ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.

ಆಗಸ್ಟ್ 10 ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೆಯ ಆರಾಧನಾ ಮಹೋತ್ಸವ… ಗುರುರಾಜ್ ಆಚಾರ.

ಗಂಗಾವತಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 10ರಿಂದ ಮೂರು ದಿನಗಳ ಕಾಲ ಆರಾಧನಾ ಮಹೋತ್ಸವ ಜರುಗಲಿದೆ.

ಈ ಮಹೋತ್ಸವವು ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 354ನೇ ಆರಾಧನೆಗೆ ಸಮರ್ಪಿತವಾಗಿದೆ.

ಶ್ರೀಮಠದ ವ್ಯವಸ್ಥಾಪಕ ಸಾಮವೇದಿ ಗುರುರಾಜ ಆಚಾರ್ ಹಾಗೂ ಪ್ರಧಾನ ಅರ್ಚಕ ಭೀಮಸೇನ್ ಆಚಾರ್ ಮಾಧ್ಯಮದೊಂದಿಗೆ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು.

ಅವರು ಮಂತ್ರಾಲಯದ ಪೀಠಾಧಿಕಾರಿಗಳಾದ ಶ್ರೀ ಶುಭೋದಯ ಶ್ರೀ ಸುಬುಧ್ಯೇಂದ್ರ ತೀರ್ಥ ಶ್ರೀ ಪಾದಂಗಳವರ ಅಜ್ಞಾನುಸಾರವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳವರ ಆರಾಧನಾ ಮೋತ್ಸವ ಜರುಗಲಿದೆ.

ಮಹೋತ್ಸವದ ಅವಧಿಯಲ್ಲಿ ಪ್ರತಿದಿನ ಅಷ್ಟೋತ್ತರ ಶತನಾಮಾವಳಿ ಪಾರಾಯಣ, ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ. ಭಜನೆ, ಅಲಂಕಾರ ಹಾಗೂ ಬ್ರಾಹ್ಮಣರ ಸೇವೆ ಜರುಗಲಿದೆ.

ಆರಾಧನೆಯ ಮುಖ್ಯ ದಿನವಾದ ಆಗಸ್ಟ್ 11 ರಂದು ಮಧ್ಯರಾದನೆ ನಡೆಯಲಿದ್ದು, ಆಗಸ್ಟ್‌ 12 ರಂದು ಉತ್ತರಾಧನೆ ನಡೆಯಲಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳವರ ಸರ್ವಲಾಂಕೃತ ಭವ್ಯ ರಥೋತ್ಸವ ಸಕಲ ವಾದ್ಯ ವೈಭವದೊಂದಿಗೆ ಹಾಗೂ ವಿವಿಧ ಭಜನಾ ಮಂಡಳಿ ಅವರಿಂದ ಜರುಗಲಿದೆ.

ಸಕಲ ಭಕ್ತಾದಿಗಳು ಭಾಗವಹಿಸಿ ಶ್ರೀ ರಾಯರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಮನವಿ ಮಾಡಿದರು.

ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 354ನೇ ಆರಾಧನಾ ಮಹೋತ್ಸವ ಜರುಗಲಿದೆ ಎಂದು ಶ್ರೀಮಠದ ವ್ಯವಸ್ಥಾಪಕ ಸಾಮವೇದಿ ಗುರುರಾಜ ಆಚಾರ್ ಹಾಗೂ ಪ್ರಧಾನ ಅರ್ಚಕ ಭೀಮಸೇನ್ ಆಚಾರ್ ಹೇಳಿದರು.

ಅವರು ಶ್ರೀಮಠದ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ ಮಂತ್ರಾಲಯದ ಪೀಠಾಧಿಕಾರಿಗಳಾದ ಶ್ರೀ ಶುಭೋದಯ ಶ್ರೀ.ಸುಬು ಧ್ಯೇoದ್ರ ತೀರ್ಥ ಶ್ರೀ ಪಾದಂಗಳವರ ಅಜ್ಞಾನುಸಾರವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳವರ ಆರಾಧನಾ ಮೋತ್ಸವ ಜರುಗಲಿದ್ದು.

ದಿನಂಪ್ರತಿ ಅಷ್ಟೋತ್ತರ ಶತನಾಮಾವಳಿಯೊಂದಿಗೆ ರಾಯರ ಬೃಂದಾವನಕ್ಕೆ ಕ್ಷೀರಾಭಿಷೇಕ ಪಂಚಾಮೃತ ಅಭಿಷೇಕ, ಭಜನೆ ಅಲಂಕಾರ ಬ್ರಾಹ್ಮಣರ ಸೇವೆ ಜರುಗಲಿದೆ.

ದಿನಾಂಕ 11 ಸೋಮವಾರ ಮಧ್ಯರಾಧನೆ, ದಿನಾಂಕ 12 ಮಂಗಳವಾರ ಉತ್ತರಾಧನೆ, ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳವರ ಸರ್ವಲಾಂಕೃತ ಭವ್ಯ ರಥೋತ್ಸವ ಸಕಲ ವಾದ್ಯ ವೈಭವದೊಂದಿಗೆ ಹಾಗೂ ವಿವಿಧ ಭಜನಾ ಮಂಡಳಿ ಅವರಿಂದ ಜರುಗಲಿದ್ದು ಸಕಲ ಭಕ್ತಾದಿಗಳು ಭಾಗವಹಿಸಿ ಶ್ರೀ ರಾಯರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಮನವಿ ಮಾಡಿದರು.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading