ಅರಸೀಕೆರೆ: ರೋಟರಿ ಭವನದಲ್ಲಿ ಅಕ್ಟೋಬರ್-11 ಶನಿವಾರ ಸುಂದರ ನವಿಲಿಗೆ ಚಂದದ ಗರಿ ಪುಸ್ತಕ ಲೋಕಾರ್ಪಣಿ ಸಮಾರಂಭವು ನೆರವೇರಿತು. ಕಾತ್ಯಾಯಿನಿ ತೇವರಿಮಠ ನಿರೂಪಣೆ, ಶಫೀತಾಬೇಗಂರಿಂದ ಪ್ರಾರ್ಥನೆ , ಬೇಲೂರು ಮಧುಮಾಲತಿ ರುದ್ರೇಶ್ ರಿಂದ ಸ್ವಾಗತ ನಂತರ ಪರಮೇಶ್ ಕಸಾಪ ಅರಸೀಕೆರೆ ಇವರು ಉದ್ಘಾಟನಾ ನುಡಿಯಲ್ಲಿ ಸಾಹಿತ್ಯವು ವಿಶಾಲವಾದ ಪ್ರಕ್ರಿಯವಾಗಿದೆ. ಇರುವ ಸ್ಥಿತಿಯನ್ನ ವೈಭವೀಕರಿಸಿ ಕಥೆ, ಕವನ , ನಾಟಕ ಹೀಗೆ ವಿವಿಧ ಪ್ರಕಾರವು ರಚಿಸುವುದಾಗಿದೆ ಎಂದು ತಾವು ನಾಟಕದಲ್ಲಿ ನಟಿಸುವಾಗ ಆದ ಕೆಲವು ಅನುಭವಗಳನ್ನು ಹಂಚಿಕೊಂಡರು.
ಪ್ರಾಸ್ತಾವಿಕ ನುಡಿಯಲ್ಲಿ ಅರಸೀಕೆರೆ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಪದ್ಮಮೂರ್ತಿಯವರು ಲೇಖಕಿ ಸಾವಿತ್ರಮ್ಮ ಓಂಕಾರ್ ಅವರು ಸಾಹಿತ್ಯದಲ್ಲಿ ನಡೆದುಬಂದ ಹೆಜ್ಜೆಗಳನ್ನ ಹೇಳಿ ಅಭಿನಂದನೆ ಸಲ್ಲಿಸಿದರು. ಹಾಸನದ ಸಾಹಿತಿಗಳು ಗೊರೂರು ಅನಂತರಾಜುರವರು ಕೃತಿ ಪರಿಚಯವನ್ನ ಸುದೀರ್ಘವಾಗಿ ಮಾಡಿಕೊಡುತ್ತಾ ಅವರ ಅನೇಕ ಕೃತಿಗಳನ್ನ ಪರಿಚಯಿಸಿಕೊಟ್ಟಿರುವ ಕೃತಿಯ ಲೇಖಕಿ ಸಾವಿತ್ರಮ್ಮ ಓಂಕಾರ್ ಅವರ ಕಾರ್ಯನ ಬಗ್ಗೆ ಶ್ಲಾಘಿಸಿದರು.
ಕೃತಿಯ ಲೇಖಕಿ ತಮ್ಮ ಮನದ ಮಾತಿನಲ್ಲಿ ಬಂದ ಪ್ರತಿಯೊಬ್ಬರಿಗೂ ಕೃತಿಯಲ್ಲಿರುವ ಎಲ್ಲಾ ೭೪ಜನ ಸಾಧಕರ ಬಗ್ಗೆ ಪ್ರಶಂಸೆ ಮತ್ತು ಅಭಿನಂದನೆ ಸಲ್ಲಿಸಿದರು. ನಾಗರತ್ನ ರಾಜಶೇಖರ್ ರವರು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿ ಸ್ವರಚಿತ ಚುಟುಕು ವಾಚನ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಾಸನದ ಪತ್ರಕರ್ತರು, ಕಸಾಪ ಮಾಜಿ ಅಧ್ಯಕ್ಷರು ಉದಯರನಿ ಮಾತನಾಡಿ ಸಾಹಿತಿಗಳಿಗಾಗೇ ಒಂದು ಪುಟವನ್ನು ಮೀಸಲಿಟ್ಟ ಪ್ರತಿನಿಧಿ ಪತ್ರಿಕೆಯ ಬಗ್ಗೆ ತಿಳಿಸಿದರು. ಕೃತಿಯ ಬಗ್ಗೆ ಪ್ರಶಂಸನೀಯ ನುಡಿಗಳನ್ನು ಆಡಿ ಪ್ರತಿಯೊಬ್ಬ ಸಾಹಿತಿಗಳನ್ನು ಉತ್ತೇಜಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಬರಹಗಾರರ ಸಂಘದ ಜಿಲ್ಲಾಧ್ಯಕ್ಷರು ಸುಂದರೇಶ್ ಡಿ. ಉಡುವಾರೆ, ಚನ್ನರಾಯಪಟ್ಟಣ ತಾಲ್ಲೂಕು ಅಧ್ಯಕ್ಷರು ಡಾ. ಬರಾಳು ಶಿವರಾಮ ವೇದಿಕೆಯಲ್ಲಿದ್ದು ಮಾತನಾಡಿದರು. 
ಪುಸ್ತಕದಲ್ಲಿರುವ ಸಾಧಕರುಗಳಾದ ಮಧುಮಾಲತಿ ರುದ್ರೇಶ್, ಮಾಲಾ ಚಲುವನಹಳ್ಳಿ, ಸುಭದ್ರಾ, ಶಫೀತಾ ಬೇಗಂ, ಪ್ರೇಮಲತಾ ಸೋಮಶೇಖರ್, ಸುಧಾ ಬಾಣಾವರ. ವಿಶ್ವಾಸ್ ಗೌಡ. ಮಲ್ಲೇಶ್, ಉಮೇಶ್ ಹೊಸಹಳ್ಳಿ, ರುದ್ರೇಶ್, ಚಂದ್ರು ಬಾಣಾವರ, ಡಾ. ಹರೀಶ್ ಉಪಾನ್ಯಾಸಕರು, ಮುಂತಾದವರು ಚುಟುಕು ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಬಂದ ಪ್ರತಿಯೊಬ್ಬರಿಗೂ ಪುಸ್ತಕದ ಜೊತೆ ಸನ್ಮಾನ ಸಲ್ಲಿಸಲಾಯಿತು.
