NTEP ಕಾರ್ಯಕ್ರಮದಡಿಯಲ್ಲಿ ಉತ್ತಮ ಆಶಾಕಾರ್ಯಕರ್ತೆಯಾಗಿ ಹಿರೇಬೆಣಕಲ್‌ನ ಶಾಂತಮ್ಮ ಬೂದಗುಂಪ ಆಯ್ಕೆ.

ಗಂಗಾವತಿ: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ NTEP ಕಾರ್ಯಕ್ರಮದ ಅಡಿಯಲ್ಲಿ ಗಂಗಾವತಿ ತಾಲೂಕಿನ ಹಿರೇಬೆಣಕಲ್ ಗ್ರಾಮದ ಆಶಾ ಕಾರ್ಯಕರ್ತೆ ಶ್ರೀಮತಿ ಶಾಂತಮ್ಮ ಬೂದುಗುಂಪರವರು ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ, ೨೦೨೪ನೇ ಸಾಲಿನ ಅತ್ಯುತ್ತಮ ಉದ್ಯೋಗಿ ಎಂದು ಆಯ್ಕೆ ಮಾಡಲಾಗಿದೆ.

ಅವರಿಗೆ ಮಾರ್ಚ್ ೨೪ ಸೋಮವಾರ ಬೆಳಗ್ಗೆ ೧೦ ಗಂಟೆಗೆ ಕೊಪ್ಪಳದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ವಿಶ್ವ ಕ್ಷಯರೋಗ ದಿನ ೨೦೨೫ ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹಾಸ್ಯ ಭಾಷಣಕಾರರಾದ ಗಂಗಾವತಿ ಪ್ರಾಣೇಶ್ ಹಾಗೂ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಶ್ರೀಮತಿ ಶಾಂತಮ್ಮ ಬೂದಗುಂಪ ಅವರಿಗೆ ಹಿರೇಬೆಣಕಲ್ ಗ್ರಾಮದ ಸಾರ್ವಜನಿಕರು ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದರು.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading