ಗಂಗಾವತಿ : ಚುಟುಕು ಸಾಹಿತ್ಯಗಳು ಸಮಾಜದ ಬದಲಾವಣೆಗೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದು, ಸಾಹಿತ್ಯವು ವಾಸ್ತವ ಸಂಗತಿಗಳ ಕೈಗನ್ನಡಿಯಾಗಿ ಮಾರ್ಪಡಬೇಕು. ಚುಟುಕು ಕವಿಗಳು ಅಧ್ಯಯನದ ಮೂಲಕ ಗಂಭೀರವಾಗಿ ಸಾಹಿತ್ಯ ರಚಿಸಬೇಕು ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರೇಶ ಭಂಡಾರಿ ಹೇಳಿದರು.
ನಗರದ ಕಸಾಪ ಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ತಾಲೂಕು ಘಟಕದಿಂದ ಜೂನ್ ೨೧ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕವಿಗೋಷ್ಠಿಗೆ ಅರಳಹಳ್ಳಿ ಬೃಹನ್ಮಠದ ಪೂಜ್ಯ ಶ್ರೀ ರೇವಣಸಿದ್ದಯ್ಯತಾತನವರು ದಿವ್ಯಸಾನಿಧ್ಯ ವಹಿಸಿದ್ದರು.
ಉದ್ಘಾಟನೆಯನ್ನು ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರಪ್ಪ ಭಂಡಾರಿ ನೆರವೇರಿಸಿದರು. ಬಳ್ಳಾರಿ ವೀರಶೈವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಭ್ರಮರಾಂಭ ಯಾಟೆ ಕವಿಗೋಷ್ಠಿಗೆ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಅಧ್ಯಕ್ಷರಾದ ಅಶೋಕ ಗುಡಿಕೋಟಿ ಮಾತನಾಡಿ, ಜಿಲ್ಲೆಯಲ್ಲಿ ಚುಟುಕು ಸಾಹಿತ್ಯ ಪರಿಷತ್ತು ಪರಿಣಾಮಕಾರಿ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಚುಟುಕುಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸುವ ಯೋಜನೆ ಇದೆ ಎಂದರು. ಸಾಹಿತ್ಯಾಸಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ “ಗೌರಿ ಮಕ್ಕಳ ಸಾಂಸ್ಕೃತಿಕ ಸಂಕಥನ’ ಎಂಬ ಪ್ರಬಂಧ ಮಂಡನೆಗಾಗಿ ಹಂಪಿ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪಡೆದ ಡಾ. ಅಶೋಕ ಡಂಬರ್ ಅವರನ್ನು ಸನ್ಮಾನಿಸಲಾಯಿತು. ಇದೇ ರೀತಿ “ವಿಶೇಷ ಸಾಮರ್ಥ್ಯವುಳ್ಳವರು ಎದುರಿಸುತ್ತಿರುವ ಸವಾಲುಗಳು ಮತ್ತು ಸಾದ್ಯತೆಗಳು” ಎಂಬ ಪ್ರಬಂಧಕ್ಕಾಗಿ ಡಾ. ವಿಜಯಕುಮಾರ ಬಡಿಗೇರರಿಗೂ ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಎಸ್.ವಿ ಪಾಟೀಲ್ ಗುಂಡೂರು, ನಾಗಭೂಷಣ ಅರಳಿ, ರಾಘವೇಂದ್ರ ದಂಡಿನ್, ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿಯ ಸದಸ್ಯ ಕೆ. ನಿಂಗಜ್ಜ ಉಪಸ್ಥಿತರಿದ್ದರು. ಜೊತೆಗೆ ತಾ.ಪಂ ಮಾಜಿ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಸುರೇಶ, ಕರವೇ ಪ್ರವೀಣಕುಮಾರ ಶೆಟ್ಟಿ ಬಣದ ಕೊಪ್ಪಳ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಅವರು ಭಾಗವಹಿಸಿದ್ದರು.
ಈ ಕವಿಗೋಷ್ಠಿಯಲ್ಲಿ ಯು.ಆರ್. ಶಿವರುದ್ರಪ್ಪ, ಚಿದಾನಂದ ಕೀರ್ತಿ, ಶಿವಪ್ರಸಾದ ಹಾದಿಮನಿ, ಮಾದೇವ ಮೋಟಿ, ಶರಣು, ಕರಿಸಿದ್ದನಗೌಡರು ಭಾಗವಹಿಸಿದ್ದರು, ಕವಿಗೋಷ್ಠಿಯಲ್ಲಿ ತಾರಾ ಸಂತೋಷ, ಶೋಭಾ ಗೌಡರ್ ಸೇರಿದಂತೆ ೩೫ಕ್ಕೂ ಹೆಚ್ಚು ಕವಿಗಳು ತಮ್ಮ ಚುಟುಕುಗಳು ಹಾಗೂ ಕವನಗಳೊಂದಿಗೆ ಪಾಲ್ಗೊಂಡು ಕಾರ್ಯಕ್ರಮದ ಶೋಭೆ ಹೆಚ್ಚಿಸಿದರು.
(ಅಶೋಕ ಗುಡಿಕೋಟಿ)
ತಾಲೂಕ ಅಧ್ಯಕ್ಷರು,
ಕರವೇ (ಪ್ರವೀಣಕುಮಾರ ಶೆಟ್ಟಿ ಬಣ)
ಅಂಗವಿಕಲರ ಘಟಕ.
ಮೋ:ನಂ: ೯೯೭೨೭೨೩೪೦೬