Headlines

ನವೆಂಬರ್-೮ ರಂದು ಗಂಗಾವತಿಯಲ್ಲಿ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಂಗೀತ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ

ಗಂಗಾವತಿ: ನಗರದ ಶ್ರೀ ಮಾತಾ ಕರೋಕೆ ಸ್ಟುಡಿಯೋ ಹಾಗೂ ಸಪ್ತಸ್ವರ ಸಾಂಸ್ಕೃತಿಕ ಕಲಾ ಬಳಗ ಇವರಿಂದ ನವೆಂಬರ್-೮ ಶನಿವಾರ ಸಂಜೆ ೫:೩೦ಕ್ಕೆ ಗಂಗಾವತಿಯ ಕೋರ್ಟ್ ಮುಂಭಾಗದ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸ್ಥಳೀಯ ಹವ್ಯಾಸಿ ಕಲಾವಿದರಿಂದ ಸಂಗೀತ ಸಂಭ್ರಮ, ಕರ್ನಾಟಕ ರಾಜ್ಯೋತ್ಸವ ಹಾಗೂ ಡಾ. ಪುನೀತ್ ರಾಜಕುಮಾರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ನಗರಸಭೆ ಸದಸ್ಯರಾದ ಆರ್. ಕಣ್ಣನ್ ಪ್ರಕಟಣೆಯಲ್ಲಿ ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯೋಧ್ಯಮಿಗಳಾದ ಶಿವಪ್ಪ ಗಾಳಿ ವಹಿಸಲಿದ್ದು, ಡಿ.ವೈ.ಎಸ್.ಪಿ ಆದ ಜಯಪ್ಪ ಎಸ್. ನ್ಯಾಮಗೌಡ್ರು ಜ್ಯೋತಿ ಬೆಳಗಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಪೌರಾಯುಕ್ತರು, ನಗರಸಭೆ ಸದಸ್ಯರುಗಳು, ಗುತ್ತಿಗೆದಾರರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಸಂಗೀತಾಸಕ್ತರು, ಪತ್ರಿಕಾ ಹಾಗೂ ದೃಶ್ಯ ಮಾಧ್ಯಮಗಳ ಪತ್ರಕರ್ತರು, ವರದಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ. https://aratt.ai/@vishwaroopa_news_blog

 

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading