ಗಂಗಾವತಿ ಮಾನ್ಯ ಶಾಸಕರಿಂದ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ

ಗಂಗಾವತಿ ಮಾನ್ಯ ಶಾಸಕರಿಂದ ವಿಜೇತ ಮಕ್ಕಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ

ಇಂದು ಗಂಗಾವತಿ ತಾಲೂಕ ಪಂಚಾಯಿತಿ ಮತ್ತು ಗಂಗಾವತಿ ನಗರಸಭೆ ಹಾಗೂ ಗಂಗಾವತಿ ಕ್ಷೇತ್ರ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ತಾಲೂಕ ಕ್ರೀಡಾಂಗಣದಲ್ಲಿ ಜರುಗಿತು.

ಇದರ ಪ್ರಯುಕ್ತ ನಡೆದ ಅನೇಕ ಸ್ಪರ್ಧೆಗಳಲ್ಲಿ ಶ್ರೀ ಚನ್ನಬಸವ ಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಶ್ರೀಮತಿ ಗಂಗಮ್ಮ ಗುರುಪಾದಗೌಡ ಮಾಲಿ ಪಾಟೀಲ್ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರ್ ಮಣಿಕಂಠ ತಂದೆ ರಮೇಶ್ ಇವನು ಸ್ಥಳದಲ್ಲಿಯೇ ಪ್ರಬಂಧ ಬರೆದು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾನೆ.

ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡ ಗಂಗಾವತಿಯ ಶಾಸಕರು ಸನ್ಮಾನ್ಯ ಶ್ರೀ ಜನಾರ್ದನ್ ರೆಡ್ಡಿ ಅವರು ವಿದ್ಯಾರ್ಥಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ನೀಡಿ ಅಭಿನಂದಿಸಿದ್ದಾರೆ.

ಪ್ರಯುಕ್ತ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಈತನ ಪ್ರತಿಭೆಗೆ ಶ್ಲಾಘಿಸಿದ್ದಾರೆ.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading