಶ್ವರ ಖಂಡ್ರೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ ಎಂದು ವಿಷ್ಣುತೀರ್ಥ ಜೋಷಿ ಪ್ರಕಟಣೆಯಲ್ಲಿ ಶ್ಲಾಘಿಸಿದರು.

ಅರಣ್ಯ ಸಚಿವರ ತೀರ್ಮಾನವನ್ನು ಸ್ವಾಗತಿಸಿ ಮಾತನಾಡಿದ ಅವರು, ಕಳೆದ ಸಂಕ್ರಮಣದ ದಿನದಂದು ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್ ಆಶ್ರಯದಲ್ಲಿ ರಾಜ್ಯಾದ್ಯಂತ ವಿವಿಧ ತೀರ್ಥ, ಪುಣ್ಯಕ್ಷೇತ್ರಗಳಲ್ಲಿ ೧೦ ಲಕ್ಷಕ್ಕೂ ಹೆಚ್ಚು ಜನರಿಗೆ ಕಡಲೆಹಿಟ್ಟಿನ ಮಿಶ್ರಣದ ಪ್ಯಾಕೆಟ್‌ಗಳನ್ನು ಹಂಚುವ ಮೂಲಕ “ವಿಷ ಮುಕ್ತ ಪುಣ್ಯಸ್ನಾನ ಅಭಿಯಾನ” ವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಅದರಂತೆ ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅವರ ಮಾರ್ಗದರ್ಶನದಲ್ಲಿ ಗ್ರಾಮೀಣ ಭಾರತಿ ೯೦.೪ ಎಫ್.ಎಂ ನ ನಿಲಯ ನಿರ್ದೇಶಕರಾದ ರಾಘವೇಂದ್ರ ತೂನ ಅವರ ಆಯೋಜಕತ್ವದಲ್ಲಿ ಜಿಲ್ಲೆಯಾದ್ಯಂತ ಹುಲಿಗಿ, ಋಷಿಮುಖ ಪರ್ವತ, ವಿರುಪಾಪುರ ಗಡ್ಡಿ, ಆನೆಗುಂದಿ, ಚಿಂತಾಮಣಿ, ದೇವಘಾಟ್ ಸೇರಿದಂತೆ ವಿವಿಧ ಸ್ಥಾನಘಟ್ಟಗಳಲ್ಲಿ ಅಂದಾಜು ಐವತ್ತು ಸಾವಿರಕ್ಕೂ ಹೆಚ್ಚು ಕಡಲೆಹಿಟ್ಟಿನ ಪೊಟ್ಟಣಗಳನ್ನು ಪರಿಸರ ಪ್ರೇಮಿಗಳು ಹಾಗೂ ಸಮಾನ ಮನಸ್ಕರೊಂದಿಗೆ ಸೇರಿ ಸಾರ್ವಜನಿಕರಿಗೆ ಹಂಚಲಾಗಿತ್ತು. ರಾಜ್ಯಾದ್ಯಂತ ನಡೆದ ಈ ವಿಷಮುಕ್ತ ಪುಣ್ಯ ಸ್ನಾನ ಅಭಿಯಾನಕ್ಕೆ ಸ್ಪಂದಿಸಿದ ಅರಣ್ಯ ಸಚಿವರು ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ ದಂಡೆ, ಸ್ನಾನಘಟ್ಟ ಹಾಗೂ ನದೀಪಾತ್ರದಿಂದ ೫೦೦ ಮೀಟರ್ ಅಂತರದಲ್ಲಿ ಅರ್ಧ ಬಳಸಿದ ಶಾಂಪೂ, ಸೋಪು ಇತ್ಯಾದಿಗಳ ಬಳಸುವುದು ಹಾಗೂ ಎಸೆದು ಹೋಗುವುದನ್ನು ನಿರ್ಬಂಧಿಸಲು ಸೂಚಿಸಿರುವುದು ಅರಣ್ಯ ಸಚಿವ ಈಶ್ವರ ಖಂಡ್ರೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತೆಗೆದುಕೊಂಡ ನಿರ್ಧಾರ ಶ್ಲಾಘನೀಯವಾಗಿದೆ.

ಈ ವೇಳೆ ಜೀವನದಿಗಳ ಸಂರಕ್ಷಣೆಯ ಚಟುವಟಿಕೆಗಳಲ್ಲಿ ನಮಗೆ ಸದಾ ಬೆನ್ನುತಟ್ಟಿ ಪ್ರೋತ್ಸಾಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಹೆಚ್.ಆರ್. ಶ್ರೀನಾಥ್ ರವರಿಗೆ, ಈ ಕಾರ್ಯದಲ್ಲಿ ಸಲಹೆ ಸಹಕಾರ ನೀಡಿದ ಮುಖಂಡರಾದ ಸಂತೋಷ ಕೆಲೋಜಿ, ನಾಗರಾಜ್ ಗುತ್ತೇದಾರ ಅವರಿಗೂ, ಈ ಕಾರ್ಯದಲ್ಲಿ ಎಲ್ಲರಿಗೂ ವಾಸುದೇವರಾವ್ ನವಲಿ, ಟಿ. ಆಂಜನೇಯ, ಮಹಾಲಿಂಗಪ್ಪ ಬನ್ನಿಕೊಪ್ಪ, ಆರ್ ಕೃಷ್ಣ ಗಂಗಾವತಿ, ಹನುಮೇಶ ಬಾವಿಕಟ್ಟಿ, ಹೊನ್ನಪ್ಪ ನಾಯಕ ಆನೆಗುಂದಿ, ಹನುಮನಹಳ್ಳಿ ಚಂದ್ರಾರೆಡ್ಡಿ, ಎ.ಕೆ. ಮಹೇಶಕುಮಾರ, ಡಾ|| ಶಿವಕುಮಾರ್ ಮಾಲಿಪಾಟೀಲ್ ಹಾಗೂ ಕೈಜೋಡಿಸಿ ಶ್ರಮದಾನ ನೀಡಿದ ಎಲ್ಲರಿಗೂ ಹೃತ್ಪೂರ್ವದ ಧನ್ಯವಾದಗಳನ್ನು ತಿಳಿಸಿದ

Leave a Reply