ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ

ಚಿತ್ರ ಸಂತೆ ಪತ್ರಿಕೆಯಿಂದ ಗಂಗಾವತಿಯ ಚನ್ನಬಸವ ಕೊಟಗಿ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ

ಗಂಗಾವತಿ: ಜುಲೈ-೧೫ ಮಂಗಳವಾರ, ಬೆಂಗಳೂರಿನ ಸದಾಶಿವನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭ ಜರುಗಿತು. ಈ ಸಮಾರಂಭದಲ್ಲಿ ಗಂಗಾವತಿಯ ಕಲಾವಿದ ಹಾಗೂ ಪತ್ರಕರ್ತ ಚನ್ನಬಸವ ಕೊಟಗಿಗೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಚಿತ್ರ ಸಂತೆ ಪತ್ರಿಕೆಯ ಸಂಪಾದಕರಾದ ಗಿರೀಶ್ ಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು. ವರ್ಷದಿಂದ ವರ್ಷಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಬಾರಿ…

Read More
ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ

ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ

ಗಂಗಾವತಿ: ಜುಲೈ 13ರಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದ 9ನೇ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಬಿ.ಎಲ್.ಬುಲ್ಸ್ ಕರಾಟೆ ಸಂಸ್ಥೆಯ 26 ಕ್ರೀಡಾಪಟುಗಳು ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಚಂದ್ರೇಗೌಡ ಪೊಲೀಸ್ ಪಾಟೀಲ್ ಸಂತೋಷ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ನೀಡಿದ ಅವರು, ನಮ್ಮ ಸಂಸ್ಥೆಯ 26 ಕರಾಟೆ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ. ಅಹಾನ್, ಸಾತ್ವಿಕ್, ಕೃಷ್ಣ, ರಿಷಿಕ್, ಚಿನ್ನಪ್ಪ, ಅವೇಜ್,…

Read More
ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮-೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಅದ್ಧೂರಿಯಾಗಿ ಜರುಗಿದ ಗುರುವಂದನಾ ಕಾರ್ಯಕ್ರಮ

ಗಂಗಾವತಿ: ನಗರದಲ್ಲಿರುವ ಸ.ಮಾ.ಹಿ.ಪ್ರಾ ಪ್ರಾಪರ್ ಶಾಲೆಯಲ್ಲಿ ೧೯೯೮–೯೯ನೇ ಸಾಲಿನ ಹಳೆ ವಿದ್ಯಾರ್ಥಿಗಳಿಂದ ಜುಲೈ-೧೨ ಶನಿವಾರ ಅದ್ಧೂರಿ ಗುರುವಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಜೊತೆಗೆ ಸ್ನೇಹಿತರ ಸಮ್ಮಿಲನ ಕೂಡ ಆಯೋಜಿಸಲಾಗಿದ್ದು, ಶಾಲಾ ಆವರಣದಲ್ಲಿ ಭಾವುಕ ಕ್ಷಣಗಳು ಮೆಲುಕು ಹಾಕಿದವು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಬಿ ನಟೇಶ್ ಉದ್ಘಾಟಿಸಿದರು. ಅವರು ಮಾತನಾಡಿ, ಶಾಲೆಯ ೧೨೦ನೇ ವಸಂತದ ಆರಂಭ ಈ ಸಂಧರ್ಭದಲ್ಲಿ ಬಹುಮಾನವಾಗಿದೆ ಎಂದರು. ಈ ಹಳೆಯ ವಿದ್ಯಾರ್ಥಿಗಳ ಪ್ರೀತಿ, ನೆನೆಪುಗಳು ಇಂತಹ ಗುರುವಂದನಾ ಕಾರ್ಯಕ್ರಮದ ಮೂಲಕ ವ್ಯಕ್ತವಾಗಿವೆ ಎಂದೂ…

Read More
ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ತಂಬೂರಿ ಪದ ಗಾಯಕರು ಕೆಬ್ಬೇಪುರದ ಆರ್. ಸಿದ್ಧರಾಜು ಗೊರೂರು ಅನಂತರಾಜು, ಹಾಸನ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಕೆಬ್ಬೇಪುರದ ಆರ್. ಸಿದ್ಧರಾಜು ಅವರು ಪ್ರಸಿದ್ಧ ತಂಬೂರಿ ಪದ ಕಲಾವಿದರಾಗಿದ್ದಾರೆ. ಇವರು ರಾತ್ರಿಯಿಡೀ ತಂಬೂರಿ ನುಡಿಸಿ ಜನಪದ ಕಾವ್ಯಗಳನ್ನು ಹಾಡುವ ಅಪಾರ ಪ್ರತಿಭೆ ಹೊಂದಿರುವ ಕಲಾವಿದರು. ತಂದೆ ದಿವಂಗತ ಕೆ.ಬಿ.ರಾಚಯ್ಯ ಆಕಾಶವಾಣಿಯ ಎ-ಗ್ರೇಡ್ ಜನಪದ ಕಲಾವಿದರಾಗಿದ್ದರು. ಹಾಡುಗಾರಿಕೆಯ ಕಲೆಯನ್ನು ತಂದೆಯಿಂದಲೇ ಇವರು ಸಂಪಾದಿಸಿದ್ದಾರೆ. ಇವರು ಕೂಡ ಆಕಾಶವಾಣಿಯಲ್ಲಿ ಎ-ಗ್ರೇಡ್ ಕಲಾವಿದರಾಗಿದ್ದಾರೆ. ೪೨ ವರ್ಷಗಳಿಂದ ಮೃತರ ಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮ, ಜಾತ್ರೆ, ಉತ್ಸವಗಳಲ್ಲಿ ತಂಬೂರಿ ಪದಗಳನ್ನು ಹಾಡಿ ಜನರ ಮನ ಗೆದ್ದಿದ್ದಾರೆ. ಇವರು…

Read More
ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಜುಲೈ-೧೬ ಬುಧವಾರ ಶ್ರೀರಾಮನಗರದಲ್ಲಿ ನಡೆಯುವ ಬೃಹತ್ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ ಯಶಸ್ವಿ: ಡಾ|| ಶಿವಕುಮಾರ ಮಾಲಿಪಾಟೀಲ್

ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಕ್ಲಬ್ ಬೆಂಗಳೂರು ವಿಜಯನಗರ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗಂಗಾವತಿ, ಐಎಂಎ ಮೈತ್ರಿ ಗಂಗಾವತಿ, ವೈದೇಹಿ ಆಸ್ಪತ್ರೆ ಬೆಂಗಳೂರು ಹಾಗೂ ಗ್ರೇಸ್ ಕ್ಯಾನ್ಸರ್ ಫೌಂಡೇಷನ್ ಹೈದರಾಬಾದ್ ಇವರ ಸಂಯುಕ್ತ ಆಶ್ರಯದಲ್ಲಿಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರವನ್ನು ಜುಲೈ-೧೬ ಬುಧವಾರ, ಬೆಳಿಗ್ಗೆ ೯:೦೦ ರಿಂದ ಮಧ್ಯಾಹ್ನ ೨:೦೦ ರವರೆಗೆ ಗಂಗಾವತಿಯ ಶ್ರೀರಾಮನಗರದ ಎ.ಕೆ.ಆರ್.ಡಿ. ಪಿ.ಯು ಕಾಲೇಜು ಆವರಣದಲ್ಲಿ ನಡೆಸಲಾಗುವುದು. ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೃದಯ, ನರ ಸಂಬಂಧಿ ಕಾಯಿಲೆ, ನೇತ್ರರೋಗ, ಸ್ತನ…

Read More
ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ  ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆ ಭಾರತೀಯ ಸನಾತನ ಗುರು ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ರಾಘವೇಂದ್ರ ಅಳವಂಡಿಕರ್

ಗಂಗಾವತಿ: ಭಾರತದ ಸನಾತನ ಗುರು ಪರಂಪರೆ ಪ್ರಸ್ತುತ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಂಕರ ಮಠದ ಹಿರಿಯ ಸದಸ್ಯ ರಾಘವೇಂದ್ರ ಅಳವಂಡಿಕರ್ ಹೇಳಿದರು. ಅವರು ಗುರುವಾರದಂದು ನಗರದ ಶಂಕರ ಮಠದಲ್ಲಿ ಗುರು ಪೂರ್ಣಿಮಾ ಆಚರಣೆಯ ಧರ್ಮ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಹಾಭಾರತವನ್ನು ರಚಿಸಿದ ವೇದವ್ಯಾಸರು ಜನಿಸಿದ ಆಷಾಢ ಮಾಸದ ಹುಣ್ಣಿಮೆಯ ದಿನವನ್ನು ಗುರು ಪೂರ್ಣಿಮಾ ಎಂದು ಆಚರಿಸಲಾಗುತ್ತದೆ. ಇದರ ಅರ್ಥ ಗುರುವಿನ ಪೂಜಾ ದಿನವಾಗಿದ್ದು, ಪ್ರಥಮವಾಗಿ ಮಾತೃದೇವೋಭವ, ಪಿತೃದೇವೋಭವ ಹಾಗೂ ಆಚಾರ್ಯ ದೇವೋಭವವೆಂದು ಕರೆಯಲಾಗುತ್ತದೆ ಎಂದು ಮಾರ್ಮಿಕವಾಗಿ…

Read More
ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಚಿತ್ರ ಸಂತೆ ಪತ್ರಿಕೆಯಿಂದ ನೀಡಲಾಗುವ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಆಯ್ಕೆ.

ಗಂಗಾವತಿ: ರಾಜ್ಯದ ಚಿತ್ರರಂಗ ವಿಭಾಗದ ಪ್ರತಿಷ್ಠಿತ ಪತ್ರಿಕೆಯಾದ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಉತ್ತಮ ಕನ್ನಡಿಗ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ. ಅದರಂತೆ ಈ ವರ್ಷದ ಉತ್ತಮ ಕಲಾವಿದ ಪ್ರಶಸ್ತಿಗೆ ಗಂಗಾವತಿಯ ಚನ್ನಬಸವ ಕೊಟಗಿ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಜುಲೈ-೧೫ ಮಂಗಳವಾರ ಬೆಂಗಳೂರಿನ ಸದಾಶಿವ ನಗರದ ಹೈಪಾರ್ಕ್ ಅಪಾರ್ಟ್ ಹೋಟಲ್‌ನ ಸಭಾಂಗಣದಲ್ಲಿ ಚಿತ್ರ ಸಂತೆ ಪತ್ರಿಕೆಯ ವಾರ್ಷಿಕ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಚನ್ನಬಸವ ಕೊಟಗಿಯವರು ಗಂಗಾವತಿಯ ನಿವಾಸಿಯಾಗಿದ್ದು, ಅವರು ಒಬ್ಬ ಕಲಾವಿದರಾಗಿ, ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದಾರೆ…

Read More
ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್ – ಗೊರೂರು ಅನಂತರಾಜು, ಹಾಸನ

ಬೆಂಗಳೂರಿನ ರಂಗ ಭೂಮಿಯಲ್ಲಿ ನಿರಂತರವಾಗಿ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರ ರಾವ್ ರವರು ನನಗೆ ಪರಿಚಿತರೇನಲ್ಲ. ಒಂದು ತಿಂಗಳ ಹಿಂದೆ, ನಾನು ಮಾಯಸಂದ್ರದ ನಟರಾದ ಟಿ. ನಾಗರಾಜ್ ರವರ  ಬಗ್ಗೆ ಬರೆದಿರುವ ಕಲಾ ಪರಿಚಯದ ಲೇಖನವನ್ನು ಓದಿ ಅವರು ಮೆಚ್ಚುಗೆಯ ಮಾತನಾಡಿದರು.   ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳುಹಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದೆ. ಅದಕ್ಕಾಗಿ, ಇಂದು ಫೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು…

Read More
ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಆಷಾಢ ಏಕಾದಶಿ ಪ್ರಯುಕ್ತ ಶ್ರೀ ಪಾಂಡುರಂಗ ದೇವಸ್ಥಾನಕ್ಕೆ ಭಕ್ತರ ದರ್ಶನ

ಗಂಗಾವತಿ ನಗರಸಭೆ ವ್ಯಾಪ್ತಿಯ ಪಂಪಾ ನಗರದ ಗೋಂದೊಳಿ ಸಮಾಜದ ಶ್ರೀ ಪಾಂಡುರಂಗ ಮಾಹಿತಿ ದೇವಸ್ಥಾನಕ್ಕೆ ರವಿವಾರದಂದು ಆಷಾಢ ಮಾಸದ ಪ್ರಥಮ ಏಕಾದಶಿಯ ಪ್ರಯುಕ್ತ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಪ್ರಕಾಶ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಸಹ ಪಾಂಡುರಂಗ ದೇವಸ್ಥಾನದಲ್ಲಿ ಬೆಳಿಗ್ಗೆ ಕಾಕಡ ಆರತಿ ಪಂಚಾಮೃತ ಅಭಿಷೇಕ ಅಷ್ಟೋತ್ತರ ಶತನಾಮಾವಳಿ ಸೇರಿದಂತೆ ವಿವಿಧ ಹೂಗಳಿಂದ ಅಲಂಕಾರಿಸಲಾಗಿತ್ತು ಎಂದು ತಿಳಿಸಿದರು. ವಿವಿಧ ಸಮಾಜದ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More
ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ನಟನೆಯೊಂದಿಗೆ ಸಮಾಜ ಸೇವೆ ಎ.ವಿ.ರುದ್ರಪ್ಪಾಜಿರಾವ್ ಗೊರೂರು ಅನಂತರಾಜು, ಹಾಸನ.

ಹಾಸನದ ರಂಗಭೂಮಿಗೆ ಎ.ವಿ.ರುದ್ರಪ್ಪಾಜಿರಾವ್ ಅವರ ಕಲಾಸೇವೆ ಮರೆಯುವಂತಿಲ್ಲ. ಅವರು ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಆಂಜನೇಯಪುರ ಗ್ರಾಮದ ಎ.ಎಲ್.ವೀರೋಜಿರಾವ್ ಮತ್ತು ಪುಟ್ಟತಾಯಮ್ಮ ದಂಪತಿಗಳ ಸುಪುತ್ರರು. ಅವರು ದಿನಾಂಕ ೧೫-೫-೧೯೫೪ರಂದು ಜನಿಸಿದರು. ೧೯೭೪ರಲ್ಲಿ ಬಿಕಾಂ ಪೂರ್ಣಗೊಳಿಸಿ, ೧೯೭೫ರಲ್ಲಿ ಆಲೂರು ಬಿಡಿಒ ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯಾರಂಭ ಮಾಡಿದರು. ಶಿರಸ್ತೆದಾರ್ ಮತ್ತು ತಹಸೀಲ್ದಾರ್ ಹುದ್ದೆಗಳಿಗೆ ಬಡ್ತಿ ಪಡೆದು 39 ವರ್ಷಗಳ ಸೇವೆಯ ನಂತರ ನಿವೃತ್ತರಾಗಿದ್ದಾರೆ. ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಸಂಘಟನಾ ಕಾರ್ಯದರ್ಶಿ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ…

Read More

VISHWAROOPA NEWS BLOG

Infinite

Skip to content ↓