Headlines
ಶಾಹೀನ್ ಲರ್ನ್ ಅಕಾಡೆಮಿ ಶಾಲೆಯಿಂದ ಸಾಹಿತಿ ಪ್ರತಿಮಾ ಹಾಸನ್ ಗೆ ಸನ್ಮಾನ

ಶಾಹೀನ್ ಲರ್ನ್ ಅಕಾಡೆಮಿ ಶಾಲೆಯಿಂದ ಸಾಹಿತಿ ಪ್ರತಿಮಾ ಹಾಸನ್ ಗೆ ಸನ್ಮಾನ

ಹಾಸನ: ನವೆಂಬರ್‌-1 ರಂದು ಹಾಸನದ ಹಳೆ ಈದ್ಗಾ ಮೈದಾನ, ಹೊಸ ಲೈನ್ ರಸ್ತೆಯಲ್ಲಿರುವ “ಶಾಹೀನ್ ಲರ್ನ್ ಅಕಾಡೆಮಿ ಶಾಲೆ” ಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಸಾಹಿತಿ, ಶಿಕ್ಷಕಿ,ಸಾಮಾಜಿಕ ಚಿಂತಕಿ, ಪತ್ರಕರ್ತೆ ಹಾಗೂ ಸಂಸ್ಥಾಪಕ ಅಧ್ಯಕ್ಷರು, ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಆಹ್ವಾನಿಸಿ ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರನ್ನಾಗಿ ಮಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಡಲಾಗಿತ್ತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕನ್ನಡವನ್ನು ಉಳಿಸುವುದೇ…

Read More
ಆರೋನ್ ಮಿರಜ್‌ಕರ್ ಶಾಲೆಯಲ್ಲಿ ಭವ್ಯ ಮೆರವಣಿಗೆ ಮೂಲಕ ತಾಯಿ ಭುವನೇಶ್ವರಿಯ ಮೆರವಣಿಗೆ

ಆರೋನ್ ಮಿರಜ್‌ಕರ್ ಶಾಲೆಯಲ್ಲಿ ಭವ್ಯ ಮೆರವಣಿಗೆ ಮೂಲಕ ತಾಯಿ ಭುವನೇಶ್ವರಿಯ ಮೆರವಣಿಗೆ

ಗಂಗಾವತಿ: ನವೆಂಬರ್‌-01 ಶನಿವಾರ ಆರೋನ್ ಮಿರಜ್‌ಕರ್ ಹಾಗೂ ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೈಕ್ ರೈಲಿಯ ಮೂಲಕ ಕನ್ನಡ ಮಾತೆಯನ್ನು ವೇದಿಕೆಗೆ ಬರಮಾಡಿಕೊಳ್ಳುವ ಮೂಲಕ, ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನವನ್ನು ಹೆಚ್ಚಿಸಲು ರಂಗೋಲಿಗಳ ಮೂಲಕ ವ್ಯಾಕರಣ ಹಾಗೂ ಕವಿಗಳ ಭಾವಚಿತ್ರಗಳನ್ನು ಮಕ್ಕಳಿಂದ ಬಿಡಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪಬೆಳಗಿಸುವುದರ ಮೂಲಕ ಸಂಸ್ಥೆಯ ಕಾರ್ಯದರ್ಶಿಗಳಾದ ರುಬಿನ್ ಮಿರಜ್‌ಕರ್ ಉದ್ಘಾಟಿಸಿ “ಕಲಿಯೋಕೆ ಕೋಟಿ ಭಾಷೆ, ಆದರೆ ಆಡೋಕೆ ಒಂದೇ ಭಾಷೆ…

Read More
ಹೆಜ್ಜೆ ಗೆಜ್ಜೆ ತಂಡದಿಂದ ರಂಗ ಸಂಭ್ರಮ ಕಾರ್ಯಕ್ರಮ

ಹೆಜ್ಜೆ ಗೆಜ್ಜೆ ತಂಡದಿಂದ ರಂಗ ಸಂಭ್ರಮ ಕಾರ್ಯಕ್ರಮ

ಬೆಂಗಳೂರು: ಹೆಜ್ಜೆ ಗೆಜ್ಜೆ ತಂಡ ಕಳೆದ ಐದು ದಶಕಗಳಿಂದ ನಿರಂತರವಾಗಿ ಕಲಾ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮನರಂಜನೆಯೊಂದಿಗೆ ಚಿಂತನೆಗೂ ಚಾಲನೆ ಕೊಡುವಂತಹ ಅನೇಕ ವಿಚಾರಧಾರೆಗಳನ್ನು ಜನರಿರುವಲ್ಲಿಗೆ ಹೋಗಿ ನಾಟಕ ಪ್ರದರ್ಶನ ಮಾಡುತ್ತಾ ಬಂದಿರುತ್ತದೆ. ಸಂಸ್ಥೆ ರಂಗ ಸಂಭ್ರಮ ತಿರುಗಾಟ ಎಂಬ ಶೀರ್ಷಿಕೆಯಡಿ ಅನೇಕ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಂಡಿರುವ ಜಾನಪದ ಕಲಾ ಬಳಗ ಭರತನಾಟ್ಯ ಸಂಸ್ಥೆ ಮತ್ತು ಮೈಸೂರು ರಮಾನಂದರವರ ಹ್ಯಾಗ್ ಸತ್ತ ನಾಟಕವನ್ನು ಅಕ್ಟೋಬರ್-30‌ ಗುರುವಾರ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ನಯನ ರಂಗಮಂದಿರದಲ್ಲಿ ಹೊಸ ರೂಪದಲ್ಲಿ ಪ್ರದರ್ಶಿಸಲಾಯಿತು….

Read More
ಭಾರತ್ ವಿಕಾಸ್ ಪರಿಷತ್ ನಡೆಸಿದ ಪ್ರಾಂತಮಟ್ಟದ ಕ್ವಿಜ್ ಕಾಂಪಿಟೇಷನ್‌ನಲ್ಲಿ ಗಂಗಾವತಿಯ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಪ್ರಾದೇಶಿಕ ಮಟ್ಟಕ್ಕೆ ಆಯ್ಕೆ.

ಭಾರತ್ ವಿಕಾಸ್ ಪರಿಷತ್ ನಡೆಸಿದ ಪ್ರಾಂತಮಟ್ಟದ ಕ್ವಿಜ್ ಕಾಂಪಿಟೇಷನ್‌ನಲ್ಲಿ ಗಂಗಾವತಿಯ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಪ್ರಾದೇಶಿಕ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಅಕ್ಟೋಬರ್-೨೬ ಭಾನುವಾರ ರಾಯಚೂರಿನಲ್ಲಿ ನಡೆದ ಭಾರತ್ ವಿಕಾಸ್ ಪರಿಷತ್ ನಡೆಸಿರುವ ಪ್ರಾಂತ ಮಟ್ಟದ ಕ್ವಿಜ್ ಕಾಂಪಿಟೇಶನ್‌ನಲ್ಲಿ ಮಹಾನ್ ಕಿಡ್ಸ್ ಶಾಲೆಯ ೮ನೇ ತರಗತಿಯ ಮಕ್ಕಳಾದ ಸಾತ್ವಿಕ್ ಮನ್ಸಾಲಿ ಹಾಗೂ ಕಾರ್ತಿಕ್ ಕೊಂಡುಕೊಂದಿ ಇವರು ಕ್ವಿಜ್‌ನಲ್ಲಿ ಭಾಗವಹಿಸಿ ಪ್ರಾದೇಶಿಕ (ರೀಜಿನಲ್) ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಮಕ್ಕಳಿಗೆ ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಶುಭ ಹಾರೈಸಿ, ಈ ಮಕ್ಕಳು ಪ್ರಾದೇಶಿಕ (ರೀಜಿನಲ್) ಮಟ್ಟದಲ್ಲಿ ಗೆದ್ದರೆ ರಾಷ್ಟçಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸವಿತಾ ಗುರುವಿನಮಠ ಮಾತನಾಡಿ ನಮ್ಮ…

Read More
ಮಧು ನಾಯ್ಕ್ ಲಂಬಾಣಿ ರಚನೆಯ ಸಿಂಗಾರ ಹಾಡು ಬಿಡುಗಡೆ

ಮಧು ನಾಯ್ಕ್ ಲಂಬಾಣಿ ರಚನೆಯ ಸಿಂಗಾರ ಹಾಡು ಬಿಡುಗಡೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಧ್ವನಿ ಸಂಚಿಕೆ ಒಂದರ ಅಂತಿಮ ಹಂತದ (Final Stage) ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಮಧುನಾಯ್ಕಲಂಬಾಣಿಯವರ ರಚನೆಯ ಸಿಂಗಾರ ಹಾಡನ್ನು ಹೊಸಪೇಟೆಯ ಖ್ಯಾತ ಗಾಯಕಿ ಶ್ರೀಮತಿ ಕಮಲಾ ಕುಲಕರ್ಣಿಯವರು ಬಿಡುಗಡೆಗೊಳಿಸಿದರು. ಈ ಹಾಡಿಗೆ ರಾಗ ಸಂಯೋಜನೆ ಮಾಡಿ ಹಾಡಿದ ಗಾಯಕಿ ಶ್ರೀಮತಿ ಲಲಿತ ಸಿದ್ದಿ ಹಾಗೂ ಈ ಹಾಡಿಗೆ ಸಂಗೀತ ಸಂಯೋಜನೆ ಶ್ರೀನಿವಾಸನಾಯ್ಕ, ಡರೆಕ್ಷನ್ ರವಿಕಿರಣ, ಎಡಿಟಿಂಗ್ ಅಭಿಷೇಕ ಎಮ್., ನೃತ್ಯ ಪಲ್ಲವಿ ಎಲ್. ಇವರದ್ದಾಗಿದೆ. ರಾಜ್ಯದಾದ್ಯಂತ ಈ…

Read More
ಹಾಸನದ ಹೆಚ್.ಎಸ್. ಪ್ರತಿಮಾ ಹಾಸನ್ ಗೆ ‘ಕೆಂಪಮ್ಮ ಪ್ರಶಸ್ತಿ’ ಪ್ರಧಾನ

ಹಾಸನದ ಹೆಚ್.ಎಸ್. ಪ್ರತಿಮಾ ಹಾಸನ್ ಗೆ ‘ಕೆಂಪಮ್ಮ ಪ್ರಶಸ್ತಿ’ ಪ್ರಧಾನ

ಹಾಸನ: ಅ: 26 ರಂದು ಅಕ್ಕಮಹಾದೇವಿ ಸಭಾಂಗಣ. ಕನ್ನಡ ಸಾಹಿತ್ಯ ಪರಿಷತ್. ಬೆಂಗಳೂರು ಜಾಗೃತಿ ಟ್ರಸ್ಟ್ ವತಿಯಿಂದ ಹಾಗೂ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ”ಯ ಸಹಯೋಗದಲ್ಲಿ ನಡೆಯುತ್ತಿರುವ “ನಗೆ ಹಬ್ಬ” ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಹಾಸನ ನಗರದ ಶಿಕ್ಷಕಿ. ಸಾಮಾಜಿಕ ಚಿಂತಕಿ. ಸಾಹಿತಿ, ಪತ್ರಕರ್ತರಾದ ಹೆಚ್.ಎಸ್.‌ ಪ್ರತಿಮಾ ಹಾಸನ್‌ ಅವರಿಗೆ “ಕೆಂಪಮ್ಮ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ಅವರು ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ’ ಸಂಸ್ಥಾಪಕ ಅಧ್ಯಕ್ಷರಾಗಿ, ಬಹುಮುಖ ಪ್ರತಿಭೆಯಾಗಿ, ಸದಾ ಕ್ರಿಯಾಶೀಲರಾಗಿ, ಜಿಲ್ಲೆ, ರಾಜ್ಯ, ಮಟ್ಟದಲ್ಲಿ…

Read More
ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾದ ಐ.ಎಂ.ಎ ಸಮ್ಮೇಳನ: ಡಾ|| ಅಮರೇಶ್ ಪಾಟೀಲ್

ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾದ ಐ.ಎಂ.ಎ ಸಮ್ಮೇಳನ: ಡಾ|| ಅಮರೇಶ್ ಪಾಟೀಲ್

ಗಂಗಾವತಿ. ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಗಂಗಾವತಿಯ ಅಮರ್ ಗಾರ್ಡನ್ ಸಭಾಂಗಣದಲ್ಲಿ ಜರುಗಿದ ಭಾರತೀಯ ವೈದ್ಯಕೀಯ ಸಂಘದ 91ನೆಯ ರಾಜ್ಯ ಸಮ್ಮೇಳನ ಅತ್ಯಂತ ಅರ್ಥಪೂರ್ಣವಾಗಿ ಯಶಸ್ವಿಗೊಂಡಿತು ಎಂದು ಸಮ್ಮೇಳನದ ಉಸ್ತುವಾರಿ ವಹಿಸಿಕೊಂಡಿದ್ದ ಡಾ|| ಅಮರೇಶ್ ಪಾಟೀಲ್ ಸಂತಸ ವ್ಯಕ್ತಪಡಿಸಿದರು. ಅವರು ಅಕ್ಟೋಬರ್‌-26 ರವಿವಾರ ಸಮ್ಮೇಳನದ ಆಶಯ ನುಡಿಗಳನ್ನಾಡಿ, ಕಳೆದ ಶುಕ್ರವಾರದಿಂದ ಆರಂಭಗೊಂಡ ಈ ಸಮ್ಮೇಳನವು ರವಿವಾರದಂದು ಮುಕ್ತಾಯಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಬಂದ ನುರಿತ ತಜ್ಞರಿಂದ ಹಲವು ವೈವಿಧ್ಯಮಯ ವಿಷಯಗಳ ಕುರಿತು…

Read More
ಜೀವನಾನುಭವಗಳು ವ್ಯಕ್ತಿಯ ಶಕ್ತಿ – ಗೊರೂರು ಶಿವೇಶ್

ಜೀವನಾನುಭವಗಳು ವ್ಯಕ್ತಿಯ ಶಕ್ತಿ – ಗೊರೂರು ಶಿವೇಶ್

ಜೀವನಾನುಭವಗಳು ವ್ಯಕ್ತಿಯ ಶಕ್ತಿ ಎಂದು ಲೇಖಕ ಗೊರೂರು ಶಿವೇಶ್ ಅಭಿಪ್ರಾಯ ಪಟ್ಟರು‌. ಅವರು ನಗರದ ಟಾರ್ಗೆಟ್ ಪಿಯು ಕಾಲೇಜಿನಲ್ಲಿ ಕದಂಬ ಸೇನೆ ಆಯೋಜಿಸಿದ ಪದಗ್ರಹಣ, ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಹಾಗೂ ಎಸ್ ಎಲ್ ಭೈರಪ್ಪನವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭೈರಪ್ಪನವರು ಬಾಲ್ಯದಲ್ಲಿ ಸೋದರ ಸೋದರಿಯರು ತಾಯಿ ಕಳೆದುಕೊಂಡು ಅನಾಥರಾದ ಸಂದರ್ಭದಲ್ಲಿ ಹುಟ್ಟಿದ ಜೀವನದ ಪ್ರಶ್ನೆಗಳಿಗೆ ತತ್ವಶಾಸ್ತ್ರದಲ್ಲಿ ಉತ್ತರ ಕಂಡುಕೊಂಡು ಕೃತಿಗಳಲ್ಲಿ ಅವುಗಳನ್ನು ಪರಿಚಯಿಸಿದರು. ಹುಟ್ಟು ಸಾವು ಮತ್ತು ಅಸ್ತಿತ್ವಗಳ ನಿರಂತರ ಶೋಧನೆಯಲ್ಲಿರುವ ವ್ಯಕ್ತಿಗೆ ತತ್ವಶಾಸ್ತ್ರ ಬೆಳಕು ನೀಡಬಹುದಾದರೂ…

Read More
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.: ಗೊರೂರು ಅನಂತರಾಜು, ಹಾಸನ

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.: ಗೊರೂರು ಅನಂತರಾಜು, ಹಾಸನ

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಹಾಗೂ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ. ಚಂದ್ರಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭೀಮಾರ್ಜುನ ತಾಳಗ ಬಯಲು ಸೀಮೆ ಯಕ್ಷಗಾನ ಪ್ರದರ್ಶನ ಮಾಡಲು ಗೌಡರು ದುರ್ಯೋಧನ ಪಾತ್ರವನ್ನು ಚೆನ್ನಾಗಿ ನಿಭಾಯಿಸಿ ನನ್ನ ಗಮನ ಸೆಳೆದರು. ಅವರ ಕಲಾ ಪರಿಚಯ ಮಾಡಲು ಮಾತನಾಡಿಸಿದೆ. ಇವರು ಓರ್ವ ಪ್ರಗತಿ ಪರ ರೈತರೆಂಬುದು ಮಾತುಕತೆ ವೇಳೆ ತಿಳಿಯಿತು. ಅವರು ಮಾತನಾಡುತ್ತಾ ತಮ್ಮ ಬಾಲ್ಯದ ವಿದ್ಯಾರ್ಥಿ ದಿನಗಳನ್ನು ನೆನಪಿಸಿಕೊಂಡು…

Read More
ಹಂಪಿಯ ಶ್ರೀ ವಿದ್ಯಾರಣ್ಯ ಪೀಠದ ಮಹಾಸ್ವಾಮಿಗಳ ಅನುಗ್ರಹದ ಮೇರೆಗೆ ಶಂಕರ ಮಠ ನಿರ್ಮಾಣ: ನಾರಾಯಣರಾವ್ ವೈದ್ಯ

ಹಂಪಿಯ ಶ್ರೀ ವಿದ್ಯಾರಣ್ಯ ಪೀಠದ ಮಹಾಸ್ವಾಮಿಗಳ ಅನುಗ್ರಹದ ಮೇರೆಗೆ ಶಂಕರ ಮಠ ನಿರ್ಮಾಣ: ನಾರಾಯಣರಾವ್ ವೈದ್ಯ

ಗಂಗಾವತಿ: ಕಳೆದ ೨೫ ವರ್ಷಗಳಿಂದಲೂ ಗಂಗಾವತಿಯಲ್ಲಿ ಶಂಕರಮಠ ನಿರ್ಮಾಣಕ್ಕೆ ಸೂಕ್ತ ಸಲಹೆ, ಸೂಚನೆ, ಮಾರ್ಗದರ್ಶನಗಳನ್ನು ನೀಡುತ್ತಾ ಬಂದಿರುವ ದಿವಂಗತ ಭೀಮಸೇನ್‌ರಾವ್ ಅಳವಂಡಿಕರ್ ಹಾಗೂ ಅದ್ವೈತ ಸಿದ್ಧಾಂತದ ಬಗ್ಗೆ ಹಾಗೂ ಜಗದ್ಗುರು ಶ್ರೀ ಶಂಕರಾಚಾರ್ಯರ ಬಗ್ಗೆ ಅತ್ಯಂತ ಅಭಿಮಾನ ಹೊಂದಿದ್ದ ದಿವಂಗತ ಅಯೋದ್ಯ ರಾಮಾಚಾರ ಅವರನ್ನು ಸ್ಮರಿಸಿಕೊಳ್ಳಲೇಬೇಕಾದ ಅವಶ್ಯಕತೆ ಇದೆ ಎಂದು ಗಂಗಾವತಿ ಶೃಂಗೇರಿ ಶಂಕರಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಅಕ್ಟೋಬರ್-೧೮ ಶನಿವಾರ ಶಾರದಾ ದೇವಸ್ಥಾನದಲ್ಲಿ ಗುರು ದ್ವಾದಶಿ ಆಚರಣೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಈ…

Read More

VISHWAROOPA NEWS BLOG

Infinite

Skip to content ↓