ಮಾಯಾವತಿಯವರ ೬೯ನೇ ಜನ್ಮದಿನದ ನಿಮಿತ್ಯ ನಗರದಲ್ಲಿ ಕಾರ್ಯಕರ್ತರಿಂದ ಸಮಾಜಮಖಿ ಕಾರ್ಯಗಳು.

ಗಂಗಾವತಿ: ಬಹುಜನ ಸಮಾಜ ಪಕ್ಷದ ಹಿರಿಯ ನಾಯಕಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಜನ್ಮದಿನದ ನಿಮಿತ್ಯ ಜನವರಿ-೧೫ ಬುಧವಾರ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸಮಾಜ ಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಾಯಾವತಿಯವರ ಜನ್ಮ ದಿನದ ಆಚರಣೆ ಮಾಡಲಾಯಿತು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಹುಲಿಗೇಶ ದೇವರಮನಿ ಪ್ರಕಟಣೆಯಲ್ಲಿ ತಿಳಿಸಿದರು.

ಅವರು ಮಾಯಾವತಿಯವರ ಜನ್ಮದಿನಾಚರಣೆ ನಿಮಿತ್ಯ ನಗರದ ಅನಾಥಾಶ್ರಮದಲ್ಲಿ ಕೇಕ್ ಕಟ್ ಮಾಡಿ, ಅಲ್ಲಿನ ಮಕ್ಕಳಿಗೆ ಹಣ್ಣು-ಹಂಪಲು ವಿತರಿಸಿ ವಿಭಿನ್ನ ರೀತಿಯಲ್ಲಿ ಹುಟ್ಟು ಹಬ್ಬವನ್ನು ಆಚರಿಸಿ ಮಾತನಾಡಿದರು. ಮಾಯಾವತಿಯವರು ಸಾಕಷ್ಟು ಏಳುಬೀಳುಗಳನ್ನು ದಾಟಿ ರಾಜಕೀಯ ಪ್ರವೇಶಿಸಿ, ದಲಿತರ ಪರವಾಗಿ, ಶೋಷಿತರ ಪರವಾಗಿ ಅನೇಕ ಸಮಾಜಮುಖಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇವರಿಗೆ ಆ ದೇವರು ಹೆಚ್ಚಿನ ಆಯುಷ್ಯ ಆರೋಗ್ಯ ಕರುಣಿಸಿ ರಾಜಕೀಯ ಜೀವನ ವೃದ್ಧಿಸಲಿ ಎಂದು ಹಾರೈಸುತ್ತೇವೆ ಎಂದು ತಿಳಿಸಿದರು

Go back

Your message has been sent

Warning
Warning
Warning
Warning

Warning.

ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಾದ ಮಲ್ಲೇಶ ನಾಯಕ, ರಮೇಶ ಕಾಳೆ, ಶಾಂತಕುಮಾರ, ದೊಡ್ಡ ಮಾರೆಪ್ಪ, ಮಲ್ಲೇಶ ನಾಯ್ಕ, ನಿಂಗಪ್ಪ ನಾಯಕ, ನೀಲಪ್ಪ, ಹುಲುಗಪ್ಪ ಕೊಜ್ಜಿ ಹಾಗೂ ಪಕ್ಷದ ಇತರರು ಹಾಜರಿದ್ದರು.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading