ಗಂಗಾವತಿ: ಕಳೆದ ೨೦೨೩ ರಲ್ಲಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶ್ರೀ ಶಿವರಾಜ ತಂಗಡಗಿಯವರು ಕೊಪ್ಪಳ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ನಿರಂತರ ಶ್ರಮವಹಿಸುತ್ತಿದ್ದಾರೆ.
ಇವರಿಗೆ ಶ್ರೀರಾಮನಗರದಲ್ಲಿ ಏಪ್ರಿಲ್-೧೫ ಮಂಗಳವಾರ ಶೀರಾಮನಗರದ ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಕನ್ನಡಪ್ರೇಮಿ ಜಿ. ರಾಮಕೃಷ್ಣ ಅವರು ಆತ್ಮೀಯವಾಗಿ ಸನ್ಮಾನಿಸಿದರು.