ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ದಾರಿದೀಪವಾಗಿದೆ: ಪಾರ್ಥಸಾರಥಿ

ಗಂಗಾವತಿ: ವಿಶ್ವದಲ್ಲಿ ಬೃಹತ್ ಪ್ರಜಾಪ್ರಭುತ್ವ ಹೊಂದಿದ ಭಾರತ ದೇಶ ಅತ್ಯಂತ ಪವಿತ್ರವಾದ ಸಂವಿಧಾನವನ್ನು ಹೊಂದಿದ್ದು ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಜೀವನದ ಉದ್ದಕ್ಕೂ ನಡೆಸಿಕೊಳ್ಳುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕೆಂದು ಸಮೀಪದ ಶ್ರೀರಾಮನಗರ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಸಂಸ್ಥಾಪಕ ಅಧ್ಯಕ್ಷ ಪಾರ್ಥ ಸಾರಥಿ ಹೇಳಿದರು.

ಅವರು ರವಿವಾರದಂದು. 76ನೇ ಗಣರಾಜ್ಯೋತ್ಸವಕ್ಕೆ ಬಾತ್ ಬಾ ಗಾಂಧಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಸಮಾನತೆ ಸ್ವಾತಂತ್ರ್ಯತೆ ಬ್ರಾತೃತ್ವವನ್ನು ಭಾವನೆಯನ್ನು ಆಡಳಿತದ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಕಾಪಾಡುವ ಉದ್ದೇಶದಿಂದ ಶಾಸಕಾಂಗ ಕಾರ್ಯಾಂಗ ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನು ಸಂವಿಧಾನದಲ್ಲಿ ಉಲ್ಲೇಖಿಸಲಾಗಿದ್ದು ಕಾಣಬಹುದಾಗಿದೆ ಎಂದು ತಿಳಿಸಿ ದರು.

ಮುಖ್ಯ ಗುರುಗಳಾದ ಶಾರುಣ್ ಕುಮಾರಿ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಸಂವಿಧಾನದ ತತ್ವ ಸಿದ್ಧಾಂತಗಳನ್ನು ಅರಿತುಕೊಳ್ಳುವುದರ ಮೂಲಕ ಸದೃಢವಾದ ಭಾರತದ ಅಭಿವೃದ್ಧಿಗೆ ಕಂಕಣ ಬಂದರಾಗಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಇತರೆ ಕಾರ್ಯಕ್ರಮಗಳು ಸಂಭ್ರಮದಿಂದ ಜರುಗಿದವು.

ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳ ಪಾಲಕರು, ಗ್ರಾಮದ ಗಣ್ಯರು ಉಪಸ್ಥಿತರಿದ್ದರು.

Leave a Reply

Discover more from VISHWAROOPA NEWS BLOG

Subscribe now to keep reading and get access to the full archive.

Continue reading