ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶನಿವಾರ ಶ್ರೀ ವೀರಾಂಜನೇಯ ಕೃಪಾ ಪೋಷಿತ ನಾಟಕ ಮಂಡಳಿ, ಹಾಸನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಸನ. ಇವರ ಸಹಯೋಗದಲ್ಲಿ ಯುವ ನಿರ್ದೇಶಕ ಹೇಮಂತ್ ದೇವರಾಜ್ ನಿರ್ದೇಶನದಲ್ಲಿ ಬಂದೂರು ಶ್ರೀ ಸಿದ್ಧಲಿಂಗೇಶ್ವರ ಡ್ರಾಮ ಸೀನರಿಯ ರಂಗಸಜ್ಜಿಕೆಯಲ್ಲಿ ಪ್ರದರ್ಶಿತವಾದ ಸಂಪೂರ್ಣ ರಾಮಾಯಣ ನಾಟಕದಲ್ಲಿ ದಶರಥನ ಪಾತ್ರದಲ್ಲಿ ನವಿಲುಹಳ್ಳಿ ವಾಸುದೇವ್ ಉತ್ತಮ ಅಭಿನಯದಿಂದ ಪ್ರೇಕ್ಷಕರ ಮನ ಸೆಳೆದರು. ಕೈಕೆ ಪಾತ್ರದಲ್ಲಿ ಲಕ್ಷ್ಮೀ ಶ್ರೀಧರ್ ನಟಿಸಿದರು.
ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಾಯಿತು.
