ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಲಿಂಗಾರೆಡ್ಡಿ ಆಲೂರುರವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕೊಪ್ಪಳ ಜಿಲ್ಲಾ ೧೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿಗಳಾದ ಶ್ರೀ ಲಿಂಗಾರೆಡ್ಡಿ ಆಲೂರ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಇಂದು ರವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಸನ್ಮಾನಿಸಿದರು.

ಲಿಂಗಾರೆಡ್ಡಿ ಆಲೂರುರವರು ಹಿರಿಯ ಸಾಹಿತಿಗಳಾಗಿ, ಕೃಷಿ ಪತ್ರಿಕೆಯ ವರದಿಗಾರಾಗಿ, ವೃತ್ತಿಯಲ್ಲಿ ಶಿಕ್ಷಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಇವರ ಸರ್ವಾಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ನಡೆಯುತ್ತಿರುವುದು ಸ್ತುತ್ಯಾರ್ಹವಾಗಿದೆ. ಇವರಿಗೆ ರೆಡ್ಡಿ ಸಮಾಜದ ಯುವಘಟಕದಿಂದ ಸನ್ಮಾನಿಸಿ ಗೌರವಿಸಲಾಗಿದೆ ಎಂದು ಹಲವರು ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಕರ್ನಾಟಕ ಸಂಘಟನೆಯ ಉತ್ತರ ಕರ್ನಾಟಕ ಅಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷರಾದ ಚನ್ನಬಸವ ಜೇಕಿನ್, ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಳ್ಳಾರಿ ರಾಮಣ್ಣ ನಾಯಕ, ವೀರ ಕನ್ನಡಿಗರ ಕರವೇ ಸಂಸ್ಥಾಪಕ ರಾಜ್ಯಧ್ಯಕ್ಷ ಅರ್ಜುನ್ ನಾಯಕ, ಧೀರ ಕನ್ನಡಿಗರ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿರುಪಾಕ್ಷಿಗೌಡ ನಾಯಕ, ಕರವೇ ಪ್ರವೀಣಕುಮಾರ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ, ಜನಹಿತ ಕರವೇ ರಾಜ್ಯಾಧ್ಯಕ್ಷ ರಮೇಶ ಕೋಟಿ, ಕನ್ನಡ ಒಕ್ಕೂಟ ಕರ್ನಾಟಕ ರಾಜ್ಯ ಸಂಘಟನೆಯ ಜಿಲ್ಲಾಧ್ಯಕ್ಷ ಪೀರ ಮಹಮ್ಮದ್, ಕರವೇ ನಾರಾಯಣಗೌಡರ ಬಣ ತಾಲೂಕ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಕನ್ನಡ ಯುವಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಎಂ.ಡಿ ಅಲಿ, ಕಿಷ್ಕಿಂದ ಕಲ್ಯಾಣ ಕರವೇ ರಾಜ್ಯಾಧ್ಯಕ್ಷ ದೇವಣ್ಣ ಸಂಗಾಪುರ, ಸಮಗ್ರ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಬಾಬುಗೌಡ, ಕಲ್ಯಾಣ ಕರ್ನಾಟಕ ಯುವಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಫಿ ಬಿಸ್ತಿ, ಕರವೇ ಶಿವರಾಮಗೌಡರ ಬಣದ ತಾಲೂಕ ಅಧ್ಯಕ್ಷ ಯಮನೂರ ಭಟ್, ಶಿವರಾಜಕುಮಾರ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಖಾದರ ಭಾಷಾ, ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಶರಣಪ್ಪ ದೊಡ್ಡಮನಿ, ಡಿ.ಎಸ್.ಸ್. ಸಂಘಟನೆಯ ಜಿಲ್ಲಾಧ್ಯಕ್ಷ ಸಿ.ಕೆ ಮರಿಸ್ವಾಮಿ ಬರಗೂರು ಸೇರಿದಂತೆ ಮತ್ತಿತರರು ಇದ್ದರು.

Leave a Reply