ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.

ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್ ಅವರಿಂದ ಇದೇ ಜೂನ್-೨೮ ಮತ್ತು ೨೯ ರಂದು ರಾಯಚೂರು ವಲಯದಲ್ಲಿ ಜಿಲ್ಲಾ ಮಟ್ಟಕ್ಕೆ ಕ್ರೀಡಾಟುಗಳ ಆಯ್ಕೆ.
ಗಂಗಾವತಿ: ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೊಸಿಯೇಷನ್‌ ವತಿಯಿಂದ ಜೂನ್ ೨೮ ಮತ್ತು ೨೯ ರಂದು ೧೬ ಹಾಗೂ ೧೯ ವರ್ಷದೊಳಗಿನ ಉತ್ತಮ ಆಟಗಾರರ ಜಿಲ್ಲಾ ಮಟ್ಟದ ಆಯ್ಕೆ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಗ್ರಾಮೀಣ ಭಾರತಿ ೯೦.೪ ಎಫ್.ಎಂ ರೇಡಿಯೋ ನಿಲಯದ ನಿರ್ದೇಶಕ ರಾಘವೇಂದ್ರ ತೂನ ಅವರು, ಆಸಕ್ತ ಕ್ರೀಡಾಪಟುಗಳು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದ್ದಾರೆ.
ಜೂನ್ ೨೮ ಶನಿವಾರ ೧೬ ವರ್ಷದೊಳಗಿನ ಆಟಗಾರರ ಆಯ್ಕೆ ಹಾಗೂ ಜೂನ್-೨೯ ಭಾನುವಾರ ೧೯ ವರ್ಷದೊಳಗಿನ ಉತ್ತಮ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಆಯ್ಕೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಆಸಕ್ತರಿಗೆ ರಾಯಚೂರಿನ ಮಂತ್ರಾಲಯ ರಸ್ತೆಯ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ಆಸಕ್ತರು ಕಲಬುರ್ಗಿಯ ಎನ್.ವಿ ಮೈದಾನದಲ್ಲಿ ಭಾಗವಹಿಸಬಹುದು. ಬೀದರ ಜಿಲ್ಲೆಯವರು ಬೀದರ್ ನ ನೆಹರು ಸ್ಟೇಡಿಯಂ ಮೈದಾನದಲ್ಲಿ, ವಿಜಯಪುರದವರು ಬಿ.ಎಲ್.ಡಿ.ಎ ಮೈದಾನದಲ್ಲಿ, ಬಾಗಲಕೋಟೆಯವರು ಬಾಗಲಕೋಟೆಯ ಬಿ.ವಿ.ವಿ.ಎಸ್ ಇಂಜಿನೀಯರಿಂಗ್ ಕಾಲೇಜ್ ಕ್ಯಾಂಪಸ್‌ನಲ್ಲಿ ಪಾಲ್ಗೊಳ್ಳಬಹುದು.
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಆಸಕ್ತರು ಜಿಲ್ಲಾವಾರು ಸಂಪರ್ಕ ಅಧಿಕಾರಿಗಳನ್ನು ಸಂಪರ್ಕಿಸಬಹುದು. ರಾಯಚೂರಿಗೆ ಶರಣ ರೆಡ್ಡಿ ಮೊ: (೭೮೯೨೦೬೩೪೭೦), ಕೊಪ್ಪಳಕ್ಕೆ ಚಂದ್ರಶೇಖರ ಎಂ. ಮೊ: (೯೪೪೮೬೩೩೭೪೮), ವಿಜಯಪುರಕ್ಕೆ ಎನ್.ಎಂ. ಹುತಗಿ ಮೊ: (೯೪೪೮೬೭೮೨೮೦), ಕಲಬುರ್ಗಿಗೆ ಕೆ. ವಿಶ್ವನಾಥ ಮೊ: (೯೮೮೦೨೧೨೭೬೯), ಬೀದರ್ ಗೆ ಕುಶಾಲ್ ಪಾಟೀಲ್ ಮೊ: (೯೪೪೮೪೭೬೮೮೯)‌ ಬಾಗಲಕೋಟೆಗೆ ರವಿ ಮಾಗ್ದಮ್ ಮೊ: (೯೮೪೫೩೩೨೮೬೮). ಇವರುಗಳನ್ನು ಸಂಪರ್ಕಿಸಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.
ಮಾಹಿತಿಗಾಗಿ
ರಾಘವೇಂದ್ರ ತೂನ
ನಿಲಯ ನಿರ್ದೇಶಕರು,
ಗ್ರಾಮೀಣ ಭಾರತಿ ೯೦.೪ ಎಫ್.ಎಂ. ರೇಡಿಯೋ ಕೇಂದ್ರ ಗಂಗಾವತಿ.
ಅeಟಟ: ೯೧೬೪೬೩೫೬೫೫

Leave a Reply