ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಸಿ.ಡಿ ನೇಮಕ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕ ಪದಾಧಿಕಾರಿಗಳ ನೇಮಕಾತಿಯು ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಆಗಸ್ಟ್-೨೩ ಶನಿವಾರ ನಗರದ ಕೋರ್ಟ್ ಮುಂಭಾಗದ ಶ್ರೀ ಸಾಯಿ ಹೋಟಲ್ ಸಭಾಂಗಣದಲ್ಲಿ ನಡೆಯಿತು.
ಗಂಗಾವತಿ ತಾಲೂಕ ಘಟಕದ ನೂತನ ಅಧ್ಯಕ್ಷರನ್ನಾಗಿ ರಾಮಕೃಷ್ಣ ಸಿ.ಡಿ ಆಯ್ಕೆಯಾದರು.
ಪ್ರಧಾನ ಕಾರ್ಯದರ್ಶಿಯಾಗಿ ಚನ್ನಬಸವ ಮಾನ್ವಿ ಹಾಗೂ ಖಜಾಂಜಿಯಾಗಿ ದೇವದಾನಂ ಅವರು ಆಯ್ಕೆಯಾದರು ಎಂದು ಜಿಲ್ಲಾ ಅಧ್ಯಕ್ಷರಾದ ರಮೇಶ ಕೋಟಿ ಅವರು ತಿಳಿಸಿದರು.
ಪದಾಧಿಕಾರಿಗಳ ಆಯ್ಕೆಯ ಪೂರ್ವದಲ್ಲಿ ನೇತೃತ್ವವಹಿಸಿದ್ದ ಹೆಚ್. ಮಲ್ಲಿಕಾರ್ಜುನ ಅವರು ಮಾತನಾಡಿ, ಈ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಜಾಪ್ರಭುತ್ವದ ವ್ಯವಸ್ಥೆಯಂತೆ ಚುನಾವಣೆ ಮೂಲಕ ಆಯ್ಕೆ ಮಾಡಲಾಗುವುದು.
ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳು ಸಂಘದ ಬೈಲಾಗಳಲ್ಲಿನ ನಿಯಮಗಳಿಗೆ ಬದ್ಧರಾಗಿ, ಸಂಘದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ಮಾರ್ಗದರ್ಶನದಂತೆ ಸಂಘವನ್ನು ಬಲಪಡಿಸಿಕೊಳ್ಳಬೇಕು.
ಸಂಘದ ಎಲ್ಲಾ ಸದಸ್ಯರ ವಿಶ್ವಾಸವನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಅದರಂತೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿ ಸ್ಥಾನಗಳಿಗೆ ಆಕಾಂಕ್ಷಿಗಳು ಚುನಾವಣೆಗೆ ಸ್ಪರ್ಧಿಸಿದ್ದು, ಎಲ್ಲಾ ಸದಸ್ಯರ ಮತದಾನದ ಮೂಲಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ರಾಮಕೃಷ್ಣ ಸಿ.ಡಿ ಯವರು ಮಾತನಾಡಿ, ಮತ ಚಲಾಯಿಸಿದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಧನ್ಯವಾದಗಳನ್ನು ತಿಳಿಸಿದರು.
ಸಂಘದ ರಾಜ್ಯ, ಜಿಲ್ಲಾ ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಂಘವನ್ನು ಒಮ್ಮತದಿಂದ ಮುನ್ನಡೆಸಿಕೊಂಡು ಹೋಗುವುದಾಗಿ ಹಾಗೂ ಸಂಘದ ಯಾವುದೇ ಸದಸ್ಯರು ತಮ್ಮ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಂಡು ಇತ್ಯರ್ಥಪಡಿಸಿಕೊಳ್ಳಬೇಕು.
ಸಂಘಕ್ಕೆ ಮುಜುಗರವುಂಟು ಮಾಡುವಂತಹ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಸದಸ್ಯರಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರುಗಳಾದ ಮಂಜುನಾಥ ಎಂ., ಡಿ.ಎಂ. ಸುರೇಶ, ದೇವದಾನಂ, ಹೆಚ್. ಭೋಗೇಶ, ಸೋಮಪ್ಪ, ಎಂ.ಡಿ ಗೌಸ್, ಶರಣಯ್ಯ ಹಿರೇಮಠ, ನಿಂಗಪ್ಪ ನಾಯಕ, ಜೆ. ಶ್ರೀನಿವಾಸ, ಎನ್. ಮಲ್ಲಿಕಾರ್ಜುನ, ಎಸ್. ಮಾರ್ಕಂಡೇಯ, ಮಂಜುನಾಥ ಆರತಿ, ನಾಗರಾಜ ಅಂಗಡಿ ಹಾಗೂ ಮಂಜುನಾಥ ವಣಗೇರಿ ಇವರುಗಳು ಉಪಸ್ಥಿತರಿದ್ದರು.
ನೂತನವಾಗಿ ಆಯ್ಕೆಗೊಂಡ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.





ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗಂಗಾವತಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಗಳ ಪೂರ್ವ ಪ್ರಾರ್ಥಮಿಕ ವಿದ್ಯಾರ್ಥಿಗಳಿಗಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಬುಧವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಗಂಗಾವತಿ: ನಿನ್ನೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಏರ್ಪಡಿಸಿದ್ದ ಹಿರೇಬೆಣಕಲ್ಲಿನ ಶಿಲಾಸಮಾಧಿಗಳ ಮತ್ತು ಗವಿಚಿತ್ರಗಳ ಛಾಯಾಚಿತ್ರ ಪ್ರದರ್ಶನವನ್ನು ಮಾನ್ಯ ಮುಖ್ಯ ಮಂತ್ರಿಗಳು ಉದ್ಘಾಟಿಸಿದರು.
ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿಂದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕ್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸದಾನಂದ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕವಿಗಳು ಸ್ವರಚಿತ ಕವನ ರಚಿಸುವಾಗ ಪರಿಣಾಮಕಾರಿಯಾಗಿರ ಬೇಕೆಂದು ಪತ್ರಕರ್ತ ರಾಮಮೂರ್ತಿ ನವಲಿ ಹೇಳಿದರು.
ಕೊಪ್ಪಳ ತಾಲೂಕಿನ ಕಾಸನಕಂಡಿಯಲ್ಲಿ ವಿಜಯದ್ರಿ ದೇವಸ್ಥಾನದ ವೀರಾಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.
