ಅಖಿಲ ಕರ್ನಾಟಕ ನಾಲ್ಕನೇ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ.
ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿ ಸ್ಥಳೀಯ ಘಟಕದ ಸಹಕಾರದಲ್ಲಿ ನಗರದ ಶ್ರೀ ಚನ್ನಬಸವೇಶ್ವರ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಹಿರಿಯ ಸಾಹಿತಿ, ಘನ ವಿದ್ವಾಂಸರಾದ ಪ್ರಾಚಾರ್ಯ ಡಾ. ಜಾಜಿ ದೇವೇಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ೨೦೨೫ ಜನವರಿ-೧೯ ಭಾನುವಾರ ಬೆಳೆಗ್ಗೆ ೦೯ ಗಂಟೆಯಿಂದ ಸಂಜೆ ೦೭ ಗಂಟೆವರೆಗೂ ಇಡೀ ದಿನ ಸಮ್ಮೇಳನ ನಡೆಯಲಿದ್ದು, ಉದ್ಘಾಟನಾ ಸಮಾರಂಭ ಸೇರಿದಂತೆ ಎರಡು ರಾಜ್ಯಮಟ್ಟದ ಕವಿಗೋಷ್ಠಿಗಳು ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕೇಂದ್ರ ಸಮಿತಿಯ…
