ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರಿಗೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ

ಗಂಗಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿಶೇಷ ಪ್ರಶಸ್ತಿಗೆ ಗಂಗಾವತಿಯ ಹಿರಿಯ ಪತ್ರಕರ್ತ ವೀರಾಪುರ ಕೃಷ್ಣ ಅವರು ಭಾಜನರಾಗಿರುವುದು ತುಂಬಾ ಸಂತಸದ ವಿಷಯ ಎಂದು ತಿಳಿಸಿ ಇವರಿಗೆ ಕನ್ನಡಪರ ಸಂಘಟನೆಗಳ ಮುಖಂಡರು ಗೌರವಯುತವಾಗಿ ಇಂದು ಸನ್ಮಾನಿಸಿದರು.

ವೀರಾಪುರ ಕೃಷ್ಣ ಅವರು ಒಬ್ಬ ಪತ್ರಕರ್ತರಾಗಿ ಸಮಾಜದಲ್ಲಿ ನಡೆಯುವ ಶೋಷಣೆಗಳ ಕುರಿತಾಗಿ, ದೌರ್ಜನ್ಯಗಳ ಕುರಿತಾಗಿ ವರದಿ ಮಾಡುವ ಮೂಲಕ ಹಾಗೂ ತಮ್ಮನ್ನು ತಾವು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಈ ಪ್ರಶಸ್ತಿ ಅವರಿಗೆ ಲಭಿಸಿರುವುದು ಸ್ತುತ್ಯಾರ್ಹವಾಗಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಕರ್ನಾಟಕ ಸಂಘಟನೆಯ ಉತ್ತರ ಕರ್ನಾಟಕ ಅಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷರಾದ ಚನ್ನಬಸವ ಜೇಕಿನ್, ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಳ್ಳಾರಿ ರಾಮಣ್ಣ ನಾಯಕ, ವೀರ ಕನ್ನಡಿಗರ ಕರವೇ ಸಂಸ್ಥಾಪಕ ರಾಜ್ಯಧ್ಯಕ್ಷ ಅರ್ಜುನ್ ನಾಯಕ, ಧೀರ ಕನ್ನಡಿಗರ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿರುಪಾಕ್ಷಿಗೌಡ ನಾಯಕ, ಕರವೇ ಪ್ರವೀಣಕುಮಾರ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ, ಜನಹಿತ ಕರವೇ ರಾಜ್ಯಾಧ್ಯಕ್ಷ ರಮೇಶ ಕೋಟಿ, ಕನ್ನಡ ಒಕ್ಕೂಟ ಕರ್ನಾಟಕ ರಾಜ್ಯ ಸಂಘಟನೆಯ ಜಿಲ್ಲಾಧ್ಯಕ್ಷ ಪೀರ ಮಹಮ್ಮದ್, ಕರವೇ ನಾರಾಯಣಗೌಡರ ಬಣ ತಾಲೂಕ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಕನ್ನಡ ಯುವಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಎಂ.ಡಿ ಅಲಿ, ಕಿಷ್ಕಿಂದ ಕಲ್ಯಾಣ ಕರವೇ ರಾಜ್ಯಾಧ್ಯಕ್ಷ ದೇವಣ್ಣ ಸಂಗಾಪುರ, ಸಮಗ್ರ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಬಾಬುಗೌಡ, ಕಲ್ಯಾಣ ಕರ್ನಾಟಕ ಯುವಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಫಿ ಬಿಸ್ತಿ, ಕರವೇ ಶಿವರಾಮಗೌಡರ ಬಣದ ತಾಲೂಕ ಅಧ್ಯಕ್ಷ ಯಮನೂರ ಭಟ್, ಶಿವರಾಜಕುಮಾರ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಖಾದರ ಭಾಷಾ, ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಶರಣಪ್ಪ ದೊಡ್ಡಮನಿ, ಡಿ.ಎಸ್.ಸ್. ಸಂಘಟನೆಯ ಜಿಲ್ಲಾಧ್ಯಕ್ಷ ಸಿ.ಕೆ ಮರಿಸ್ವಾಮಿ ಬರಗೂರು ಸೇರಿದಂತೆ ಮತ್ತಿತರರು ಇದ್ದರು.

Leave a Reply