ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಸಂಚಾಲಕರಾಗಿ ಶ್ರೀಮತಿ ಇಂದಿರಾ ಲೋಕೇಶ್ ಆಯ್ಕೆ.

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಹಾಸನ ಜಿಲ್ಲಾ ಘಟಕವು ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾ ಕುಂಚ ಹೀಗೆ ವಿಭಿನ್ನ ಕಾರ್ಯಕ್ರಮಗಳನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಲವಾರು ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿಗಳನ್ನು ನೀಡುತ್ತಾ ಎಲೆಮರೆಕಾಯಿಯಂತಿರುವ ನೂರಾರು ಪ್ರತಿಭೆಗಳನ್ನು ಗುರುತಿಸುತ್ತಾ ಬಂದಿದೆ.

ಪ್ರಸ್ತುತ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಸನ ಜಿಲ್ಲಾ ಘಟಕದ ಸಂಚಾಲಕರಾನ್ನಾಗಿ ನೇಮಿಸಿ ರಾಜ್ಯಾಧ್ಯಕ್ಷರಾದ ಶ್ರೀ ಮಧುನಾಯ್ಕ ಲಂಬಾಣಿ ಅವರು ಅನುಮೋದನೆ ಮಾಡಿದ್ದಾರೆ. ಇಂದಿರಾ ಲೋಕೇಶ್ ರವರು ಸರಕಾರಿ ಪ್ರೌಢಶಾಲೆ ಬೆಳಗೋಡು ಸಕಲೇಶಪುರ ತಾಲೂಕು ಹಿಂದಿ ಭಾಷಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಕವನ, ಕಥೆ, ಲೇಖನ ಹಾಗೂ ಪ್ರಬಂಧಗಳ ರಚನೆ ಆಗಿರುತ್ತದೆ. ಜಿಲ್ಲಾ ಮಟ್ಟದ ಕವಿ ವಿಭೂಷಣ, ರಾಜ್ಯ ಮಟ್ಟದ ಕನ್ನಡ ರತ್ನ, ರಾಜ್ಯಮಟ್ಟದ ಕವಿರತ್ನ, ರಾಜ್ಯ ಮಟ್ಟದ ಕರುನಾಡು ಸಿರಿ ಸಂಪದ ಸಾಹಿತ್ಯ ಸೇವಾ ಪ್ರಶಸ್ತಿ, ಡಾ. ಪುನೀತ್ ರಾಜ್ ಕುಮಾರ್ ಪುರಸ್ಕಾರ, ಸಾಹಿತ್ಯ ಸೌರಭ, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ, ರಾಜ್ಯ ಮಟ್ಟದ ರಾಷ್ಟ್ರ ಭಾಷಾ ಸೇವಾ ರತ್ನ ಪುರಸ್ಕಾರ, ಹೀಗೆ ಹತ್ತು ಹಲವು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ.

ಹಾಸನ ಜಿಲ್ಲಾ ಅಧ್ಯಕ್ಷರಾದ ಸುಂದರೇಶ್ ಡಿ.ಉಡುವಾರೆ, ಗೌರವಾಧ್ಯಕ್ಷರು ಶ್ರೀ ವೆಂಕಟೇಶ.. ಉದಯ ವರದಿ ಪತ್ರಿಕೆಯ ಸಂಪಾದಕರು ಹಾಸನ, ಡಾ.ಲೋಕೇಶ ಉಪನ್ಯಾಸಕರು ಹೊಳೆನರಸೀಪುರ, ಡಾ. ಬರಾಳು ಶಿವರಾಮ, ಚನ್ನರಾಯಪಟ್ಟಣ ತಾಲ್ಲೂಕು. ಕಾರ್ಯದರ್ಶಿ ದಿಬ್ಬೂರು ರಮೇಶ, ಸಂಘಟನಾ ಕಾರ್ಯದರ್ಶಿ, ಶಿವಕುಮಾರ ಆರ್. ವಿಶ್ವಾಸ್ ಡಿ. ಗೌಡರು ಸಕಲೇಶಪುರ ತಾ. ಅಧ್ಯಕ್ಷರು. ಪರಮೇಶ್ ಮಡಬಲು. ಗಿರಿಜಾ ನಿರ್ವಾಣಿ. ರಾಣಿ ಚರಾಶ್ರಿ. ಬೋರೇಗೌಡರು ಅರಸೀಕೆರೆ. ಕಿರಣ್ ಅಧ್ಯಕ್ಷರು ಚುಸಾಪ ಬೇಲೂರು. ಎಸ್. ಎಸ್. ಪುಟ್ಟೇಗೌಡರು ಅಧ್ಯಕ್ಷರು ಅರಕಲಗೂಡು ತಾ. ಹಾಗು ಜಿಲ್ಲೆಯ ಎಲ್ಲಾ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading