ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದಿಂದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆ
ಗಂಗಾವತಿ: ಆರ್ಯವೈಶ್ಯ ಸಮಾಜ ಹಿರೇಜಂತಗಲ್ ವಿರುಪಾಪುರದಿಂದ ವೆಂಕಟಗಿರಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಾಲ್ಕನೇ ವರ್ಷದ ಪಾದಯಾತ್ರೆಯನ್ನು ಶನಿವಾರದಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಆರ್ಯ ವೈಶ್ಯ ಸಮಾಜದ ಅಧ್ಯಕ್ಷರಾದ ದರೋಜಿ ನಾಗರಾಜ ಶ್ರೇಷ್ಟಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ವೆಂಕಟಗಿರಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನಕ್ಕೆ ನಮ್ಮ ಸಮಾಜ ಬಾಂಧವರು ನಿರೀಕ್ಷೆಗಿಂತ ಮೀರಿ ಹೆಚ್ಚಿನ ರೀತಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರೋದು ಸಂತೋಷವಾಗಿದೆ. ಇದೇ ರೀತಿಯಾಗಿ ನವ ಬೃಂದಾವನ ಮತ್ತು ಮಂತ್ರಾಲಯ ಪಾದಯಾತ್ರೆಯಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳಬೇಕು. ಇಂತಹ…
