೬ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲಾ ಯೋಗಾಪಟುಗಳ ಸಾಧನೆ

೬ನೇ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲಾ ಯೋಗಾಪಟುಗಳ ಸಾಧನೆ

ಗಂಗಾವತಿ: ಯೋಗಾಸನ ಭಾರತ್ ಸಂಯೋಜಿತವಾಗಿರುವ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯು ೬ನೇ ಕರ್ನಾಟಕ ರಾಜ್ಯ ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್‌ನ್ನು ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಮಠದಲ್ಲಿ ಆಯೋಜಿಸಿತ್ತು. ಸ್ಪರ್ಧೆಯನ್ನು ಆಗಸ್ಟ್-೨೨, ೨೩, ೨೪ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ತಂಡದ ಕೋಚ್ ಆಗಿ ರೇಷ್ಮ ವಡ್ಡಟ್ಟಿ, ವ್ಯವಸ್ಥಾಪಕರಾಗಿ ಮಹಾಂತೇಶ್‌ರವರು ಭಾಗವಹಿಸಿದ್ದರು. ಈ ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆಯ ೨೧ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗಂಗಾವತಿಯ ನಿತಿನ್, ನಿಹಾರಿಕಾ, ಎನ್.ಚೇತನ್, ಕೃಷ್ಣ ರೆಡ್ಡಿ, ಅಮೃತ, ಭೀಮೇಶ, ಶರಣಮ್ಮ, ಭಾರ್ಗವಿ,…

Read More
ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ನೋಂದಣಿ

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ನೋಂದಣಿ

ಗಂಗಾವತಿ: ಹಿರಿಯ ಕಾರ್ಮಿಕ ಹೋರಾಟಗಾರ ಭಾರಧ್ವಾಜ್ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಸ್ಥಾಪನೆಗೊಂಡಿತು. ಕಲಬುರ್ಗಿ ಪ್ರಾದೇಶಿಕ ಕಛೇರಿಯ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿಯಿಂದ ನೋಂದಣಿಯಾಗಿ ಅಸ್ತಿತ್ವಕ್ಕೆ ಬಂದಿದೆ ಎಂದು ಸಂಘದ ಅಧ್ಯಕ್ಷರಾದ ಇಬ್ರಾಹಿಂ ಮೇಸ್ತ್ರೀ ತಿಳಿಸಿದರು. ಸಂಘದ ನೋಂದಣಿ ಸಂಖ್ಯೆ: ಐಅಏಂಐ/ಖಿU/P-೬೧೦೦೨೦೭೨/೨೦೨೫-೨೬ ಆಗಿದೆ. ಇದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸ್ಥಾಪನೆಗೊಂಡಿದೆ. ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಲಿದೆ. ಈ ಸಂಘದ ಉದ್ಘಾಟನಾ…

Read More
ವಿಜಯಕುಮಾರ ಗದ್ದಿ ಅವರ ಮನೆಯಲ್ಲಿ ಯಶಸ್ವಿಯಾಗಿ ಜರುಗಿದ ಆಗಸ್ಟ್-೨೨, ೨೦೨೫ ರ ವಚನ ಶ್ರಾವಣ

ವಿಜಯಕುಮಾರ ಗದ್ದಿ ಅವರ ಮನೆಯಲ್ಲಿ ಯಶಸ್ವಿಯಾಗಿ ಜರುಗಿದ ಆಗಸ್ಟ್-೨೨, ೨೦೨೫ ರ ವಚನ ಶ್ರಾವಣ

ಶ್ರಾವಣ ಮಾಸದ ಅಂಗವಾಗಿ ಗಂಗಾವತಿ ನಗರದಲ್ಲಿ ಒಂದು ತಿಂಗಳ ಪರ್ಯಂತ ನಡೆಯುತ್ತಿರುವ ವಚನ ಶ್ರಾವಣ ಕಾರ್ಯಕ್ರಮ. ಮೂವತ್ತನೇ ದಿನವಾದ ಆಗಸ್ಟ್-೨೨ ಶುಕ್ರವಾರ ಸ್ನೇಹ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ವಿಜಯಕುಮಾರ ಗದ್ದಿಯವರ ಮನೆಯಲ್ಲಿ ಜರುಗಿತು. ಈ ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಿದ್ದ ವಿಜಯಕುಮಾರ ಗದ್ದಿ ಮಾತನಾಡಿ, ಈ ವಚನ ಶ್ರಾವಣ ಕಾರ್ಯಕ್ರಮವು ಮನೆ ಮನೆಗಳಿಂದ ಮನ ಮನಗಳಿಗೆ ವಚನ ಸಂದೇಶ ಹರಡುವುದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ಡಾ|| ರಾಜಶೇಖರ ನಾರಿನಾಳ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀಶೈಲ ಪಟ್ಟಣಶೆಟ್ಟಿ, ಕೆ.ಬಸವರಾಜ್, ಎ.ಕೆ….

Read More
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ  ರಾಮಕೃಷ್ಣ ಸಿ.ಡಿ ನೇಮಕ.

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಸಿ.ಡಿ ನೇಮಕ.

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕ ಪದಾಧಿಕಾರಿಗಳ ನೇಮಕಾತಿಯು ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಆಗಸ್ಟ್-೨೩ ಶನಿವಾರ ನಗರದ ಕೋರ್ಟ್ ಮುಂಭಾಗದ ಶ್ರೀ ಸಾಯಿ ಹೋಟಲ್ ಸಭಾಂಗಣದಲ್ಲಿ ನಡೆಯಿತು. ಗಂಗಾವತಿ ತಾಲೂಕ ಘಟಕದ ನೂತನ ಅಧ್ಯಕ್ಷರನ್ನಾಗಿ ರಾಮಕೃಷ್ಣ ಸಿ.ಡಿ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಚನ್ನಬಸವ ಮಾನ್ವಿ ಹಾಗೂ ಖಜಾಂಜಿಯಾಗಿ ದೇವದಾನಂ ಅವರು ಆಯ್ಕೆಯಾದರು ಎಂದು ಜಿಲ್ಲಾ ಅಧ್ಯಕ್ಷರಾದ ರಮೇಶ ಕೋಟಿ ಅವರು ತಿಳಿಸಿದರು. ಪದಾಧಿಕಾರಿಗಳ ಆಯ್ಕೆಯ ಪೂರ್ವದಲ್ಲಿ ನೇತೃತ್ವವಹಿಸಿದ್ದ…

Read More
ದಿನಾಂಕ್ 25 ರಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ…. ಶರಣಬಸಪ್ಪ

ದಿನಾಂಕ್ 25 ರಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ…. ಶರಣಬಸಪ್ಪ

ಗಂಗಾವತಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನ ವಿನಾಯಕ ದೇವಸ್ಥಾನದ ನಾಲ್ಕನೆಯ ವರ್ಷದ ವಾರ್ಷಿಕೋತ್ಸವ ನಡೆಯಲಿದೆ. ದಿನಾಂಕ 25 ರಂದು ಸೋಮವಾರ ವಿಶೇಷ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಂದು ಸಮಿತಿಯ ಅಧ್ಯಕ್ಷ ಚನ್ನಬಸಪ್ಪ ಸೇರಿದಂತೆ ಅಲ್ಲಿನ ವಾಹನ ಚಾಲಕರ ಮತ್ತು ಮಾಲೀಕರ ಸದಸ್ಯರುಗಳು ಹೇಳಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಾದ್ರಪದ ಮಾಸದ ಸೋಮವಾರ ದಿನದಂದು ಜ್ಞಾನ ವಿನಾಯಕ ದೇವಸ್ಥಾನದಲ್ಲಿ ಹಲವಾರು ಪೂಜಾ ಕಾರ್ಯಕ್ರಮಗಳನ್ನು ನಡೆಯಲಿವೆ. ಶ್ರೀ ವಿನಾಯಕನಿಗೆ ಜಲಾಭಿಷೇಕ, ಪಂಚಾಮೃತ ಅಭಿಷೇಕ,…

Read More
ಸೋಮವಾರದಂದು ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಭೂಮಿ ಪೂಜೆ – ರೂಪಾರಾಣಿ ಲಕ್ಷ್ಮಣ ರೈಚೂರ್

ಸೋಮವಾರದಂದು ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಭೂಮಿ ಪೂಜೆ – ರೂಪಾರಾಣಿ ಲಕ್ಷ್ಮಣ ರೈಚೂರ್

ಗಂಗಾವತಿ ನಗರದ ಆರ್ಯವೈಶ್ಯ ಸಮಾಜದ ಜಯನಗರದ ಮಾಂತಗುಂಡ ಶಾಲೆ ಹತ್ತಿರ ಇರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ಅಡಿಗಲು ಸಮಾರಂಭ. ಇದೇ ದಿನಾಂಕ 25 ಸೋಮವಾರ ದಿನದಂದು ಜರುಗಲಿದೆ ಎಂದು ಆರ್ಯವೈಶ್ಯ ಸಮಾಜದ ಅಧ್ಯಕ್ಷ ರೂಪ ರಾಣಿ ರೈಚೂರ್ ಹೇಳಿದರು. ಅವರು ಶನಿವಾರದಂದು ವಾಸವಿ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಅಂದು ಬೆಳಿಗ್ಗೆ ಗಂಗೆ ಪೂಜೆ. ಪೂರ್ಣ ಕುಂಭದೊಂದಿಗೆ ಶ್ರೀ ನಗರೇಶ್ವರ ದೇವಸ್ಥಾನದಿಂದ ಸಕಲ ವಾದ್ಯ ವೈಭವದೊಂದಿಗೆ ದೇವಸ್ಥಾನ ನಿರ್ಮಾಣದ ಸ್ಥಳಕ್ಕೆ ಹೋಗಲಾಗುತ್ತಿದ್ದು. ಭೂಮಿ…

Read More
ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಆರೋನ್ ಮೀರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನಿವೇದಿತಾ ಹಿ.ಪ್ರಾ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ.

ಗಂಗಾವತಿ: ಆಗಸ್ಟ್-೨೨ ಶುಕ್ರವಾರದಂದು ನಗರದ ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮತ್ತು ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಶ್ರೀ ಕೃಷ್ಣ ಜನ್ಮಾಷ್ಠಮಿ”ಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪಾಲಕರಿಗಾಗಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪಾಲಕರಿಗೆ ಸಂಸ್ಥೆಯ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪುಟಾಣಿ ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯರ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು…

Read More
ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಲಯನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ಗಂಗಾವತಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಗಳ ಪೂರ್ವ ಪ್ರಾರ್ಥಮಿಕ ವಿದ್ಯಾರ್ಥಿಗಳಿಗಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಬುಧವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ವಹಿಸಿದ್ದರು. ಮುಖ್ಯ ಗುರುಗಳಾದ ಜಗನ್ನಾಥದಾಸ್, ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಗುರುಪಾದಯ್ಯ, ಲಯನ್ ಕಾಶಿ ವಿಶ್ವನಾಥ ಸಿರಿಗೇರಿ, ಲಯನ್ ರಾಮನಾಥ ಭಂಢಾರ್ಕರ್, ಲಯನ್ ಆಜಾದ್,…

Read More
ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ  ಗಂಗಾವತಿ ಚಾರಣ ಬಳಗ ಹರ್ಷ

ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ ಗಂಗಾವತಿ ಚಾರಣ ಬಳಗ ಹರ್ಷ

ಗಂಗಾವತಿ: ನಿನ್ನೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಏರ್ಪಡಿಸಿದ್ದ ಹಿರೇಬೆಣಕಲ್ಲಿನ ಶಿಲಾಸಮಾಧಿಗಳ ಮತ್ತು ಗವಿಚಿತ್ರಗಳ ಛಾಯಾಚಿತ್ರ ಪ್ರದರ್ಶನವನ್ನು ಮಾನ್ಯ ಮುಖ್ಯ ಮಂತ್ರಿಗಳು ಉದ್ಘಾಟಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಹಲವಾರು ಮಂತ್ರಿಗಳು, ಶಾಸಕರು, ಅಧಿಕಾರಿಗಳು ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಗಂಗಾವತಿ ಚಾರಣ ಬಳಗದ ಮಾರ್ಗದರ್ಶಕರು ಹಾಗೂ ಇತಿಹಾಸ ಸಂಶೋಧಕರಾದ ಡಾ. ಶರಣಬಸಪ್ಪ ಕೋಲ್ಕಾರ ಪ್ರಕಟಣೆಯಲ್ಲಿ ಸಂತಸ ಹಂಚಿಕೊಂಡರು. ಪ್ರವಾಸೋದ್ಯಮ ಮಂತ್ರಿಗಳಾದ ಎಚ್.ಕೆ. ಪಾಟೀಲ ಅವರು ಇತ್ತೀಚೆಗೆ ಬೆಣಕಲ್…

Read More
ಆಗಸ್ಟ್-೨೧ ರಂದು ಗಂಗಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

ಆಗಸ್ಟ್-೨೧ ರಂದು ಗಂಗಾವತಿಯಲ್ಲಿ ನಗರ ಸಂಕೀರ್ತನಾ ಯಾತ್ರೆ: ಸದಾನಂದ ಶೇಟ್

ಗಂಗಾವತಿ: ಶ್ರಾವಣ ಮಾಸದ ನಿಮಿತ್ಯ ಆಗಸ್ಟ್-೨೧ ಗುರುವಾರದಂದು ನಗರ ಸಂಕೀರ್ತನಾ ಸಮಿತಿ (ಸರ್ವ ಸಮಾಜ) ವತಿಯಿಂದ ಗಂಗಾವತಿ ನಗರದಲ್ಲಿ ಭಜನೆ ಮೂಲಕ ಸಂಕೀರ್ತನಾ ಯಾತ್ರೆ ಬೆಳಿಗ್ಗೆ ೫ ಗಂಟೆಯಿಂದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನ (ಚನ್ನಬಸವವಸ್ವಾಮಿ ತಾತನ ಮಠ) ದಿಂದ ಪ್ರಾರಂಭಗೊಂಡು ಗಾಂಧಿವೃತ್ತ, ಬಸವಣ್ಣ ಸರ್ಕಲ್, ಪಂಪಾನಗರ ಸರ್ಕಲ್ ಮೂಲಕ ಯಾಜ್ಞವಲ್ಕ್ಯ ಮಂದಿರದವರೆಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಸದಾನಂದ ಶೇಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಕೀರ್ತನಾ ಯಾತ್ರೆಯನ್ನು ಶ್ರಾವಣ ಮಾಸದ ನಿಮಿತ್ಯ ಮಾಡಲಾಗುತ್ತಿದ್ದು, ಸಂಕೀರ್ತನ ಯಾತ್ರೆಯ ದಾರಿಯುದ್ದಕ್ಕೂ…

Read More