ಹಾಡು ನೃತ್ಯಗಳಲ್ಲಿ ರಂಜಿಸಿದ ದಕ್ಷಬ್ರಹ್ಮ ನಾಟಕ
ಹಾಸನ: ಹಾಸನದ ಹಾಸನಾಂಬ ‘ಕಲಾಕ್ಷೇತ್ರದಲ್ಲಿ ಸ್ಥಳೀಯ ಶ್ರೀ ಅನ್ನಪೂರ್ಣೇಶ್ವರಿ ಕಲಾ ಸಂಘವು ಹಮ್ಮಿಕೊಂಡಿರುವ ನಾಲ್ಕು ದಿನಗಳ ನಾಟಕೋತ್ಸವದಲ್ಲಿ ಅನ್ನಪೂಣೇಶ್ವರಿ ಕಲಾಸಂಘದ ಕಲಾವಿದರು ಶುಕ್ರವಾರ ದಕ್ಷಯಜ್ಞ ನಾಟಕ ಪ್ರದರ್ಶಿಸಿದರು. ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿ ತಾವು ರಂಗಭೂಮಿಗೆ ಬಂದು 18 ವರ್ಷ ಆಗಿದೆ. ಈವರೆಗೆ 200 ನಾಟಕಗಳಲ್ಲಿ ನಟಿಸಿದ್ದೇನೆ. ಸಂಘ ಹಲವಾರು ಹೊಸ ನಾಟಕ ಪ್ರದರ್ಶಿಸಿದೆ. ಪೌರಾಣಿಕ ನಾಟಕೋತ್ಸವ ನಡೆಸಿದ್ದೇವೆ. ಮುಂದೆಯೂ ರಂಗ ಚಟುವಟಿಕೆ ನೆಡೆಸಲು ಸಂಘದ ಕಲಾವಿದರು ಅಧ್ಯಕ್ಷ ಜವಾಬ್ದಾರಿ ತೆಗೆದುಕೊಳ್ಳಬೇಕು. ನಾಟಕದ ಮೇಷ್ಟ್ರು ಡಿ.ಸಿ…
