ಹೆಚ್.ಎಸ್. ಪ್ರತಿಮಾಹಾಸನ್ ಗೆ “ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ” ಪ್ರಧಾನ

ಹೆಚ್.ಎಸ್. ಪ್ರತಿಮಾಹಾಸನ್ ಗೆ “ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ” ಪ್ರಧಾನ

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ನಯನ ಸಭಾಂಗಣ ಕನ್ನಡ ಭವನದಲ್ಲಿ ಡಿ: 28 ರಂದು  ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ (ರಿ) ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ) ವತಿಯಿಂದ ವಿಶ್ವಮಾನವ ದಿನಾಚರಣೆ ಹಾಗೂ ಮೂರು ವರ್ಷ ಪೂರ್ಣಗೊಳಿಸಿದ ಅನ್ನಪೂರ್ಣೇಶ್ವರಿ ಫೌಂಡೇಶನ್ ಸ್ಥಾಪಕ ದಿನೋತ್ಸವ ಮತ್ತು ರಾಜ್ಯಮಟ್ಟದ “ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ” ಯ ಕಾರ್ಯಕ್ರಮವನ್ನು ಹಮ್ಮಿಕೊಂಡು ಈ ಮೇಲಿನ ಪ್ರಶಸ್ತಿಗೆ ಮಹಿಳಾ ಸಾಧಕಿಯಾದ ಹಾಸನ ನಗರದ ಶಿಕ್ಷಕಿ. ಸಾಮಾಜಿಕ ಚಿಂತಕಿಯಾದ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಶಿಕ್ಷಣ ಕ್ಷೇತ್ರಕ್ಕೆ ಆಯ್ಕೆ ಮಾಡಿ ಪ್ರತಿಷ್ಠಿತವಾದ ” ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು’ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸಾಹಿತಿ.ಪತ್ರಕರ್ತೆ ಹಾಗೂ ‘ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ’ ಸಂಸ್ಥಾಪಕ ಅಧ್ಯಕ್ಷರು, ಬಹುಮುಖ ಪ್ರತಿಭೆಯಾಗಿ ಸದಾ ಕ್ರಿಯಾಶೀಲರಾಗಿ ಜಿಲ್ಲೆ, ರಾಜ್ಯಮಟ್ಟದಲ್ಲಿ ಹಲವಾರು ಸಂಘ ಸಂಸ್ಥೆಯಲ್ಲಿ ಪದಾಧಿಕಾರವನ್ನು ಪಡೆದು ಕಾರ್ಯನಿರ್ವಹಿಸುತ್ತಾ, ನಾಡು ನುಡಿ ಕಲೆ ಸಂಸ್ಕೃತಿಗೆ ನೀಡಿರುವ ಹೆಚ್.ಎಸ್. ಪ್ರತಿಮಾ ಇವರ ಸೇವೆಯು ಅಪಾರವಾಗಿದ್ದು.ನೂರಾರು ಪ್ರಶಸ್ತಿಗಳನ್ನು ಪಡೆದಿರುವ ಇವರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಪ್ರಶಸ್ತಿಯನ್ನು ಪಡೆದು ಹಾಸನದ ಹೆಮ್ಮೆಯ ಪುತ್ರಿಯಾಗಿ ಗುರುತಿಸಿಕೊಂಡಿರುವ ಮಹಿಳಾ ಸಾಧಕಿಯಾಗಿರುತ್ತಾರೆ. ಹಲವಾರು ಪ್ರಕಾರಗಳಲ್ಲಿ 12 ಕ್ಕೂ ಹೆಚ್ಚು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಹಲವು ಕೃತಿ ಬಿಡುಗಡೆಗೆ ಸಿದ್ಧವಾಗುತ್ತಿದ್ದು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಹಾಗೂ ಗಾಯಕಿ, ಅಂಕಣಗಾರ್ತಿ, ಹಲವಾರು ಪ್ರಕಾರಗಳಲ್ಲಿ ಪತ್ರಿಕೆಗಳಿಗೆ ಬರೆಯುತ್ತಿರುವ ಇವರನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಪ.ಪೂ ಶ್ರೀಶ್ರೀಶ್ರೀ ಷ.ಬ್ರ. ಮಹರ್ಷಿ ತಪೋರತ್ನ ಶಿವಾಚಾರ್ಯರು, ಶಿವಸಿದ್ಧಿ ಸೋಮೇಶ್ವರ ಮಹಾ ಸಂಸ್ಕೃತಿಗಳು, ಶ್ರೀ ಕ್ಷೇತ್ರ ಮುಕ್ತಿಮಠ, ಭೂತರಮನಹಟ್ಟಿ, ಬೆಳಗಾವಿ. ಹಾಗೂ ಶ್ರೀಮತಿ ನಿತ್ಯ ಎಂ.ಆಚಾರ್ ಅಧ್ಯಕ್ಷರು ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ). ನಿರಂಜನ್ ಶೆಟ್ಟಿ, ಶ್ರೀ ಸುಜ್ಞಾನಮೂರ್ತಿ. ಪಿ, ಇನ್ನು ಹಲವರು ಉಪಸ್ಥಿತರಿದ್ದರು https://aratt.ai/@vishwaroopa_news_blog

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading