ಸೌಂದರ್ಯ ಲಹರಿ ಪಾರಾಯಣದಿಂದ ಸಂಕಷ್ಟ ದೂರ: ವೀಣಾ ಅಳವಂಡಿಕರ್

ಸೌಂದರ್ಯ ಲಹರಿ ಪಾರಾಯಣದಿಂದ ಸಂಕಷ್ಟ ದೂರ: ವೀಣಾ ಅಳವಂಡಿಕರ್

ಗಂಗಾವತಿ: ನಗರದ ಶಂಕರ ಮಠದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರ ವಿರಚಿತ ಸೌಂದರ್ಯ ಲಹರಿ ಸಪ್ತಾಹವನ್ನು ಅಕ್ಟೋಬರ್‌-11 ರಿಂದ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ಶಾರದಾ ಶಂಕರ ಭಕ್ತ ಭಜನಾ ಮಂಡಳಿಯ ಹಿರಿಯ ಸದಸ್ಯರಾದ ಶ್ರೀಮತಿ ವೀಣಾ ರಾಘವೇಂದ್ರ ಅಳವಂಡಿಕರ್‌ ಹಾಗೂ ಸಂಚಾಲಕಿ ಗಾಯತ್ರಿ ಶ್ರೀಧರ್ ಅಳವಂಡಿಕರ್‌ ಮಾತನಾಡಿ ಜಗದ್ಗುರು ಭಾರತೀ ತೀರ್ಥ ಮಹಾಸ್ವಾಮಿಗಳ 75 ನೆಯ ವರ್ಧಂತಿ ಮಹೋತ್ಸವ ಹಾಗೂ ಆನಂದ ಭಾರತಿ ಅಡಿಯಲ್ಲಿ ದೇಶಾದ್ಯಂತ ಶಂಕರ ಮಠಗಳಲ್ಲಿ ಶ್ರೀ ಸೌಂದರ್ಯ ಲಹರಿ ಸಪ್ತಾಹವನ್ನು ನಡೆಸಲಾಗುತ್ತಿದ್ದು ಇದರಿಂದ ಸಂಕಷ್ಟಗಳು ದೂರವಾಗುವುದರ ಜೊತೆಗೆ ಪಾರಾಯಣದಿಂದ ಬಹು ರೋಗ ನಿವಾರಣೆ ಆಗುವುದು ಎಂದು ಪಾರಾಯಣದ ಮಹತ್ವ ಕುರಿತು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಧ ಭಜನಾ ಮಂಡಳಿಯ ಮಹಿಳೆಯರು ಪಾಲ್ಗೊಂಡಿದ್ದರು.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading