ಗಂಗಾವತಿ ಸೂರ್ಯನಾಯಕ ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗಂಗಾವತಿ ಸೂರ್ಯನಾಯಕ ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗಂಗಾವತಿ: ತಾಲೂಕಿನ ಬಸಾಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೂರ್ಯನಾಯಕ ತಾಂಡದಲ್ಲಿ ಫೆಬ್ರವರಿ-15 ರಂದು ಶ್ರೀ ಸಂತ ಸೇವಾಲಾಲ್ ಮಹಾರಾಜರ 287ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಸಮಾಜದ ಮುಖಂಡ ಶಂಕರ ನಾಯ್ಕ ಸಂತ ಶ್ರೀ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿ ಬಳಿಕ ಮಾತನಾಡಿ, ಶ್ರಮ ಜೀವಿಗಳು, ಅಲೆಮಾರಿ ಬುಡಕಟ್ಟು ಸಮುದಾಯದ ಶ್ರಮಿಕ ಬಡ ಕುಟುಂಬದಲ್ಲಿ ಹುಟ್ಟಿದ ಸೇವಾಲಾಲ್ ಅವರ ಕೊಡುಗೆ ಸಮಾಜಕ್ಕೆ ಅಪಾರ ಕೊಡುಗೆ ಇದೆ ಎಂದರು.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಮಲ್ಲಿಕಾರ್ಜುನ, ಗ್ರಾ.ಪಂ. ಸದಸ್ಯೆ ಗೌರಮ್ಮ ಶಂಕರ ನಾಯ್ಕ, ಸಮಾಜದ ಮುಖಂಡರಾದ ಹನುಮಂತಪ್ಪ ನಾಯ್ಕ, ಶಂಕ್ರಪ್ಪ ಡಾವು, ಸಕ್ರಪ್ಪ ಕಾರಬಾರಿ, ಹನುಮಂತಪ್ಪ ಪೂಜಾರಿ, ಬಾಲಾಜಿ ಮೇಸ್ತ್ರಿ, ಎಸ್.ವಿ ಗೋಪಾಲಕೃಷ್ಣ, ಹಾಗೂ ಯುವಕರು, ಮಹಿಳೆಯರು ಸೇರಿದಂತೆ ಇತರರು ಇದ್ದರು.  https://aratt.ai/@vishwaroopa_news_blog

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading