
ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಗಂಗಾವತಿ: ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ಸೆಪ್ಟೆಂಬರ್-೨೦ ರಂದು ತಾಲೂಕಿನ ಅರಳಹಳ್ಳಿ ಗ್ರಾಮದ ಅಲ್ಪಸಂಖ್ಯಾತ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೆರವೇರಿತು. ಶಿಬಿರವನ್ನು ಅರಳಹಳ್ಳಿ ಗ್ರಾಮದ ಪೂಜ್ಯ ವೇ.ಮೂ ಗವಿಸಿದ್ದಯ್ಯ ಸ್ವಾಮಿಗಳು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ವಹಿಸಿಕೊಂಡಿದ್ದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷರಾದ ವೀರಭದ್ರಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಾನನಗೌಡ, ಮಲ್ಲಿಕಾರ್ಜುನ, ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ನಿರ್ಮಲ ಹಾಗೂ ಆಶಾ ಕಾರ್ಯಕರ್ತೆಯಾದ…