ಗಂಗಾವತಿ: ಗಂಗಾವತಿ ತಾಲೂಕು ಕಾರ್ಯಕಾರಣಿ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಗಂಗಾವತಿ ತಾಲೂಕು ನೂತನ ಅಧ್ಯಕ್ಷರನ್ನಾಗಿ ನಿರುಪಾದಿ ಕೇಸರಹಟ್ಟಿ ಇವರನ್ನು ಆಯ್ಕೆ ಮಾಡಲಾಯಿತು.
ಈ ನೇಮಕಾತಿಯು ಜೂನ್-೦೩ ಮಂಗಳವಾರ ಗಂಗಾವತಿ ತಾಲೂಕಿನ ವಡ್ಡರಹಟ್ಟಿಯ ಉಳ್ಳಿಡಗ್ಗಿಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಹನುಮಂತಪ್ಪ ಸರಿಗಮ ಇವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಭೀಮನಗೌಡ, ಪ್ರಧಾನ ಕಾರ್ಯದರ್ಶಿಗಳಾದ ಶಿವಣ್ಣ ನೀಲಕಮಲ್, ಶರಣಪ್ಪ ಬಂಗಾರದ ಅಂಗಡಿ, ಶರಣಪ್ಪ ಡಿಸ್ಕೋ, ಬಸವರಾಜ್ ಎಸ್.ಬಿ ನಗರ್, ವೀರಭದ್ರಪ್ಪ ಅಮಾತೆಪ್ಪ, ಪಂಪಾಪತಿ ಹೊಸಳ್ಳಿ, ಮಂಜುನಾಥ ಸೋಮಸಾಗರ, ನಾಗರಾಜ ಬೊಮ್ನಾಳ, ಬಸವರಾಜ ಬುನ್ನಟ್ಟಿ, ಕಳಕಪ್ಪ ಮತ್ತು ರಮೇಶ್ ಮೆಹಬೂಬ್ ನಗರ, ವೀರೇಶ್ ಸರಿಗಮ, ಗವಿಸಿದ್ದಪ್ಪ ಇವರುಗಳು ಉಪಸ್ಥಿತರಿದ್ದರು.