ನವೆಂಬರ್-೦೯ ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ಹಿರಿಯ ಸಾಹಿತಿ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕೊಪ್ಪಳ ಜಿಲ್ಲಾ ೧೧ನೇಯ ಚುಟುಕು ಸಾಹಿತ್ಯ ಸಮ್ಮೇಳನ

ಗಂಗಾವತಿ: ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನವಂಬರ್-೯ ಭಾನುವಾರದಂದು ಹಿರಿಯ ಸಾಹಿತಿಗಳಾದ ವೀರಣ್ಣ ವಾಲಿಯವರ ಸರ್ವಾಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ೧೧ನೇ ಚುಟುಕು ಸಾಹಿತ್ಯ ಸಮ್ಮೇಳನ ಜರುಗಲಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತಿನ ಗಂಗಾವತಿ ತಾಲೂಕ ಅಧ್ಯಕ್ಷರಾದ ಅಶೋಕ ಗುಡಿಕೋಟಿ ಪ್ರಕಟಣೆಯಲ್ಲಿ ತಿಳಿಸಿದರು.

ಈ ಸಮ್ಮೇಳನವು ಸದರಿ ದಿನದಂದು ಬೆಳಗ್ಗೆ ೧೦ ರಿಂದ ರಾತ್ರಿ ೧೦ ರವರೆಗೆ ಜರುಗಲಿದ್ದು, ಇದರ ದಿವ್ಯಸಾನಿಧ್ಯವನ್ನು ಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಕುಕನೂರು ಶಾಖಾಮಠದ ಡಾ. ಮಹಾದೇವ ಮಹಾಸ್ವಾಮಿಗಳು, ಗಜೇಂದ್ರಗಡ ಕಾಲಜ್ಞಾನಮಠದ ಶ್ರೀ ಶರಣಬಸವೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು, ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿಯವರು ಮಾಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಎಂ.ಜಿ.ಆರ್. ಅರಸ್ ವಹಿಸಲಿದ್ದಾರೆ.

ಈ ಸಮ್ಮೇಳನದ ಗೋಷ್ಠಿ-೧ ರಲ್ಲಿ ಚುಟುಕು ಸಾಹಿತ್ಯ ವೈಶಿಷ್ಟ್ಯತೆ ಮತ್ತು ಅವಲೋಕನ ಮತ್ತು ಗೋಷ್ಠಿ-೨ ರಲ್ಲಿ ಕೊಪ್ಪಳ ಜಿಲ್ಲೆಯ ಅಭಿವೃದ್ಧಿ ಸವಾಲುಗಳು : ಒಂದು ಚಿಂತನೆ ಕುರಿತು ಉಪನ್ಯಾಸ ನಡೆಯಲಿದೆ.

ಈ ಸಮ್ಮೇಳನದ ಆಯೋಜನೆಯನ್ನು ಕೊಪ್ಪಳ ಜಿಲ್ಲಾಧ್ಯಕ್ಷರಾದ ರುದ್ರಪ್ಪ ಭಂಡಾರಿ ಹಾಗೂ ಕಾರ್ಯಕಾರಿ ಮಂಡಳಿಯವರು ಮಾಡಿದ್ದು, ಸಮ್ಮೇಳನದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಕವಿಗಳು ಹಾಗೂ ಕವಯಿತ್ರಿಗಳು ಪಾಲ್ಗೊಳ್ಳಲಿದ್ದು, ಕವಿಗೋಷ್ಠಿಗಳು, ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಈ ಚುಟುಕು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ವೀರಣ್ಣ ವಾಲಿಯವರು ಮೂಲತಃ ಯಲಬುರ್ಗಾ ತಾಲೂಕಿನ ಕರಮುಡಿಯವರು. ಇವರು “ಆಶಾಡ ವಿಭೂತಿಗಳು”. “ಮೌನ ನಿನಾದ”. “ನಮ್ಮ ನೆಲ ನಮ್ಮ ಜನ”. “ಲೇಖನ ಮಾಲೆ” ಸೇರಿದಂತೆ ಅನೇಕ ಕೃತಿಗಳನ್ನು ಸಾಹಿತ್ಯ ಚಂಪಾದಿತ ಚುಟುಕುಗಳನ್ನು ಪ್ರಕಟಿಸಿದ್ದು, ಹಲವಾರು ಲೇಖನಗಳನ್ನು ಪತ್ರಿಕೆಗಳಿಗೆ ಬರೆಯುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಈ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಾಹಿತ್ಯಾಸಕ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಗಂಗಾವತಿ ಚುಟುಕು ಸಾಹಿತ್ಯ ಪರಿಷತ್ತು ಕೋರಿದೆ ಎಂದು ತಿಳಿಸಿದರು. https://aratt.ai/@vishwaroopa_news_blog

ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಚಿತ್ರಕಲಾ ಸ್ಪರ್ಧೆ ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗೆ ಪ್ರಥಮ ಸ್ಥಾನ

ಗಂಗಾವತಿ: ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಮಂಗಳವಾರದಂದು ೧೩ ವರ್ಷದ ಒಳಗಿನ ಮಕ್ಕಳಿಗಾಗಿ ಪೀಸ್ ಪೋಸ್ಟರ್ ಕಾಂಪಿಟೇಶನ್ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಗೆ ನಗರದ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಜಜಾ ಹುಸ್ನಾ ಹಾಗೂ ಕುಶ್ ರಾಜ್ ಪುರೋಹಿತ್ ಪ್ರಥಮ ಸ್ಥಾನ ಪಡೆದುಕೊಂಡರು. ಚಿತ್ರಕಲೆಯಲ್ಲಿ ಪಾಲ್ಗೊಂಡ ಮುದ್ದು ಮಕ್ಕಳು ಟುಗೆದರ್ ವನ್ ವಿಷಯ ಕುರಿತು ತಮ್ಮದೇ ಆದ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ ಬಾಲ್ಯದಲ್ಲಿ ಮಕ್ಕಳಿಗೆ ಚಿತ್ರಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸಾಕಷ್ಟು ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಸ್ಪರ್ಧೆಗೆ ಸಹಕರಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿಗಳಾದ ಜಂಬಣ್ಣ ಐಲಿ, ಖಜಾಂಚಿಗಳಾದ ಶಿವಪ್ಪ ಗಾಳಿ ಹಾಗೂ ಸ್ಪರ್ಧೆಯ ನಿರ್ಣಾಯಕರಾಗಿ ಖ್ಯಾತ ಚಿತ್ರ ಕಲಾವಿದ ಹಾಗೂ ನಿವೃತ್ತ ಶಿಕ್ಷಕ ರಾಘವೇಂದ್ರ ಪುರೋಹಿತ್, ಹಿರಿಯ ವೈದ್ಯರಾದ ಡಾ|| ಜಿ. ಚಂದ್ರಪ್ಪ,. ಡಾ|| ಪಂಪಾಪತಿ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.https://aratt.ai/@vishwaroopa_news_blog

 

ಶಾಹೀನ್ ಲರ್ನ್ ಅಕಾಡೆಮಿ ಶಾಲೆಯಿಂದ ಸಾಹಿತಿ ಪ್ರತಿಮಾ ಹಾಸನ್ ಗೆ ಸನ್ಮಾನ

ಹಾಸನ: ನವೆಂಬರ್‌-1 ರಂದು ಹಾಸನದ ಹಳೆ ಈದ್ಗಾ ಮೈದಾನ, ಹೊಸ ಲೈನ್ ರಸ್ತೆಯಲ್ಲಿರುವ “ಶಾಹೀನ್ ಲರ್ನ್ ಅಕಾಡೆಮಿ ಶಾಲೆ” ಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಸಾಹಿತಿ, ಶಿಕ್ಷಕಿ,ಸಾಮಾಜಿಕ ಚಿಂತಕಿ, ಪತ್ರಕರ್ತೆ ಹಾಗೂ ಸಂಸ್ಥಾಪಕ ಅಧ್ಯಕ್ಷರು, ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಹೆಚ್.ಎಸ್. ಪ್ರತಿಮಾ ಹಾಸನ್ ರವರನ್ನು ಆಹ್ವಾನಿಸಿ ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರನ್ನಾಗಿ ಮಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಡಲಾಗಿತ್ತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕನ್ನಡವನ್ನು ಉಳಿಸುವುದೇ ದೊಡ್ಡ ಸವಾಲ್ ಆಗಿಬಿಟ್ಟಿದೆ. ಅದರ ಉಳಿವಿನತ್ತ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಕರುನಾಡಿನಲ್ಲಿ ವಾಸಿಸುವ ಪ್ರತಿಯೊಬ್ಬರು ತನ್ನ ಜನ್ಮದ ಋಣ ತೀರಿಸಿಕೊಳ್ಳಬೇಕೆಂದರೆ ಕರುನಾಡು ಹಾಗೂ ಕನ್ನಡಕ್ಕೆ ಋಣಿಯಾಗಿರಬೇಕು. ಕನ್ನಡ ನಾಡು ನುಡಿಯನ್ನು ಉಳಿಸಬೇಕಾದರೆ ನಮ್ಮ ಮನೆಗಳಿಂದಲೇ ಕನ್ನಡವನ್ನು ಹೇಳಿಕೊಡುತ್ತ ಮಾತನಾಡಬೇಕು. ಸಾವಿರಾರು ವರ್ಷ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಅಸ್ತಿತ್ವವನ್ನು ಒಳಗೊಂಡಿದೆ. ಕನ್ನಡ ಭಾಷೆಗೆ ಯಾವ ಧರ್ಮವು ಇಲ್ಲ, ಯಾವ ಜಾತಿಯೂ ಇಲ್ಲ. ಕರುನಾಡಿನಲ್ಲಿ ಹುಟ್ಟಿದ ಪ್ರತಿಯೊಬ್ಬರು ಸಹ ಕನ್ನಡವನ್ನು ಮಾತನಾಡುತ್ತಾ ಕನ್ನಡದ ಭಾಷೆಯ ಮಹತ್ವ ತಿಳಿದು, ಕನ್ನಡ ಬರದವರಿಗೆ ಹೇಳಿಕೊಡುವ ಕೆಲಸವನ್ನು ಮಾಡಬೇಕು. ಇಂದು ಈ ಶಾಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡು ಸ್ಪರ್ಧೆಗಳನ್ನು ಏರ್ಪಡಿಸುತ್ತಾ ಮಕ್ಕಳಿಗೆ ಕರ್ನಾಟಕದ ಹಾಗೂ ಕನ್ನಡದ ಮಹತ್ವವನ್ನು ತಿಳಿಸುತ್ತಾ ಶಾಲೆಯ ಅಭಿವೃದ್ಧಿಯನ್ನು ಹೊಂದಲು ಪ್ರಯತ್ನಪಡುತ್ತಿರುವ ಕಾರ್ಯವು ಶ್ಲಾಘನೀಯ ಎಂದು ಪ್ರತಿಮಾ ಹಾಸನ್ ತಿಳಿಸಿದರು.

ಶಾಲೆಯ ಮಕ್ಕಳಿಗೆ ಕರ್ನಾಟಕದ ಹಾಗೂ ಕನ್ನಡದ ಬಾವುಟದ ಚಿತ್ರವನ್ನು ಬಿಡಿಸಲು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ಅತ್ಯುತ್ತಮವಾಗಿ ಬಿಡಿಸಿದಂತ ಮಕ್ಕಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಿ ಎಲ್ಲ ಮಕ್ಕಳಿಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಶಾಲೆಯ ಎಲ್ಲ ಮಕ್ಕಳಿಗೂ ಸಿಹಿಯನ್ನು ಹಂಚಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ನಸರುಲ್ಲಾ ಮುಸಮಿಲ್ ಪಾಷ ಸಂಯೋಜಕರು,ಅಧ್ಯಕ್ಷರು ಇಂಥಿಯಸ್ ಪಾಷ, ಷಮಾ ಅಂಬ್ರಿನ್, ಶಿಕ್ಷಕ ವೃಂದವರು, ಇನ್ನು ಹಲವಾರು ಉಪಸ್ಥಿತರಿದ್ದರು. https://aratt.ai/@vishwaroopa_news_blog

ಆರೋನ್ ಮಿರಜ್‌ಕರ್ ಶಾಲೆಯಲ್ಲಿ ಭವ್ಯ ಮೆರವಣಿಗೆ ಮೂಲಕ ತಾಯಿ ಭುವನೇಶ್ವರಿಯ ಮೆರವಣಿಗೆ

ಗಂಗಾವತಿ: ನವೆಂಬರ್‌-01 ಶನಿವಾರ ಆರೋನ್ ಮಿರಜ್‌ಕರ್ ಹಾಗೂ ನಿವೇದಿತಾ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಬೈಕ್ ರೈಲಿಯ ಮೂಲಕ ಕನ್ನಡ ಮಾತೆಯನ್ನು ವೇದಿಕೆಗೆ ಬರಮಾಡಿಕೊಳ್ಳುವ ಮೂಲಕ, ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನವನ್ನು ಹೆಚ್ಚಿಸಲು ರಂಗೋಲಿಗಳ ಮೂಲಕ ವ್ಯಾಕರಣ ಹಾಗೂ ಕವಿಗಳ ಭಾವಚಿತ್ರಗಳನ್ನು ಮಕ್ಕಳಿಂದ ಬಿಡಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ದೀಪಬೆಳಗಿಸುವುದರ ಮೂಲಕ ಸಂಸ್ಥೆಯ ಕಾರ್ಯದರ್ಶಿಗಳಾದ ರುಬಿನ್ ಮಿರಜ್‌ಕರ್ ಉದ್ಘಾಟಿಸಿ “ಕಲಿಯೋಕೆ ಕೋಟಿ ಭಾಷೆ, ಆದರೆ ಆಡೋಕೆ ಒಂದೇ ಭಾಷೆ ಅದುವೇ ನಮ್ಮ ಕನ್ನಡ ಭಾಷೆ” ಎಂದು ಹೇಳಿ ಕನ್ನಡ ನಾಡು ನುಡಿಯ ಬಗ್ಗೆ ಮಾತನಾಡಿದರು. “ಕನ್ನಡ ಭಾಷೆಯನ್ನುವುದು ಪುರಾತನವಾದದ್ದು, ಅದು ಪ್ರಪಂಚದೆಲ್ಲೆಡೆ ಪಸರಿಸಿ ತನ್ನದೇ ಆದ ಛಾಪನ್ನು ಮೂಡಿಸಿದೆ” ಎಂದು ಶಿಕ್ಷಣ ಸಂಸ್ಥೆಯ ಖಜಾಂಚಿಗಳಾದ ಶ್ರೀಮತಿ ಸುನೀತಾ ಮಿರಜ್‌ಕರ್ ಅವರು ತಿಳಿಸಿದರು.

“ನಾವು ನವೆಂಬರ್-೧ ರಂದು ಮಾತ್ರ ಕನ್ನಡಿಗರಾಗುವ ಬದಲು ಎಲ್ಲಾ ಸಮಯದಲ್ಲೂ ನಂಬರ್ ಒನ್ ಕನ್ನಡಿಗರಾಗುವ ಮೂಲಕ ಕನ್ನಡ ಭಾಷೆಯ ರಕ್ಷಣೆ ನಮ್ಮೆಲ್ಲರ ಹೊಣೆ” ಎಂದು ಆಡಳಿತಾಧಿಕಾರಿಗಳಾದ ಚಂದ್ರಕಾಂತರಾವ್ ಅವರು ಮಾರ್ಗದರ್ಶನ ಮಾಡಿದರು.

“ಕನ್ನಡ ಭಾಷೆಯು ಸಮೃದ್ಧವಾದದ್ದು, ಕನ್ನಡ ಎನ್ನುವುದು ತಾಯಿ ಭಾಷೆಯಾಗಿದೆ. ಕಾವೇರಿಯಿಂದ ಗೋದಾವರಿಯವರೆಗೆ ಕನ್ನಡ ನಾಡು ಹರಡಿದೆ” ಶಾಲೆಯ ಮುಖ್ಯೋಪಾಧ್ಯಾಯರಾದ ಮಂಜುನಾಥ ನಾಯಕ ಹೇಳಿದರು. “ಕರ್ನಾಟಕದ ಏಕೀಕರಣವು ಬಹಾಳ ರೋಚಕವಾದ ಘಟ್ಟವಾಗಿದ್ದು, ಇದರ ಕೊಡುಗೆ ಆಲೂರು ವೆಂಕಟರಾಯರಿಗೆ ಸಲ್ಲುತ್ತದೆ” ಎಂದು ಕರ್ನಾಟಕದ ಏಕೀಕರಣದ ಕುರಿತು ನಿವೇದಿತಾ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಖಾ ಠಾಕೂರ್ ತಿಳಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದಾಸರ, ಸಂತರ ಮತ್ತು ಕವಿಗಳ ವೇಷಭೂಷಣಗಳನ್ನು ತೊಟ್ಟು ಕಾರ್ಯಕ್ರಮಕ್ಕೆ ಮೆರಗನ್ನು ತಂದರು. ವೇದಿಕೆ ಕಾರ್ಯಕ್ರಮದ ನಂತರ ಕನ್ನಡ ನಾಡು, ನುಡಿ, ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳು ಮನಮುಟ್ಟುವಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಉಭಯ ಶಾಲೆಗಳ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು. https://aratt.ai/@vishwaroopa_news_blog

ಹೆಜ್ಜೆ ಗೆಜ್ಜೆ ತಂಡದಿಂದ ರಂಗ ಸಂಭ್ರಮ ಕಾರ್ಯಕ್ರಮ

ಬೆಂಗಳೂರು: ಹೆಜ್ಜೆ ಗೆಜ್ಜೆ ತಂಡ ಕಳೆದ ಐದು ದಶಕಗಳಿಂದ ನಿರಂತರವಾಗಿ ಕಲಾ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮನರಂಜನೆಯೊಂದಿಗೆ ಚಿಂತನೆಗೂ ಚಾಲನೆ ಕೊಡುವಂತಹ ಅನೇಕ ವಿಚಾರಧಾರೆಗಳನ್ನು ಜನರಿರುವಲ್ಲಿಗೆ ಹೋಗಿ ನಾಟಕ ಪ್ರದರ್ಶನ ಮಾಡುತ್ತಾ ಬಂದಿರುತ್ತದೆ. ಸಂಸ್ಥೆ ರಂಗ ಸಂಭ್ರಮ ತಿರುಗಾಟ ಎಂಬ ಶೀರ್ಷಿಕೆಯಡಿ ಅನೇಕ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಂಡಿರುವ ಜಾನಪದ ಕಲಾ ಬಳಗ ಭರತನಾಟ್ಯ ಸಂಸ್ಥೆ ಮತ್ತು ಮೈಸೂರು ರಮಾನಂದರವರ ಹ್ಯಾಗ್ ಸತ್ತ ನಾಟಕವನ್ನು ಅಕ್ಟೋಬರ್-30‌ ಗುರುವಾರ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ನಯನ ರಂಗಮಂದಿರದಲ್ಲಿ ಹೊಸ ರೂಪದಲ್ಲಿ ಪ್ರದರ್ಶಿಸಲಾಯಿತು.

ಸಾಹಿತಿಗಳು ಹಿರಿಯ ರಂಗಕರ್ಮಿಗಳು ಆದ ಡಾ. ಪಾರ್ಶ್ವನಾಥ್ ಅವರು ಕನ್ನಡ ರಂಗಭೂಮಿ ಬೆಳೆದು ಬಂದ ಬಗ್ಗೆ ವಿವರವಾಗಿ ತಿಳಿಸಿದರು. ವಿಶೇಷ ಆಹ್ವಾನಿತರಾಗಿ ಬಂದಿದ್ದ ನರಸಿಂಹಮೂರ್ತಿರವರು ಗೆಜ್ಜೆ ಹೆಜ್ಜೆ ರಂಗ ತಂಡದ ಐದು ದಶಕಗಳ ಹೋರಾಟದ ಬದುಕನ್ನು ಬಣ್ಣದಲ್ಲಿ ಕಳೆದ ರಮಾನಂದರವರು ನಾಟಕ ರಚನೆ ವಿಚಾರ ಸಂಕಿರಣಗಳು ರಂಗ ತರಬೇತಿ ಪ್ರಸಾದನ ಶಿಬಿರ ನಡೆಸುತ್ತಾ ಬಂದಿರುತ್ತಾರೆ.

ಲಕ್ಷ್ಮಿ ನಾರಾಯಣ್ ಪ್ರಾಂಶುಪಾಲರು ಕನ್ನಡ ರಂಗಭೂಮಿಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿ ಜನತೆಗೆ ರಂಗ ಶಿಕ್ಷಣದ ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು. ಅಡಿಷನಲ್ ಡಿಸಿ ಮಂಜುನಾಥ್ ರವರು ಹಾಸ್ಯದ ನಾಟಕಗಳನ್ನು ವಿಭಿನ್ನ ರೀತಿಯಲ್ಲಿ ವಿಡೆಂಬನೆ ಮಾಡುತ್ತಾ ಪ್ರೇಕ್ಷಕರಿಗೆ ಹಾಸ್ಯ ಉಣಬಡಿಸುತ್ತಿದ್ದಾರೆ ರಮಾನಂದರು ಹಾಸ್ಯ ಗಾರುಡಿಗನೇ ಸರಿ ಎಂದು ತಿಳಿಸಿದರು.

ಮೈಸೂರು ರಮಾನಂದ್ ಗೀತಾಂಜಲಿ ಮತ್ತು ಶಿವರಾಂ ವಿಶೇಷವಾದ ಕಿರು ರೂಪಕ ಪ್ರದರ್ಶಿಸಿದರು. ಸಂಗೀತ ಟಿ.ಜಿ.ಹರೀಶ್. ರಂಗಗೀತೆ, ಜಾನಪದ ಗೀತೆ ಭಾವಗೀತೆಗಳ ಸಮ್ಮಿಲನದೊಂದಿಗೆ 4 ಗಂಟೆಗೆ ಪ್ರಾರಂಭವಾದ ರಂಗ ಸಂಭ್ರಮ ರಾತ್ರಿ 9ರವರೆಗೆ ನಡೆಯಿತು. ವಿವಿಧ ಕ್ಷೇತ್ರಗಳ ಗಣ್ಯರಿಗೆ ರಂಗ ಗೌರವ ನೀಡಿ ಗೌರವಿಸಲಾಯಿತು.https://aratt.ai/@vishwaroopa_news_blog

ಭಾರತ್ ವಿಕಾಸ್ ಪರಿಷತ್ ನಡೆಸಿದ ಪ್ರಾಂತಮಟ್ಟದ ಕ್ವಿಜ್ ಕಾಂಪಿಟೇಷನ್‌ನಲ್ಲಿ ಗಂಗಾವತಿಯ ಮಹಾನ್ ಕಿಡ್ಸ್ ಶಾಲೆಯ ಮಕ್ಕಳು ಪ್ರಾದೇಶಿಕ ಮಟ್ಟಕ್ಕೆ ಆಯ್ಕೆ.

ಗಂಗಾವತಿ: ಅಕ್ಟೋಬರ್-೨೬ ಭಾನುವಾರ ರಾಯಚೂರಿನಲ್ಲಿ ನಡೆದ ಭಾರತ್ ವಿಕಾಸ್ ಪರಿಷತ್ ನಡೆಸಿರುವ ಪ್ರಾಂತ ಮಟ್ಟದ ಕ್ವಿಜ್ ಕಾಂಪಿಟೇಶನ್‌ನಲ್ಲಿ ಮಹಾನ್ ಕಿಡ್ಸ್ ಶಾಲೆಯ ೮ನೇ ತರಗತಿಯ ಮಕ್ಕಳಾದ ಸಾತ್ವಿಕ್ ಮನ್ಸಾಲಿ ಹಾಗೂ ಕಾರ್ತಿಕ್ ಕೊಂಡುಕೊಂದಿ ಇವರು ಕ್ವಿಜ್‌ನಲ್ಲಿ ಭಾಗವಹಿಸಿ ಪ್ರಾದೇಶಿಕ (ರೀಜಿನಲ್) ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈ ಮಕ್ಕಳಿಗೆ ಶಾಲೆಯ ಅಧ್ಯಕ್ಷರಾದ ನೇತ್ರಾಜ್ ಗುರುವಿನಮಠ ಶುಭ ಹಾರೈಸಿ, ಈ ಮಕ್ಕಳು ಪ್ರಾದೇಶಿಕ (ರೀಜಿನಲ್) ಮಟ್ಟದಲ್ಲಿ ಗೆದ್ದರೆ ರಾಷ್ಟçಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಸವಿತಾ ಗುರುವಿನಮಠ ಮಾತನಾಡಿ ನಮ್ಮ ಶಾಲೆಯ ಮಕ್ಕಳು ಶೈಕ್ಷಣಿಕವಾಗಿ ಮಾತ್ರವಲ್ಲದೆ ಇನ್ನಿತರ ಚಟುವಟಿಕೆಗಳಲ್ಲಿ ಭಾಗವಹಿಸಿ ಜಿಲ್ಲಾಮಟ್ಟ, ವಿಭಾಗಮಟ್ಟ, ರಾಜ್ಯಮಟ್ಟಕ್ಕೆ ಆಯ್ಕೆ ಆಗುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು.

https://aratt.ai/@vishwaroopa_news_blog

 

ಮಧು ನಾಯ್ಕ್ ಲಂಬಾಣಿ ರಚನೆಯ ಸಿಂಗಾರ ಹಾಡು ಬಿಡುಗಡೆ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಧ್ವನಿ ಸಂಚಿಕೆ ಒಂದರ ಅಂತಿಮ ಹಂತದ (Final Stage) ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಮಧುನಾಯ್ಕಲಂಬಾಣಿಯವರ ರಚನೆಯ ಸಿಂಗಾರ ಹಾಡನ್ನು ಹೊಸಪೇಟೆಯ ಖ್ಯಾತ ಗಾಯಕಿ ಶ್ರೀಮತಿ ಕಮಲಾ ಕುಲಕರ್ಣಿಯವರು ಬಿಡುಗಡೆಗೊಳಿಸಿದರು. ಈ ಹಾಡಿಗೆ ರಾಗ ಸಂಯೋಜನೆ ಮಾಡಿ ಹಾಡಿದ ಗಾಯಕಿ ಶ್ರೀಮತಿ ಲಲಿತ ಸಿದ್ದಿ ಹಾಗೂ ಈ ಹಾಡಿಗೆ ಸಂಗೀತ ಸಂಯೋಜನೆ ಶ್ರೀನಿವಾಸನಾಯ್ಕ, ಡರೆಕ್ಷನ್ ರವಿಕಿರಣ, ಎಡಿಟಿಂಗ್ ಅಭಿಷೇಕ ಎಮ್., ನೃತ್ಯ ಪಲ್ಲವಿ ಎಲ್. ಇವರದ್ದಾಗಿದೆ.

ರಾಜ್ಯದಾದ್ಯಂತ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯ ಅಧ್ಯಕ್ಷರಾದ ಮಧುನಾಯ್ಕ ಲಂಬಾಣಿ, ಗೌರವ ಅಧ್ಯಕ್ಷರು ಮತ್ತು ಲೇಖಕರು ಗೊರೂರು ಅನಂತರಾಜು, ಉಪಾಧ್ಯಕ್ಷರು ವಿರುಪಾಕ್ಷಪ್ಪ ಯು., ಕಾರ್ಯಕ್ರಮದ ಅಧ್ಯಕ್ಷತೆ ಕೆ ಎಸ್ ನಾಯ್ಕ ವಹಿಸಿದ್ದರು.

ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಸದಸ್ಯರಾದ ಆಶಾರಾಣಿ ಬಾಬುರಾವ್ ನಡೋಣಿ, ಕರುನಾಡ ಕಲಿಗಳ ಕ್ರಿಯಾಶೀಲ ಸಮಿತಿ ಅಧ್ಯಕ್ಷರಾದ ಪಿ.ವಿ ವೆಂಕಟೇಶ್, ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಉದೇದಪ್ಪ, ನಿವೃತ್ತ ಪೋಲಿಸ್ ಅಧಿಕಾರಿಯಾದ ಡಿ.ಎಸ್. ಗಜೇಂದ್ರ ನಾಯ್ಕ, ನಭಿಸಾಬ್ ಕುಷ್ಟಗಿ, ಕರೋಕೆ ಹಾಡುಗಾರಿಕೆ ಸ್ಪರ್ಧೆಯ ತೀರ್ಪುಗಾರರಾದ ಕುಬೇರನಾಯ್ಕ, ದಾವಣಗೆರೆ ಹಾಗೂ ಸ್ವರೂಪ ಭಾರದ್ವಾಜ, ಚಿಕ್ಕಮಗಳೂರುರವರು ಹಾಜರಿದ್ದರು.

https://aratt.ai/@vishwaroopa_news_blog

ಹಾಸನದ ಹೆಚ್.ಎಸ್. ಪ್ರತಿಮಾ ಹಾಸನ್ ಗೆ ‘ಕೆಂಪಮ್ಮ ಪ್ರಶಸ್ತಿ’ ಪ್ರಧಾನ

ಹಾಸನ: ಅ: 26 ರಂದು ಅಕ್ಕಮಹಾದೇವಿ ಸಭಾಂಗಣ. ಕನ್ನಡ ಸಾಹಿತ್ಯ ಪರಿಷತ್. ಬೆಂಗಳೂರು ಜಾಗೃತಿ ಟ್ರಸ್ಟ್ ವತಿಯಿಂದ ಹಾಗೂ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ”ಯ ಸಹಯೋಗದಲ್ಲಿ ನಡೆಯುತ್ತಿರುವ “ನಗೆ ಹಬ್ಬ” ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಹಾಸನ ನಗರದ ಶಿಕ್ಷಕಿ. ಸಾಮಾಜಿಕ ಚಿಂತಕಿ. ಸಾಹಿತಿ, ಪತ್ರಕರ್ತರಾದ ಹೆಚ್.ಎಸ್.‌ ಪ್ರತಿಮಾ ಹಾಸನ್‌ ಅವರಿಗೆ “ಕೆಂಪಮ್ಮ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಅವರು ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ’ ಸಂಸ್ಥಾಪಕ ಅಧ್ಯಕ್ಷರಾಗಿ, ಬಹುಮುಖ ಪ್ರತಿಭೆಯಾಗಿ, ಸದಾ ಕ್ರಿಯಾಶೀಲರಾಗಿ, ಜಿಲ್ಲೆ, ರಾಜ್ಯ, ಮಟ್ಟದಲ್ಲಿ ಹಲವಾರು ಸಂಘ ಸಂಸ್ಥೆಯಲ್ಲಿ ಪದಾಧಿಕಾರವನ್ನು ಪಡೆದು ಕಾರ್ಯನಿರ್ವಹಿಸುತ್ತಾ, ನೂರಾರು ಪ್ರಶಸ್ತಿಗಳನ್ನು ಪಡೆದಿರುವ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದು ಗುರುತಿಸಿಕೊಂಡಿರುವ ಮಹಿಳಾ ಸಾಧಕಿಯಾಗಿ, ಮಹಿಳಾ ಹೋರಾಟಗಾರ್ತಿಯಾಗಿ, ಕನ್ನಡ ಪರ ಹೋರಾಟಗಾರ್ತಿಯಾಗಿ, ಸಮಾಜ ಸೇವಕಿಯಾಗಿ, ಸಂಘಟಕಿಯಾಗಿ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾಹಿತಿಕವಾಗಿ ಸೇವೆ ಸಲ್ಲಿಸಿದ್ದು ಹಾಗೂ ಹಲವಾರು ಪ್ರಕಾರಗಳಲ್ಲಿ 12 ಕ್ಕೂ ಹೆಚ್ಚು ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಹಲವು ಕೃತಿ ಬಿಡುಗಡೆಗೆ ಸಿದ್ಧವಾಗುತ್ತಿದ್ದು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಹಾಗೂ ಅಂಕಣಗಾರ್ತಿಯಾಗಿ, ಹಲವಾರು ಪ್ರಕಾರಗಳಲ್ಲಿ ಪತ್ರಿಕೆಗಳಿಗೆ ಬರೆಯುತ್ತಿರುವ ಹೆಚ್. ಎಸ್. ಪ್ರತಿಮಾ ಹಾಸನ್ ರವರನ್ನು ಸಾಹಿತ್ಯ ಕ್ಷೇತ್ರಕ್ಕೆ ಆಯ್ಕೆ ಮಾಡಿ ಪ್ರತಿಷ್ಠಿತವಾದ ಈ ‘ಕೆಂಪಮ್ಮ ಪ್ರಶಸ್ತಿ ‘ ನೀಡಿ ಸನ್ಮಾನಿಸಲಾಯಿತು.

ಎಂ.ಎಸ್. ನರಸಿಂಹಮೂರ್ತಿರವರ “ಬಂಟಿ ಹೇಳಿದ ಕತೆಗಳು” (ಮಕ್ಕಳ ಇವತ್ತು ಹಾಸ್ಯಮಯ ಕತೆಗಳು) ಕೃತಿ ಬಿಡುಗಡೆ ಹಾಗೂ ಅವರ 76 ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಹಾಗೂ ಕಾರ್ಯಕ್ರಮದಲ್ಲಿ ಅಧ್ಯಕ್ಷರು ನಾಗೇಶ್, ವೈ.ವಿ. ಗುಂಡೂರಾವ್, ಹೆಚ್ ಡುಂಡಿರಾಜ್, ಅಪ್ಪಣ್ಣ ಮೇಟಿಗೌಡ, ಹೆಚ್.ಎಂ. ರಘುಕೋಟೆ ಇನ್ನೂ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.https://aratt.ai/@vishwaroopa_news_blog

ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾದ ಐ.ಎಂ.ಎ ಸಮ್ಮೇಳನ: ಡಾ|| ಅಮರೇಶ್ ಪಾಟೀಲ್

ಗಂಗಾವತಿ. ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಗಂಗಾವತಿಯ ಅಮರ್ ಗಾರ್ಡನ್ ಸಭಾಂಗಣದಲ್ಲಿ ಜರುಗಿದ ಭಾರತೀಯ ವೈದ್ಯಕೀಯ ಸಂಘದ 91ನೆಯ ರಾಜ್ಯ ಸಮ್ಮೇಳನ ಅತ್ಯಂತ ಅರ್ಥಪೂರ್ಣವಾಗಿ ಯಶಸ್ವಿಗೊಂಡಿತು ಎಂದು ಸಮ್ಮೇಳನದ ಉಸ್ತುವಾರಿ ವಹಿಸಿಕೊಂಡಿದ್ದ ಡಾ|| ಅಮರೇಶ್ ಪಾಟೀಲ್ ಸಂತಸ ವ್ಯಕ್ತಪಡಿಸಿದರು.

ಅವರು ಅಕ್ಟೋಬರ್‌-26 ರವಿವಾರ ಸಮ್ಮೇಳನದ ಆಶಯ ನುಡಿಗಳನ್ನಾಡಿ, ಕಳೆದ ಶುಕ್ರವಾರದಿಂದ ಆರಂಭಗೊಂಡ ಈ ಸಮ್ಮೇಳನವು ರವಿವಾರದಂದು ಮುಕ್ತಾಯಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಬಂದ ನುರಿತ ತಜ್ಞರಿಂದ ಹಲವು ವೈವಿಧ್ಯಮಯ ವಿಷಯಗಳ ಕುರಿತು ಚಿಂತನ ಮಂಥನ ಹಾಗೂ ಅವರಿಂದ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸುವುದರ ಮೂಲಕ ಕಿರಿಯ ವೈದ್ಯರಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಸಿದ್ದಾರೆ ಎಂದು ತಿಳಿಸಿದ ಅವರು ಸಮ್ಮೇಳನಕ್ಕೆ ಆಗಮಿಸಿದ ಸಂಘದ ಪ್ರತಿನಿಧಿಗಳಿಗೆ ಕೃತಜ್ಞತಾ ಸಮರ್ಪಣೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗಂಗಾವತಿ ವೈದ್ಯಕೀಯ ಸಂಘದ ನೂತನ ಅಧ್ಯಕ್ಷ ಡಾ|| ಮಲ್ಲನಗೌಡ ಪೊಲೀಸ್ ಪಾಟೀಲ್, ಕಾರ್ಯದರ್ಶಿ ಡಾ|| ನಾಗರಾಜ್ ಲೋಕರೆ, ಖಜಾಂಚಿ ಡಾ|| ಅರವಿಂದ ಕೆ., ಸಹಕಾರ್ಯದರ್ಶಿ ಶ್ರೀ ಡಾ|| ಭಾನು ಪ್ರತಾಪ್ ಹೊಸಕೇರಿ ಇವರುಗಳಿಗೆ ರಾಜ್ಯಾಧ್ಯಕ್ಷ ವೀರಭದ್ರಪ್ಪ ಪ್ರಮಾಣವಚನ ಬೋಧಿಸಿದರೆ, ಈ ಹಿಂದಿನ ಅಧ್ಯಕ್ಷ ಡಾ|| ಎ.ಎಸ್ಎನ್‌ ರಾಜು ಹಾಗೂ ಕಾರ್ಯದರ್ಶಿ ಡಾ|| ನಾಗರಾಜ್ ತಮ್ಮ ಅಧಿಕಾರವನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಐ ಎಂ ಎ ಸಂಘದ ಮಾಜಿ ಅಧ್ಯಕ್ಷ ವಿವಿ ಚಿನಿವಾಲರ, ಡಾ|| ಮಲ್ಲನಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

https://aratt.ai/@vishwaroopa_news_blog

ಜೀವನಾನುಭವಗಳು ವ್ಯಕ್ತಿಯ ಶಕ್ತಿ – ಗೊರೂರು ಶಿವೇಶ್

ಜೀವನಾನುಭವಗಳು ವ್ಯಕ್ತಿಯ ಶಕ್ತಿ ಎಂದು ಲೇಖಕ ಗೊರೂರು ಶಿವೇಶ್ ಅಭಿಪ್ರಾಯ ಪಟ್ಟರು‌.

ಅವರು ನಗರದ ಟಾರ್ಗೆಟ್ ಪಿಯು ಕಾಲೇಜಿನಲ್ಲಿ ಕದಂಬ ಸೇನೆ ಆಯೋಜಿಸಿದ ಪದಗ್ರಹಣ, ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಹಾಗೂ ಎಸ್ ಎಲ್ ಭೈರಪ್ಪನವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭೈರಪ್ಪನವರು ಬಾಲ್ಯದಲ್ಲಿ ಸೋದರ ಸೋದರಿಯರು ತಾಯಿ ಕಳೆದುಕೊಂಡು ಅನಾಥರಾದ ಸಂದರ್ಭದಲ್ಲಿ ಹುಟ್ಟಿದ ಜೀವನದ ಪ್ರಶ್ನೆಗಳಿಗೆ ತತ್ವಶಾಸ್ತ್ರದಲ್ಲಿ ಉತ್ತರ ಕಂಡುಕೊಂಡು ಕೃತಿಗಳಲ್ಲಿ ಅವುಗಳನ್ನು ಪರಿಚಯಿಸಿದರು. ಹುಟ್ಟು ಸಾವು ಮತ್ತು ಅಸ್ತಿತ್ವಗಳ ನಿರಂತರ ಶೋಧನೆಯಲ್ಲಿರುವ ವ್ಯಕ್ತಿಗೆ ತತ್ವಶಾಸ್ತ್ರ ಬೆಳಕು ನೀಡಬಹುದಾದರೂ ಸಾಹಿತ್ಯದಲ್ಲಿ ಭಾವಗಳ ಮೂಲಕ ಪರಿಚಯಿಸಿದಾಗ ಅದು ಮನಸ್ಸಿನ ಆಳಕ್ಕೆ ಇಳಿಯುತ್ತದೆ. ತತ್ವಶಾಸ್ತ್ರ ಅಧ್ಯಾಪಕರಾದ ಎಸ್ ಎಲ್ ಬೈರಪ್ಪನವರು ಜೀವನದ ಈ ಕಟು ಕಹಿ ಸತ್ಯಗಳನ್ನು ರಸಾಭಿವ್ಯಕ್ತಿ ಯ ಮೂಲಕ ಪರಿಚಯಿಸಿದ ಕಾರಣಕ್ಕೆ ಅವರು ಭಾರತದಲ್ಲಿ ಜನಪ್ರಿಯ ಕನ್ನಡ ಲೇಖಕರಾಗಿ ಹೊರಹೊಮ್ಮಿದರು ಎಂದು ವಿವರಿಸಿದರು.

ಹಲೋ ಹಾಸನ್ ದಿನಪತ್ರಿಕೆಯ ಸಂಪಾದಕರು ರವಿ ನಾಕಲಗೂಡು ಕಾರ್ಯಕ್ರಮ ಉದ್ಘಾಟಿಸಿದರು. ಕದಂಬ ಸೈನ್ಯ ರಾಜ್ಯಾಧ್ಯಕ್ಷರು ಬೇಕ್ರಿ ರಮೇಶ್, ರಾಜ್ಯ ಉಪಾಧ್ಯಕ್ಷರು ಡಾ. ದೇವನಹಳ್ಳಿ ದೇವರಾಜ್, ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ಉಮೇಶ, ಮಂಡ್ಯ ಜಿಲ್ಲೆ ಎಸಾ ಧ್ಯಕ್ತರು ರಾಮ ಚಿಕ್ಕ ಗೌಡನದೊಡ್ಡಿ, ನಾ ಮಹದೇವಸ್ವಾಮಿ, ಮೈಸೂರು, ನಿವೃತ್ತ ಪ್ರಾಂಶುಪಾಲರು ಹಾಸನ ತಾಲ್ಲೂಕು ಘಟಕದ ಕದಂಬ ಸೈನ್ಯೆ ಅಧ್ಯಕ್ಷರು ಗಣೇಶ್ ಅಂಕ ಪುರ, ಹೊಳೆನರಸೀಪುರ ತಾ. ಅಧ್ಯಕ್ಷರು ಪುಟ್ಟಸ್ವಾಮಿಗೌಡರು, ಅರಕಲಗೂಡು ತಾ ಅಧ್ಯಕ್ಷರು ರವಿಕುಮಾರ್, ಸಕಲೇಶಪುರ ತಾ ಅಧ್ಯಕ್ಷರು ವಿಶ್ವಾಸ್ ಡಿ ಗೌಡ, ಹಾಸನ ಜಿಲ್ಲಾ ಉಪಾಧ್ಯಕ್ಷರು ಯಾಕೂಬ್ ಗೊರೂರು ಸಿರಿಗನ್ನಡ ವೇದಿಕೆ ಹಾಸನ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಸಿರಿಕನ್ನಡ ದಿನಪತ್ರಿಕೆ ಸಂಪಾದಕರು ಎನ್. ಬಿ ಆನಂದ ಪಟೇಲ್ ನೆಲ್ಲಿಗೆರೆ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಈ. ಕೃಷ್ಣೇಗೌಡರು, ನಿವೃತ್ತ ಉಪನ್ಯಾಸಕರು ಹೆಚ್.ಆರ್.ರಂಗಸ್ವಾಮಿ ವೇದಿಕೆಯಲ್ಲಿದ್ದರು.

ಟಾರ್ಗೆಟ್ ಕಾಲೇಜಿನ ಪ್ರಾಂಶುಪಾಲರು ರಾಹುಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಗೊರೂರು ಅನಂತರಾಜು ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಭಾಷಾ ಉಪನ್ಯಾಸಕರು ದೇವರಾಜ್ ಸ್ವಾಗತಿಸಿದರು.

VISHWAROOPA NEWS BLOG

Infinite

Skip to content ↓