Local

ಕೊಪ್ಪಳ ತಾಲೂಕು 2ನೇ ಸಮ್ಮೇಳನಾಧ್ಯಕ್ಷರಾಗಿ ಶ್ರೀನಿವಾಸ ಚಿತ್ರಗಾರ ಆಯ್ಕೆ: ಗುಡಿಕೋಟಿ

ಗಂಗಾವತಿ: ಕೊಪ್ಪಳ ತಾಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನವು ಬರುವ ಮೇ ತಿಂಗಳ ಕೊನೆವಾರದಲ್ಲಿ ಕೊಪ್ಪಳ ನಗರ ಅಥವಾ ಗ್ರಾಮೀಣ ಭಾಗದಲ್ಲಿ ನಡೆಸಲು ತೀರ್ಮಾನಿಸಿದ್ದು, ಈ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಶಿಕ್ಷಕರು ಹಾಗೂ ಕವಿಗಳಾದ ಶ್ರೀನಿವಾಸ ಚಿತ್ರಗಾರ ಅವರನ್ನು ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಗಂಗಾವತಿ ತಾಲೂಕ ಅಧ್ಯಕ್ಷರಾದ ಅಶೋಕ ಗುಡಿಕೋಟಿ ಹೇಳಿದರು.

ಈ ಪೂರ್ವಭಾವಿ ಸಭೆಯಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ರುದ್ರಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಡಾ. ಮಹಾಂತೇಶ್‌ ನೆಲಾಗಣಿ, ತಾಲೂಕು ಅಧ್ಯಕ್ಷ ಮೈಲಾರಪ್ಪ ಉಂಕೀ, ಪದಾಧಿಕಾರಿಗಳಾದ ಶಿವಪ್ರಸಾದ ಹಾದಿಮನಿ, ಶಿವಪ್ಪ ಕೋಗಳಿ, ಬಸವಶ್ರೀ ಸೋಮನಾಳ ಇತರರು ಹಾಜರಿದ್ದರು.

ಶ್ರೀನಿವಾಸ ಚಿತ್ರಗಾರ ಅವರು ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದವರಾಗಿದ್ದು, ಇವರು ಯತ್ನಟ್ಟಿಯ ಸ.ಹಿ.ಪ್ರಾ ಶಾಲೆಯಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿದ್ದು, ಇವರು ಒಬ್ಬ ಹಿರಿಯ ಕವಿಯಾಗಿ 15ಕ್ಕೂ ಅಧಿಕ ಮಕ್ಕಳ ಸಾಹಿತ್ಯ ಸೇರಿದಂತೆ ಇತರ ಪುಸ್ತಕಗಳನ್ನು ಹೊರತಂದಿದ್ದಾರೆ. ಅಲ್ಲದೇ ವಿವಿಧ ಕವಿಗೋಷ್ಠಿಯಲ್ಲಿ ಹಾಗೂ ಸಭೆ ಸಮಾರಂಭಗಳಲ್ಲಿ ಉದ್ಘಾಟಕರಾಗಿ, ಅಧ್ಯಕ್ಷರಾಗಿ, ಉಪನ್ಯಾಸಕರಾಗಿ ಭಾಗವಹಿಸಿದ್ದಾರೆ. ಸ್ಥಳೀಯ ಸಾಹಿತ್ಯ ಸಮ್ಮೇಳನಗಳ ಕೆಲವು ಸ್ಮರಣ ಸಂಚಿಕೆಗಳಲ್ಲಿ ಸಂಪಾದಕ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರನ್ನು ಕೊಪ್ಪಳ ತಾಲೂಕು 2ನೇ ಚುಟುಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು.  https://aratt.ai/@vishwaroopa_news_blog

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading