ದನಗಳ ಜಾತ್ರೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ
ಹಾಸನ ತಾಲ್ಲೂಕು ಶಾಂತಿಗ್ರಾಮ ಹೋಬಳಿ ಕೆ. ಹಿರಿಹಳ್ಳಿ ಗ್ರಾಮದಲ್ಲಿ 4ನೇ ವರ್ಷದ ದನಗಳ ಜಾತ್ರೆ ಒಂದು ವಾರ ಯಶಸ್ವಿಯಾಗಿ ನಡೆಯಿತು. ಈ ಪ್ರಯುಕ್ತ ಕಲಾತಂಡಗಳಿಂದ ಕೋಲಾಟ ಬಯಲಾಟ ಗಾಯನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಭಾನುವಾರ ರಾತ್ರಿ ಮಹಾಶಿವರಾತ್ರಿ ಪ್ರಯುಕ್ತ ಸ್ಥಳೀಯ ಶ್ರೀ ಆಂಜನೇಯ ಹಾಗೂ ಶನೇಶ್ವರ ಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿ ಕಲಾವಿದರು ಹರುನಳ್ಳಿ ಕುಮಾರ್ ನಿರ್ದೇಶನ ನಲ್ಲಿ ರಾಜ ಸತ್ಯವ್ರತ ನಾಟಕ ಪ್ರದರ್ಶಿಸಿದರು. ಮಧ್ಯಾಹ್ನ ಹಾಸನ ಜಿಲ್ಲಾ ಕದಂಬ ಸೈನ್ಯ ಕನ್ನಡ ಸಂಘಟನೆಯ ಕಲಾವಿದರು ಭಕ್ತಿಗೀತೆಗಳ…
